ವಾಯುವ್ಯ ಶಿಕ್ಷಕರ ಕ್ಷೇತ್ರ; ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಜಯಭೇರಿ
ಪ್ರಕಾಶ್ ಹುಕ್ಕೇರಿ
ಬೆಳಗಾವಿ: ವಾಯುವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ ಗೆಲುವು ಸಾಧಿಸಿದ್ದಾರೆ.
ಬೆಳಗಾವಿ ನಗರದ ಜ್ಯೋತಿ ಕಾಲೇಜಿನಲ್ಲಿ ಬೆಳಗಾವಿ, ಧಾರವಾಡ, ಹಾವೇರಿ, ಗದಗ 4 ಜಿಲ್ಲೆಗಳನ್ನು ಒಳಗೊಂಡಿರುವ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಬಳಿಕ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಅರುಣ್ ಶಾಹಾಪುರ ಅವರನ್ನು ಸೋಲಿಸುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.
2ನೇ ಸುತ್ತಿನ ಮತಎಣಿಕೆಯಲ್ಲಿ ಗೆಲುವಿನ ಕೋಟಾ ತಲುಪಿರುವ ಪ್ರಕಾಶ್ ಹುಕ್ಕೇರಿ, 20,000 ಮತಗಳ ಪೈಕಿ 11,460 ಮತ ಪಡೆದಿದ್ದಾರೆ. ಅದರಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಶಾಹಾಪುರ 6,450 ಮತಗಳನ್ನು ಪಡೆದಿದ್ದು, ಪ್ರಕಾಶ್ ಹುಕ್ಕೇರಿ 5055 ಮತಗಳನ್ನು ಅಂತರದಿಂದ ಜಯ ದಾಖಲಿಸಿದ್ದಾರೆ.
ಪ್ರಕಾಶ್ ಹುಕ್ಕೇರಿ ಅವರಿಗೆ ಚುನಾವಣಾಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಪ್ರಮಾಣಪತ್ರ ವಿತರಿಸಿದರು. ಈ ವೇಳೆ ಶಾಸಕರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಉಪಸ್ಥಿತರಿದ್ದರು.
Next Story