Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಮ್ಮ ಅಜ್ಞಾನ ಮತ್ತು ಅಸೂಯೆಗೆ ಎಲ್ಲಿಂದ...

ನಿಮ್ಮ ಅಜ್ಞಾನ ಮತ್ತು ಅಸೂಯೆಗೆ ಎಲ್ಲಿಂದ ಮದ್ದನ್ನು ಹುಡುಕಿ ತರಲಿ?: ಪ್ರತಾಪ್‍ಸಿಂಹಗೆ ಎಚ್.ಸಿ.ಮಹದೇವಪ್ಪ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ26 Jun 2022 10:04 PM IST
share
ನಿಮ್ಮ ಅಜ್ಞಾನ ಮತ್ತು ಅಸೂಯೆಗೆ ಎಲ್ಲಿಂದ ಮದ್ದನ್ನು ಹುಡುಕಿ ತರಲಿ?: ಪ್ರತಾಪ್‍ಸಿಂಹಗೆ ಎಚ್.ಸಿ.ಮಹದೇವಪ್ಪ ತಿರುಗೇಟು

ಬೆಂಗಳೂರು, ಜೂ. 26: ‘ಅಭಿವೃದ್ಧಿಗಾಗಿ ಬಿಜೆಪಿ ಪಕ್ಷದಿಂದಲೇ ಸನ್ಮಾನ ಸ್ವೀಕರಿಸಿದ್ದನ್ನು ನೋಡಿಯಾದರೂ ಸಂಸದ ಪ್ರತಾಪ್ ಸಿಂಹ ಸುಳ್ಳು ಹೇಳುವುದನ್ನು ನಿಲ್ಲಿಸಲಿ. ಚುನಾವಣಾ ರಾಜಕಾರಣದ ಆಚೆಗೂ ಜನಪ್ರತಿನಿಧಿ ಆದವರಿಗೆ ಒಂದು ಆರೋಗ್ಯಕರ ಸಂವಾದ ನಡೆಸಬೇಕಾದ ಸೌಜನ್ಯ ಇರುತ್ತದೆ ಎಂಬುದನ್ನು ನಾನು ನಂಬುತ್ತೇನೆ' ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ.

ರವಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ಬಾಯಿಗೆ ಲಂಗು ಲಗಾಮಿಲ್ಲದೇ ಮಾತನಾಡುವ ಸಂಸದ ಪ್ರತಾಪ್‍ಸಿಂಹ, ವಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಹಾಗೂ ಕಾಂಗ್ರೆಸ್ ಸರಕಾರದ ದಾಖಲೆಯ ಅಭಿವೃದ್ಧಿಯ ಮುಂದೆ ತರಗೆಲೆಯಂತೆ ಉದುರಿ ಹೋಗುತ್ತಾರೆ ಎಂಬುದೇ ಸತ್ಯ. ಮೂಲಸೌಕರ್ಯ ಅಭಿವೃದ್ಧಿ ಎಂಬುದು ಇಷ್ಟೊಂದು ರೀತಿಯಲ್ಲಿ ಕಣ್ಣಿಗೆ ಕಾಣುವಂತೆ ಇದ್ದು, ರಸ್ತೆಗಳ ಆರಂಭದ ದಿನಾಂಕ ಮತ್ತು ಯಾರ ನೇತೃತ್ವದಲ್ಲಿ ಆ ರಸ್ತೆಗಳು ಆಗಿದೆ ಎಂಬ ಸಂಗತಿಯು ದಾಖಲಾಗಿದ್ದರೂ ನೀವು ಮತಿ ಭ್ರಮಣೆಗೆ ಒಳಗಾದವರಂತೆ ಮಾತನಾಡಿದರೆ ಅದಕ್ಕೆ ಯಾರು ಹೊಣೆ?' ಎಂದು ಟೀಕಿಸಿದ್ದಾರೆ.

‘ಅಷ್ಟಕ್ಕೂ ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದೀರಿ ಎಂದು ನಿಮ್ಮ ಸರಕಾರದವರೇ ನನ್ನನ್ನು ಕರೆದು ಸನ್ಮಾನಿಸಿದ್ದಾರೆಂಬ ಸಂಗತಿಯನ್ನು ಮರೆಯಬೇಡಿ. ಇನ್ನು ಮೈಸೂರಿಗೆ ಬಂದಾಗಲೆಲ್ಲಾ ಮೈಸೂರನ್ನು ಪ್ಯಾರಿಸ್ ಮಾಡುತ್ತೇನೆ, ಉದಯ್‍ಪುರ ಮಾಡುತ್ತೇನೆ, ಹಾಗೆ ಮಾಡುತ್ತೇನೆ ಹೀಗೆ ಮಾಡುತ್ತೇನೆಂದು ಹೇಳಿ ಬಡವರು ಹಾಗೂ ಯುವ ಜನತೆಯ ಬದುಕಿಗೆ ಮಕ್ಮಲ್ ಟೋಪಿ ಹಾಕಿ ವಂಚಿಸುವ ಭಯಂಕರ ಸುಳ್ಳುಗಳ ಮತ್ತು ಹುಸಿ ಪ್ರಚಾರದ ನಮೋ ರೋಗದಿಂದ ನೀವು ಬಳಲುತ್ತಿದ್ದು ನಿಮ್ಮ ಅಜ್ಞಾನ ಮತ್ತು ಅಸೂಯೆಗೆ ಎಲ್ಲಿಂದ ಮದ್ದನ್ನು ಹುಡುಕಿ ತರಲಿ?' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

‘ಅಭಿವೃದ್ಧಿ ಎಂದರೆ ಸುಳ್ಳು ಪ್ರಚಾರವಲ್ಲ, ಮಾಧ್ಯಮದ ಎದುರು ಮಾಡುವ ಚೀಪ್ ಗಿಮಿಕ್ ಅಲ್ಲ, ಒಣ ಪ್ರತಿಷ್ಟೆಯೂ ಅಲ್ಲ, ಅಭಿವೃದ್ಧಿ ಎಂದರೆ ಜನರನ್ನು ನಯವಾಗಿ ವಂಚಿಸುವುದಲ್ಲ, ಅಭಿವೃದ್ಧಿ ಎಂದರೆ ಅಭಿವೃದ್ಧಿ ಮಾತ್ರ, ಅಭಿವೃದ್ಧಿ ಮತ್ತು ದೂರದೃಷ್ಟಿಗೆ ಯಾವುದೇ ಪರ್ಯಾಯವಿಲ್ಲ' ಎಂದು ಮಹದೇವಪ್ಪ ಇದೇ ಸಂದರ್ಭದಲ್ಲಿ ಸಂಸದ ಪ್ರತಾಪಸಿಂಹ ಅವರಿಗೆ ತಿರುಗೇಟು ನೀಡಿದ್ದಾರೆ.

ಅಭಿವೃದ್ಧಿಗಾಗಿ @BJP4Karnataka ಪಕ್ಷದಿಂದಲೇ ಸನ್ಮಾನ ಸ್ವೀಕರಿಸಿದ್ದನ್ನು ನೋಡಿಯಾದರೂ ಸಂಸದ @mepratap ಸುಳ್ಳು ಹೇಳುವುದನ್ನು ನಿಲ್ಲಿಸಲಿ

ಬಾಯಿಗೆ ಲಂಗು ಲಗಾಮಿಲ್ಲದೇ ಮಾತನಾಡುವ ಮಾನ್ಯ ಸಂಸದರಾದ ಪ್ರತಾಪ್ ಸಿಂಹ ಅವರು ಸಿದ್ದರಾಮಯ್ಯ, ಮಹದೇವಪ್ಪ ಹಾಗೂ ಕಾಂಗ್ರೆಸ್ ಸರ್ಕಾರದ ದಾಖಲೆಯ ಅಭಿವೃದ್ಧಿಯ ಮುಂದೆ ತರಗೆಲೆಯಂತೆ ಉದುರಿ ಹೋಗುತ್ತಾರೆ pic.twitter.com/3NkT2MlsXC

— Dr H.C.Mahadevappa (@CMahadevappa) June 26, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X