ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ | ಸಂತ್ರಸ್ತೆ ಪರ ವಕೀಲೆ ಜೈಸಿಂಗ್ ಗೈರು; ಅರ್ಜಿ ವಿಚಾರಣೆ ಜು.25ಕ್ಕೆ ಮುಂದೂಡಿಕೆ
ಬೆಂಗಳೂರು, ಜೂ.27: ಮಾಜಿ ಸಚಿವ, ಬಿಜೆಪಿ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಯುವತಿ ಪರ ಸುಪ್ರೀಂಕೋರ್ಟ್ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಜು.25ಕ್ಕೆ ಮುಂದೂಡಿದೆ.
ಸಂತ್ರಸ್ತ ಯುವತಿಯು ಸೀಡಿ ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿರುವುದರ ಸಂವಿಧಾನದ ಸಿಂಧುತ್ವ ಹಾಗೂ ಜಾರಕಿಹೊಳಿ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ಸೋಮವಾರ ನಡೆಯಿತು.
ಹಿರಿಯ ವಕೀಲೆ ಜೈಸಿಂಗ್ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಸಂತ್ರಸ್ತೆ ಪರ ವಾದಿಸಲು ಹಾಜರಾಗಿಲ್ಲ. ಹೀಗಾಗಿ, ವಿಚಾರಣೆಯನ್ನು ಮುಂದೂಡಬೇಕೆಂದು ಜೈಸಿಂಗ್ ಅವರ ಸಹೋದ್ಯೋಗಿ ಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಸಮ್ಮತಿಸಿದ ನ್ಯಾಯಪೀಠವು ವಿಚಾರಣೆಯನ್ನು ಮುಂದೂಡಿತು.
Next Story