ಝುಬೈರ್ ಬಂಧನ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನ: ಸಿದ್ದರಾಮಯ್ಯ
ಬೆಂಗಳೂರು, ಜೂ.28: ಆಲ್ಟ್ನ್ಯೂಸ್ ಪತ್ರಕರ್ತ, ಸತ್ಯಶೋಧಕ ಮಹಮ್ಮದ್ ಝುಬೈರ್ ಅವರ ಬಂಧನವು ರಾಷ್ಟ್ರ ಮಟ್ಟದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ.
ಈ ಕುರಿತು ಮಂಗಳವಾರ ಟ್ವೀಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಆಲ್ಟ್ ನ್ಯೂಸ್ ಸ್ಥಾಪಕರಲ್ಲೊಬ್ಬರಾದ ಪತ್ರಕರ್ತ ಮುಹಮ್ಮದ್ ಝುಬೈರ್ ಬಂಧನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಹತಾಶ ಪ್ರಯತ್ನ ಎಂದು ಹೇಳಿದ್ದಾರೆ.
'ಅಘೋಷಿತ ತುರ್ತುಪರಿಸ್ಥಿತಿ ಹೇರಲು ಹೊರಟಿರುವ ನರೇಂದ್ರ ಮೋದಿ ಸರಕಾರದ ವಿರುದ್ಧ ಹೋರಾಡಲು ಪ್ರಜಾಪ್ರಭುತ್ವ ಪ್ರೇಮಿಗಳೆಲ್ಲರೂ ಒಟ್ಟಾಗಬೇಕಾಗಿದೆ' ಎಂದು ಸಿದ್ದರಾಮಯ್ಯ ಟ್ವೀಟಿಸಿದ್ದಾರೆ.
ಆಲ್ಟ್ ನ್ಯೂಸ್ ಸ್ಥಾಪಕರಲ್ಲೊಬ್ಬರಾದ ಪತ್ರಕರ್ತ ಮುಹಮ್ಮದ್ ಜುಬೇರ್ ಬಂಧನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಹತಾಶ ಪ್ರಯತ್ನ.
— Siddaramaiah (@siddaramaiah) June 28, 2022
ಅಘೋಷಿತ ತುರ್ತುಪರಿಸ್ಥಿತಿ ಹೇರಲು ಹೊರಟಿರುವ @narendramodi ಸರ್ಕಾರದ ವಿರುದ್ಧ ಹೋರಾಡಲು ಪ್ರಜಾಪ್ರಭುತ್ವ ಪ್ರೇಮಿಗಳೆಲ್ಲರೂ ಒಟ್ಟಾಗಬೇಕಾಗಿದೆ.#IStandWithZubair
Next Story