PSI ನೇಮಕಾತಿಯಲ್ಲಿ ಹಗರಣ; ಸಮರ್ಪಕ ತನಿಖೆ ನಡೆಸುವಂತೆ ಸಿಐಡಿ ಡಿಜಿಪಿಗೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು, ಜೂ.30: ಪಿಎಸ್ಸೈ ನೇಮಕಾತಿ ಹಗರಣದಲ್ಲಿ ಸಮರ್ಪಕ ತನಿಖೆ ನಡೆಸಿ ಎಂದು ಹೈಕೋರ್ಟ್ ಸಿಐಡಿ ಡಿಜಿಪಿ ಪಿ.ಎಸ್.ಸಂಧು ಅವರಿಗೆ ನಿರ್ದೇಶನ ನೀಡಿದೆ.
ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಜು.7ಕ್ಕೆ ತನಿಖಾ ಪ್ರಗತಿ ವರದಿ ಸಲ್ಲಿಸಬೇಕೆಂದು ಸೂಚನೆ ನೀಡಿದೆ.
ಪಿಎಸ್ಸೈ ನೇಮಕಾತಿ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳು, ಮಧ್ಯವರ್ತಿಗಳಿದ್ದಾರೆ. ಹೀಗಾಗಿ, ಸಮರ್ಪಕ ತನಿಖೆ ನಡೆಯುವ ಅವಶ್ಯಕತೆ ಇದೆ. ಪ್ರಕರಣದಲ್ಲಿ ಸಚಿವರಾಗಿರಲೀ, ಅಧಿಕಾರಿಗಳಾಗಿರಲಿ ಕ್ರಮ ಕೈಗೊಳ್ಳಬೇಕೆಂದು ಸಿಐಡಿ ಡಿಜಿಗೆ ನ್ಯಾಯಪೀಠವು ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದೆ.
Next Story