ಶಿವಮೊಗ್ಗ: ಬಸ್ಸುಗಳ ನಡುವೆ ಮುಖಾಮುಖಿ ಢಿಕ್ಕಿ; 40ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ
ಶಿವಮೊಗ್ಗ: ಬಸ್ಸುಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಇಬ್ಬರ ಚಾಲಕರು ಸೇರಿ 40 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಲಕ್ಕಿನಕೊಪ್ಪ ಗ್ರಾಮದ ಸಮೀಪದ ತೋಟದ ಕೆರೆ ಬಳಿಕ ಘಟನೆ ಸಂಭವಿಸಿದೆ.
ಕೆಎಸ್ಸಾರ್ಟಿಸಿ ಬಸ್ ಮತ್ತು ಕೆಕೆಬಿ ಸಂಸ್ಥೆಯ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಸಂಭವಿಸಿದೆ.ಅಪಘಾತದಲ್ಲಿ ಗಾಯಗೊಂಡವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆಎಸ್ಸಾರ್ಟಿಸಿ ಬಸ್ ಶೃಂಗೇರಿಯಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿತ್ತು. ಖಾಸಗಿ ಬಸ್ ಶಿವಮೊಗ್ಗದಿಂದ ಕೊಪ್ಪಕ್ಕೆ ತೆರಳುತ್ತಿತ್ತು.ತೋಟದಕೆರೆ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿಯಾಗಿವೆ ಎಂದು ತಿಳಿದು ಬಂದಿದೆ.
ಕೆಎಸ್ಸಾರ್ಟಿಸಿ ಬಸ್ ಚಾಲಕ ಮಲ್ಲೇಶ್ (34), ಖಾಸಗಿ ಬಸ್ ಚಾಲಕ ಶ್ರೀಧರ್ ಭಟ್ ಇಬ್ಬರಿಗೂ ಗಂಭೀರ ಗಾಯವಾಗಿದೆ.
ಎರಡೂ ಬಸ್ಸಿನಲ್ಲಿದ್ದ ಸುಮಾರು 40 ಪ್ರಯಾಣಿಕರು ಗಾಯಗೊಂಡಿದ್ದಾರೆ. ಕೂಡಲೆ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಎರಡು ಬಸ್ಸುಗಳ ಮುಂಭಾಗ ನುಜ್ಜುಗುಜ್ಜಾಗಿವೆ ಎಂದು ತಿಳಿದು ಬಂದಿದೆ.
ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ತನಿಖೆ ನಡೆಯುತ್ತಿದೆ.