'ಸಂಭವಾಮಿ ಯುಗೇ ಯುಗೇ...’ ಎಂದು ಫೇಸ್ ಬುಕ್ ಪೋಸ್ಟ್ ಮಾಡಿದ್ದ ಚಂದ್ರಶೇಖರ ಗುರೂಜಿ ಕೊಲೆ ಆರೋಪಿ ಮಹಾಂತೇಶ್
ಹುಬ್ಬಳ್ಳಿ: ಖ್ಯಾತ ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರ ಕೊಲೆ ಪ್ರಕರಣದ ಆರೋಪಿ ಮಹಾಂತೇಶ ಶಿರೂರು ಐದು ದಿನಗಳ ಹಿಂದೆ ತನ್ನ ಫೇಸ್ಬುಕ್ ಪುಟದಲ್ಲಿ ಹಾಕಿದ್ದ ಪೋಸ್ಟ್ ಸದ್ಯ ವೈರಲ್ ಆಗಿದೆ.
ಫೇಸ್ಬುಕ್ ನಲ್ಲಿ ಭಗವದ್ಗೀತೆಯ ಶ್ಲೋಕದ ಪೋಸ್ಟ್ ಅನ್ನು ಹಂಚಿಕೊಂಡಿರು ಆರೋಪಿ, ‘ಅಧರ್ಮ ತಾಂಡವಾಡುತ್ತಿರುವಾಗ ದುಷ್ಟರನ್ನು ನಾಶ ಮಾಡಲು ಮತ್ತು ಧರ್ಮವನ್ನು ಪುನಃ ಸ್ಥಾಪಿಸಲು ನೀನು ಬರುವುದಾಗಿ ವಚನ ನೀಡಿರುವೆ ಪ್ರಭು. ಇನ್ನು ವಿಳಂಬವೇಕೆ ಪ್ರಭುವೇ? ಆದಷ್ಟು ಬೇಗ ಅವತರಿಸು ಪ್ರಭು. ಸಂಭವಾಮಿ ಯುಗೇ ಯುಗೇ...’ ಎಂದು ಬರೆದುಕೊಂಡಿದ್ದಾನೆ.
ಆರೋಪಿಗಳು ಚಂದ್ರ ಶೇಖರ ಗುರೂಜಿ ಅವರನ್ನು ಹುಬ್ಬಳ್ಳಿ ನಗರದ ಉಣಕಲ್ ಸಮೀಪದ ಹೊಟೇಲ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಬಳಿಕ ಇಬ್ಬರು ಪ್ರಮುಖ ಆರೋಪಿಗಳಾದ ಮಹಾಂತೇಶ್ ಶಿರೂರು ಮತ್ತು ಮಂಜುನಾಥನನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಪೊಲೀಸರು ಬಂಧಿಸಿದ್ದಾರೆ.
Next Story