PSI ನೇಮಕಾತಿ ಹಗರಣ: ಮತ್ತೋರ್ವ ಆರೋಪಿ ಗಣಪತಿ ಭಟ್ ಬಂಧನ
ಸಾಂದರ್ಭಿಕ ಚಿತ್ರ
ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ
ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಹೇರೂರು ನಿವಾಸಿ ಗಣಪತಿ ವಿ. ಭಟ್ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ಆರೋಪಿಯು ಪೊಲೀಸ್ ಇಲಾಖೆಯ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ ಇತರ ಅಕ್ರಮ ವ್ಯವಹಾರಗಳಲ್ಲಿ ಸಕ್ರಿಯನಾಗಿದ್ದು,
ಕೆಲವು ಶಾಸಕರಿಗೆ ಬಹಳಷ್ಟು ಆತ್ಮೀಯನಾಗಿದ್ದ ಎಂದು ಹೇಳಲಾಗಿದೆ.
ಸೋಮವಾರ ಬೆಂಗಳೂರಿನಿಂದ ಸಿದ್ಧಾಪುರದ ಹೇರೂರಿಗೆ ಆಗಮಿಸಿದ್ದ ಸಿಐಡಿ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದಿದ್ದರು ಎಂದು ತಿಳಿದು ಬಂದಿದೆ.
Next Story