ಮಡಿಕೇರಿ ತಿಮ್ಮಯ್ಯ ವೃತ್ತದಲ್ಲಿ ಮಂಗಳೂರು ರಸ್ತೆ ಸಂಚಾರ ಬಂದ್
ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ
ಮಡಿಕೇರಿ: ರಸ್ತೆ ಕುಸಿಯುವ ಭೀತಿ ಇರುವುದರಿಂದ ತಿಮ್ಮಯ್ಯ ವೃತ್ತದಲ್ಲಿ ಮಂಗಳೂರು ರಸ್ತೆ ಸಂಚಾರ ಬಂದ್ ಆಗಿದ್ದು, ಬದಲಿ ಮಾರ್ಗದಲ್ಲಿ ಸಂಚರಿಸಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮುನ್ನೆಚ್ಚರಿಕೆಯಾಗಿ ಮಡಿಕೇರಿಯಿಂದ ಮಂಗಳೂರಿಗೆ ತೆರಳುವವರು ಮತ್ತು ಮಂಗಳೂರಿನಿಂದ ಮಡಿಕೇರಿಗೆ ಹೋಗುವವರು ಮೇಕೆರಿ - ತಾಳತ್ತಮನೆ - ಅಪ್ಪಂಗಳ ಮಾರ್ಗವಾಗಿ ಸಾಗುವಂತೆ ಸೂಚನೆ ನೀಡಲಾಗಿದೆ. ತಿಮ್ಮಯ್ಯ ವೃತ್ತದಲ್ಲಿ ಬ್ಯಾರಿಕೇಡ್ ಅಳವಡಿಸಿ ಮಂಗಳೂರು ರಸ್ತೆ ಬಂದ್ ಮಾಡಿರುವುದಾಗಿ ಸಂಚಾರಿ ಪೊಲೀಸರು ತಿಳಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ರಸ್ತೆ ಬಂದ್ ಮಾಡಲಾಗಿದೆ ಎಂದು ಪೊಲೀಸರ ಸ್ಪಷ್ಟನೆ ನೀಡಿದ್ದಾರೆ.