ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಕಂಚು ಗೆದ್ದ ಗುರುರಾಜ ಪೂಜಾರಿಗೆ 8 ಲಕ್ಷ ರೂ. ಪುರಸ್ಕಾರ: ಸಚಿವ ನಾರಾಯಣಗೌಡ
photo credit- twitter
ಬೆಂಗಳೂರು, ಜು.30: ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದಿರುವ ಕನ್ನಡಿಗ ಗುರುರಾಜ ಪೂಜಾರಿ ಅವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅಭಿನಂದನೆ ತಿಳಿಸಿದ್ದಾರೆ.
ಪುರುಷರ 61 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ನಲ್ಲಿ ಕಂಚು ಪಡೆದ ಗುರುರಾಜ ಪೂಜಾರಿ ಅವರಿಗೆ 8 ಲಕ್ಷ ರೂಪಾಯಿ ನಗದು ಪುರಸ್ಕಾರವನ್ನು ನಾರಾಯಣಗೌಡ ಘೋಷಿಸಿದ್ದಾರೆ.
Next Story