ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಡಾ.ಜಿ.ಪರಮೇಶ್ವರ್ ನೇಮಕ
ಬೆಂಗಳೂರು, ಆ. 1: 2023ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಪ್ರತಿಪಕ್ಷ ಕಾಂಗ್ರೆಸ್ ‘ಚುನಾವಣಾ ಪ್ರಣಾಳಿಕೆ, ನೀತಿ(ಪಾಲಿಸಿ) ಮತ್ತು ದೃಷ್ಟಿಕೋನ (ವಿಷನ್) ಸಮಿತಿ'ಯನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಆದೇಶಹೊರಡಿಸಿದ್ದಾರೆ.
ಚುನಾವಣಾ ಪ್ರಣಾಳಿಕೆ ಸಮಿತಿಗೆ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಕೊರಟಗೆರೆ ಕ್ಷೇತ್ರದ ಹಾಲಿ ಶಾಸಕ ಡಾ.ಜಿ.ಪರಮೇಶ್ವರ್ ಅವರನ್ನು ಅಧ್ಯಕ್ಷರನ್ನಾಗಿ, ಮಧು ಬಂಗಾರಪ್ಪ ಹಾಗೂ ಕೆ.ಇ.ರಾಧಾಕೃಷ್ಣ ಅವರನ್ನು ಉಪಾಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಅವರ ಸೂಚನೆ ಹಿನ್ನೆಲೆಯಲ್ಲಿ ನೇಮಕ ಮಾಡಲಾಗಿದೆ ಎಂದು ತಿಳಿಸಲಾಗಿದೆ.
Next Story