ಶಿವಮೊಗ್ಗ | ಗಾಡಿಕೊಪ್ಪದಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ
ಶಿವಮೊಗ್ಗ, ಆ.3: ಬಾಟಲಿ ಮತ್ತು ಕಲ್ಲಿನಿಂದ ತಲೆಗೆ ಹೊಡೆದು ಯುವಕನೋರ್ವನನ್ನು ಹತ್ಯೆಗೈದ ಘಟನೆ ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಡಿಕೊಪ್ಪದ ಗಂಧರ್ವ ಬಾರ್ ಬಳಿ ಕಳೆದ ರಾತ್ರಿ ನಡೆದಿರುವುದು ವರದಿಯಾಗಿದೆ.
ಹೊಸಮನೆ ಬಡಾವಣೆ ನಿವಾಸಿ ಕಿರಣ್ ಅಲಿಯಾಸ್ ಪುಚ್ಚಿ(23) ಹತ್ಯೆಗೊಳಾಗದ ಯುವಕ. ಹೊಸಮನೆ ಬಡಾವಣೆಯ ಪ್ರಜ್ವಲ್ ಮತ್ತು ಗಾಡಿಕೊಪ್ಪದ ಕಾರ್ತಿಕ ಹತ್ಯೆ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ರಾತ್ರಿ ಕಿರಣ್, ಪ್ರಜ್ವಲ್ ಮತ್ತು ಕಾರ್ತಿಕ್ ಜೊತೆಗೆ ಮದ್ಯ ಸೇವನೆ ಮಾಡಿದ್ದಾರೆ. ಈ ವೇಳೆ ಅದ್ಯಾವುದೋ ವಿಚಾರಕ್ಕೆ ಇವರೊಳಗೆ ಜಗಳ ನಡೆದಿದ್ದು, ಕಿರಣ್ ತಲೆಗೆ ಆರೋಪಿಗಳಿಬ್ಬರು ಬಾಟಲಿ ಮತ್ತು ಕಲ್ಲಿನಿಂದ ಹಲ್ಲೆ ಮಾರಣಾಂತಿಕವಾಗಿ ಹೊಡೆದಿದ್ದಾರೆ. ಗಂಭೀರ ಗಾಯಗೊಂಡ ಕಿರಣ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಆರೋಪಿಗಳಾದ ಪ್ರಜ್ವಲ್ ಮತ್ತು ಕಾರ್ತಿಕ್ ವಿರುದ್ಧ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story