ರಾಷ್ಟ್ರಧ್ವಜದಲ್ಲಿನ ಬಣ್ಣವನ್ನೇ ಬದಲಾಯಿಸಲು ಹೊರಟ ಸಿದ್ದರಾಮಯ್ಯ: ನಳಿನ್ ಕುಮಾರ್ ಕಟೀಲ್
ಬೆಂಗಳೂರು, ಆ.8: ಕೇಸರಿ ಕಂಡರೆ ಉರಿದು ಬೀಳುವ ಸಿದ್ದರಾಮಯ್ಯನವರು ಈಗ ದೇಶದ ರಾಷ್ಟ್ರಧ್ವಜದಲ್ಲಿರುವ ವರ್ಣವನ್ನೇ ಬದಲಾಯಿಸಲು ಹೊರಟಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರವಲ್ಲವೇ? ಕೇಸರಿ ಕಂಡರೆ ಅಷ್ಟು ದ್ವೇಷ ಯಾಕೆ ಸಿದ್ದರಾಮಯ್ಯನವರೇ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ: ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಿದ್ರೆಯಲ್ಲಿಯೂ ಕೇಸರಿ ಬಣ್ಣವನ್ನು ದ್ವೇಷಿಸುವ ಸಿದ್ದರಾಮಯ್ಯನವರು ತಮ್ಮ ಭಾಷಣದಲ್ಲಿಯೂ ಅದನ್ನೇ ಮುಂದುವರೆಸಿದ್ದಾರೆ. ರಾಷ್ಟ್ರಧ್ವಜದಲ್ಲಿರುವ ಕೇಸರಿ ವರ್ಣದ ವಿರುದ್ಧದ ಇವರ ದ್ವೇಷವನ್ನು ದೇಶಭಕ್ತ ಬಂಧುಗಳು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
ಕೇಸರಿ ಕಂಡರೆ ಉರಿದು ಬೀಳುವ @siddaramaiah ನವರು ಈಗ ದೇಶದ ರಾಷ್ಟ್ರಧ್ವಜದಲ್ಲಿರುವ ವರ್ಣವನ್ನೇ ಬದಲಾಯಿಸಲು ಹೊರಟಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರವಲ್ಲವೇ?
— Nalinkumar Kateel (@nalinkateel) August 8, 2022
ಕೇಸರಿ ಕಂಡರೆ ಅಷ್ಟು ದ್ವೇಷ ಯಾಕೆ @siddaramaiah ನವರೇ?
Next Story