ಬಳ್ಳಾರಿ; ಸಾರ್ವಜನಿಕರೆದುರೇ ರೈತನ ಮೇಲೆ ಹಲ್ಲೆ, ನಿಂದನೆ ಪ್ರಕರಣ: PSI ಅಮಾನತು
ಬಳ್ಳಾರಿ: ಸಾರ್ವಜನಿಕರೆದುರು ರೈತನೋರ್ವನ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿ ಪಿಎಸ್ಐ ಕೆ.ಹೆಚ್.ಮಣಿಕಂಠರನ್ನು ಅಮಾನತುಗೊಳಿಸಲಾಗಿದೆ.
ಹಲ್ಲೆ, ಜಾತಿ ನಿಂದನೆ, ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಪಿಎಸ್ಐ ಕೆ.ಹೆಚ್ಮಣಿಕಂಠ ವಿರುದ್ಧ ಈರಣ್ಣ ಎಂಬವರು ಕುರಗೋಡು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಕೋಳೂರು ಗ್ರಾಮದಲ್ಲಿ ಬುಧವಾರ ಘಟನೆ ನಡೆದಿದ್ದು, ರೈತನ ಮೇಲೆ ಪಿಎಸ್ಐ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬೆನ್ನಲ್ಲೇ ಪಿಎಸ್ಐ ಅವರನ್ನು ಅಮಾನತು ಮಾಡಿ ಬಳ್ಳಾರಿ ಎಸ್ಪಿ ಸೈದುಲ್ ಅಡಾವತ್ ಅವರು ಆದೇಶ ಹೊರಡಿಸಿದ್ದಾರೆ.
ಘಟನೆ ಕುರಿತು ವಿಚಾರಣೆ ನಡೆಸಿ ವರದಿ ಕೊಡುವಂತೆಯೂ ತೋರಣಗಲ್ಲು ಡಿವೈಎಸ್ಪಿ ಎಸ್.ಎಸ್. ಕಾಶಿ ಅವರಿಗೆ ಸೂಚಿಸಿದ್ದಾರೆ.
Next Story