ಸಚಿವ ಸುಧಾಕರ್ ಭಾಷಣಕ್ಕೆ ಅಡ್ಡಿ ಆರೋಪ: 71 ರೈತರ ವಿರುದ್ಧ FIR
ಸಾಂದರ್ಭಿಕ ಚಿತ್ರ
ಬೆಂಗಳೂರು, ಆ.16:ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದ ವೇಳೆ ಪ್ರತಿಭಟನೆ ನಡೆಸಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಭಾಷಣಕ್ಕೆ ಅಡ್ಡಿಪಡಿಸಿದ ಆರೋಪದಡಿ 71 ರೈತರ ವಿರುದ್ಧ ಇಲ್ಲಿನ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
ದೇವನಹಳ್ಳಿ ತಾಲೂಕು ವ್ಯಾಪ್ತಿ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ಭೂಸ್ವಾಧೀನಕ್ಕೆ ಮುಂದಾಗಿರುವ ಕ್ರಮ ಖಂಡಿಸಿ ಸತತ 134 ದಿನಗಳಿಂದ ನಿರಂತರವಾಗಿ ರೈತರು ಹೋರಾಟ ನಡೆಸುತ್ತಿದ್ದಾರೆ. ಅದೇ ರೀತಿ ನಿನ್ನೆ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲೂ ಹೋರಾಟದ ಭಾಗವಾಗಿ ದೇವನಹಳ್ಳಿಯ ಸರಕಾರಿ ಕಾಲೇಜು ಮೈದಾನದಲ್ಲಿ ರೈತರು ಪ್ರತಿಭಟಿಸಿದರು. ಈ ಹಿನ್ನೆಲೆ ಪೊಲೀಸರು 71 ರೈತರ ವಿರುದ್ಧ ಮೊಕದ್ದಮೆ ದಾಖಲಿಸಿದ್ದಾರೆ.
Next Story