ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ತಂದೆ, ಮಗನ ಬಂಧನ
ಸಾಂದರ್ಭಿಕ ಚಿತ್ರ
ಗದಗ: ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗಾಗಿ ಇತ್ತೀಚೆಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಗದಗ ನಗರದ ಮುನ್ಸಿಪಲ್ ಪಿಯು ಕಾಲೇಜಿನ ಉಪ ಪ್ರಾಂಶುಪಾಲ ಮಾರುತಿ ಸೋನಾವನೆ ಹಾಗೂ ಆತನ ಪುತ್ರ ಸಮೀತ್ ಕುಮಾರ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.
ಪತ್ರಕರ್ತನ ಸೋಗಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಿ ತನ್ನ ಮೊಬೈಲ್ ಮೂಲಕ ಪ್ರಶ್ನೆ ಪತ್ರಿಕೆ ಸೆರೆ ಹಿಡಿದಿದ್ದಾನೆ. ಬಳಿಕ ರಾಜ್ಯದ ಬೇರೆ ಬೇರೆ ಕಡೆ ಪ್ರಶ್ನೆ ಪತ್ರಿಕೆಯ ಫೋಟೊವನ್ನು ಕಳಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.
ಸದ್ಯ ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ತಂದೆ-ಮಗನನ್ನು ಬಂಧಿಸಿ, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಕಡಿಮೆ ಅಂಕದಿಂದಾಗಿ ಕಾನೂನು ಪದವಿಗೆ ಅವಕಾಶವಿಲ್ಲವೆಂದು ಯುವಕ ಆತ್ಮಹತ್ಯೆ
Next Story