ತುಮಕೂರು : ಲಾರಿ ಢಿಕ್ಕಿ ಹೊಡೆದು ಭೀಕರ ಅಪಘಾತ; 9 ಮಂದಿ ಸ್ಥಳದಲ್ಲೇ ಮೃತ್ಯು
14 ಜನರಿಗೆ ಗಾಯ
ತುಮಕೂರು : ಬೆಂಗಳೂರು ಕಡೆಗೆ ಹೋಗುತ್ತಿದ್ದ ಕ್ರೂಸರ್ (trax cruiser) ವಾಹನಕ್ಕೆ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕ್ರೂಸರ್ನಲ್ಲಿದ್ದ ಸುಮಾರು 9 ಮಂದಿ ಸ್ಥಳದಲ್ಲೇ ಮೃತಪಟ್ಟು, 14 ಜನ ಗಾಯಗೊಂಡಿರುವ ಘಟನೆ ಶಿರಾ ತಾಲೂಕಿನ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ ಬೆಳಗಿನ ಜಾವ ನಡೆದಿದೆ.
ಕ್ರೂಸರ್ ನಲ್ಲಿ ಸುಮಾರು 23 ಜನ ಪ್ರಯಾಣ ಮಾಡುತಿದ್ದರು ಎನ್ನಲಾಗಿದ್ದು, ಎಲ್ಲರೂ ಕೂಲಿಕಾರ್ಮಿಕರು, ರಾಯಚೂರು ಜಿಲ್ಲೆಯ ಮಾನ್ವಿಯಿಂದ ಬೆಂಗಳೂರು ಕಡೆ ಪ್ರಯಾಣ ಮಾಡುತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟವರು ಮಾನ್ವಿ ತಾಲೂಕಿನ ಸುಜಾತಾ (25), ಲಕ್ಷ್ಮಿ (13), ವಿನೋದ್ (3), ಕ್ರೂಸರ್ ಚಾಲಕ ಕೃಷ್ಣಪ್ಪ (25) ಎಂದು ತಿಳಿದುಬಂದಿದ್ದು, ಉಳಿದವರ ಹೆಸರನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.
ತುಮಕೂರು ಜಿಲ್ಲೆ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಾಪುರ್ ವಾಡ್ ಹಾಗೂ ಅಡಿಷನಲ್ ಎಸ್ಪಿ ಟಿಜೆ ಉದ್ದೇಶ, ಶಿರಾ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಾಹನವನ್ನು ತೆರವುಗೊಳಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ಮಾಡಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ವಿಷಯ ತಿಳಿದು ತೀವ್ರ ದುಃಖಿತನಾಗಿದ್ದೇನೆ.
— Basavaraj S Bommai (@BSBommai) August 25, 2022
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.