ತುಮಕೂರಿನಲ್ಲಿ ರಸ್ತೆ ಅಪಘಾತ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಮೃತರ ಕುಟುಂಬಕ್ಕೆ, ಗಾಯಾಳುಗಳಿಗೆ ಪರಿಣಾರ
ತುಮಕೂರು : ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಕ್ರೂಸರ್ (trax cruiser)ನಲ್ಲಿದ್ದ ಸುಮಾರು 9 ಮಂದಿ ಸ್ಥಳದಲ್ಲೇ ಮೃತಪಟ್ಟು, 14 ಜನ ಗಾಯಗೊಂಡಿರುವ ಘಟನೆ ಶಿರಾ ತಾಲೂಕಿನ ಬಾಲೆನಹಳ್ಳಿ ಗೇಟ್ ಬಳಿ ಇಂದು ನಡೆದಿದ್ದು, ಘಟನೆಗೆ ಸಂತಾಸ ಸೂಚಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ. ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ. ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ.ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ಸಂತಾಪಗಳು.ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ.ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು: PM
— PMO India (@PMOIndia) August 25, 2022