Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲೈಂಗಿಕ ಕಿರುಕುಳ ಆರೋಪ: ಮುರುಘಾ ಶರಣರ...

ಲೈಂಗಿಕ ಕಿರುಕುಳ ಆರೋಪ: ಮುರುಘಾ ಶರಣರ ವಿರುದ್ಧ FIR

ವಾರ್ತಾಭಾರತಿವಾರ್ತಾಭಾರತಿ27 Aug 2022 12:14 PM IST
share
ಲೈಂಗಿಕ ಕಿರುಕುಳ ಆರೋಪ: ಮುರುಘಾ ಶರಣರ ವಿರುದ್ಧ FIR

ಮೈಸೂರು, ಆ. 27: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ನೊಂದ ವಿದ್ಯಾರ್ಥಿನಿಯರು ಮೈಸೂರಿನಲ್ಲಿ ದೂರು ಸಲ್ಲಿಸಿದ್ದಾರೆ.

ಚಿತ್ರದುರ್ಗದ ಬ್ರುಹನ್ಮಠದ ಡಾ.ಶಿವಮೂರ್ತಿ ಶರಣರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಮೈಸೂರಿನ ನಝರ್ ಬಾದ್ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.

ಮಠದ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹಾಸ್ಟೆಲ್ ನಲ್ಲಿ ವಾಸ್ತವ್ಯ ಹೂಡಿರುವ  ವಿದ್ಯಾರ್ಥಿನಿಯರನ್ನು ಅಲ್ಲಿನ ವಾರ್ಡನ್ ಸ್ವಾಮೀಜಿ ಬಳಿ ಹಣ್ಣು ತೆಗೆದುಕೊಂಡು ಹೋಗುವಂತೆ ಒತ್ತಾಯ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರಿಗೆ ಮತ್ತು ಬರುವಂತೆ ಮಾಡಿ ಸ್ವಾಮೀಜಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು ಎಂದು ಸಂತ್ರಸ್ತೆ ವಿದ್ಯಾರ್ಥಿನಿಯರು ದೂರಿನಲ್ಲಿ ತಿಳಿಸಿದ್ದಾರೆ.

ಸ್ವಾಮೀಜಿಯ ಕಿರುಕುಳ ತಾಳಲಾರದೆ ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರಿಗೆ ಹೋಗಿ ಅಲ್ಲಿಂದ ಮೈಸೂರಿನ ಒಡನಾಡಿ ಸಂಸ್ಥೆಗೆ ಬಂದು ತಮ್ಮ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಅಳಲು ತೋಡಿಕೊಂಡಿದ್ದಾರೆ. ತಕ್ಷಣ ಒಡನಾಡಿಯ ಸ್ಟ್ಯಾನ್ಲಿ ಅವರು ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಿದ್ದಾರೆ. ನಂತರ ಮಕ್ಕಳ ಸಮಿತಿ ಅಧಿಕಾರಿಗಳು ನಝರ್ ಬಾದ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಈ ಸಂಬಂಧ ಫೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:  ಚಿತ್ರದುರ್ಗ: ಕಾರು-ಲಾರಿ ಢಿಕ್ಕಿ; ಮೂವರು ಮೃತ್ಯು, ಮೂವರಿಗೆ ಗಂಭೀರ ಗಾಯ

--------------------------------------------------------

ಈ ಪ್ರಕರಣದಲ್ಲಿ ಭಾಗಿಯಾಗಿರುವ ಸ್ವಾಮೀಜಿ ಪ್ರಭಾವಿ ವ್ಯಕ್ತಿಯಾಗಿದ್ದು, ಹಾಗೂ ಸರ್ಕಾರ ಸ್ಥಳೀಯ ಪೊಲೀಸರಿಂದ ತನಿಖೆ ನಡೆಸದೆ ಉನ್ನತ ಮಟ್ಟದ ಅಧಿಕಾರಿಗಳ ಮೂಲಕ ತನಿಖೆ ನಡೆಸಬೇಕು ಎಂದು ಒಡನಾಡಿಯ ಸಂಸ್ಥೆಯ ಸ್ಟ್ಯಾನ್ಲಿ ಒತ್ತಾಯಿಸಿದ್ದಾರೆ.

ಈ ಸಂಬಂಧ 'ವಾರ್ತಾಭಾರತಿ' ಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಮಠದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಅಲ್ಲಿನ ಸ್ವಾಮೀಜಿಯಿಂದ ಆಗುತ್ತಿರುವ ಲೈಂಗಿಕ ಕಿರುಕುಳವನ್ನು ತಿಳಿಸಿದ್ದಾರೆ. ಆ ಮಕ್ಕಳಿಗೆ ಜೀವ ಭಯ ಇರುವುದರಿಂದ ಅವರು ನಮ್ಮ ಸಂಸ್ಥೆಯಲ್ಲೇ ಆಶ್ರಯ ಪಡೆದಿದ್ದಾರೆ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕಾನೂನು ಕ್ರಮವನ್ನು ತಕ್ಷಣ  ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X