ಕ್ರೀಡಾಪಟುಗಳಿಗೆ ಸರಕಾರಿ ನೌಕರಿಯಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ನಿರ್ಧಾರ: ಸಿಎಂ ಬೊಮ್ಮಾಯಿ
-

ಬೆಂಗಳೂರು, ಆ. 29: ‘ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರಕಾರಿ ನೌಕರಿಯಲ್ಲಿ ಶೇ. 2ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್'ಗೆ ಚಾಲನೆ ನೀಡಿ 2020ನೆ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕ್ರೀಡಾ ರತ್ನ ಹಾಗೂ 2021-22ನೆ ಸಾಲಿನ ‘ಕ್ರೀಡಾ ಪೋಷಕ' ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು.
‘ಮುಂದಿನ ಪ್ಯಾರೀಸ್ ಒಲಿಂಪಿಕ್ಸ್ನಲ್ಲಿ ಭಾಗವಹಿಸಲು ರಾಜ್ಯದ ಆಯ್ದ 75 ಕ್ರೀಡಾಪಟುಗಳಿಗೆ ವಿಶ್ವಮಟ್ಟದ ತರಬೇತಿ ನೀಡಲಾಗುತ್ತಿದೆ. ಇವರಲ್ಲಿ ಹಲವರು ಒಲಿಂಪಿಕ್ಸ್ನಲ್ಲಿ ಪದಕಗಳನ್ನು ಗೆಲ್ಲಬೇಕೆಂಬುದು ಸರಕಾರದ ಗುರಿಯಾಗಿದೆ. ಗ್ರಾಮೀಣ ಮಟ್ಟದಲ್ಲಿಯೂ ಕ್ರೀಡಾ ಸಾಧನೆಗಳಾಗಬೇಕು ಹಾಗೂ ಗ್ರಾಮೀಣ ಕ್ರೀಡೆಗಳನ್ನು ಸರಕಾರದ ವತಿಯಿಂದ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗಿದೆ' ಎಂದು ನುಡಿದರು.
‘ಕಬ್ಬಡಿ, ಕೋಕೋ, ಕಂಬಳ, ಎತ್ತಿನಗಾಡಿ ಸ್ಪರ್ಧೆ ಹೀಗೆ ಹಲವು ಕ್ರೀಡೆಗಳು ಗ್ರಾಮೀಣ ಪ್ರದೇಶದ ಸೊಗಡನ್ನು ಸೂಸುತ್ತದೆ. ಗ್ರಾಮಪಂಚಾಯತಿ, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕ್ರೀಡೆಗಳು ನಡೆಯುತ್ತವೆ. ಗ್ರಾಮಮಟ್ಟದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗುತ್ತಿದೆ ಎಂದು ಅವರು ತಿಳಿಸಿದರು.
ವಿವೇಕಾನಂದ ಯುವಶಕ್ತಿ ಯೋಜನೆ: ‘ಯುವಜನ ಸಬಲೀಕರಣಕ್ಕಾಗಿ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಬಹಳ ಮುಖ್ಯ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಆ.15ರಂದು ಚಾಲನೆ ನೀಡಲಾಗಿದೆ. ಪ್ರತಿ ಗ್ರಾಮದಲ್ಲಿ 30 ಜನರ ಯುವಜನರ ಸಂಘವನ್ನು ಗುರುತಿಸಿ, 7.5ಲಕ್ಷ ರೂ.ನಿಂದ 10 ಲಕ್ಷ ರೂ.ವರೆಗೆ ಯೋಜನೆಗಳನ್ನು ನೀಡಿ, ಸಂಘಕ್ಕೆ 1.5 ಲಕ್ಷ ರೂ.ಅನುದಾನವನ್ನು ಸರಕಾರವೇ ಭರಿಸಿ, ಉತ್ಪನ್ನಗಳ ತಯಾರಿಕೆಗೆ ತರಬೇತಿ, ತಯಾರಿಕೆ ಹಾಗೂ ಮಾರುಕಟ್ಟೆ ಜೋಡಣೆಯನ್ನು ಕಲ್ಪಿಸುವ ಯೋಜನೆಯಾಗಿದೆ' ಎಂದು ಮಾಹಿತಿ ನೀಡಿದರು.
‘ಸ್ವಯಂಉದ್ಯೋಗ ಮಾಡಿ ಇತರರಿಗೆ ಉದ್ಯೋಗ ನೀಡುವ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಿಂದ ಒಂದು ವರ್ಷಕ್ಕೆ ಸುಮಾರು 5ಲಕ್ಷ ಯುವಕರಿಗೆ ಉದ್ಯೋಗ ಸೃಷ್ಟಿಸಿದಂತಾಗುತ್ತದೆ. ಇದು ವಿನೂತನವಾದ ಯೋಜನೆ. ಆರ್ಥಿಕವಾಗಿ, ಸಾಮಾಜಿಕವಾಗಿ ಯುವಕರ ಸಾಮಥ್ರ್ಯವನ್ನು ಹೆಚ್ಚಿಸುವಂತಹ ಕೆಲಸವನ್ನು ಸರಕಾರ ನಿರಂತರವಾಗಿ ಮಾಡುತ್ತದೆ' ಎಂದು ಅವರು ತಿಳಿಸಿದರು.
ಕ್ರೀಡಾ ಕರ್ನಾಟಕವನ್ನಾಗಿಸುವ ಗುರಿ: ‘ಕರಾವಳಿಯ ಕಂಬಳ, ಉತ್ತರ ಕರ್ನಾಟಕದ ಚಕ್ಕಡಿ ಹೊಡೆಯುವ ಸ್ಪರ್ಧೆ, ಕುಸ್ತಿ, ಸೈಕಲ್, ಮೋಟರ್ ಸೈಕಲ್, ಕಾರ್ ರ್ಯಾಲಿಗಳು, ಗಾಲ್ಫ್, ವಾಲಿಬಾಲ್ ಕ್ರೀಡೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಕನ್ನಡದ ಯುವಕರು ಯಶಸ್ಸಿನ ಉತ್ತುಂಗಕ್ಕೆ ಏರಬೇಕು. ಸೀನಿಯರ್ ಒಲಿಂಪಿಕ್ಸ್ ಏರ್ಪಡಿಸಲು ರಾಜ್ಯ ಸರಕಾರ 8 ಕೋಟಿ ರೂ.ನೀಡಿದೆ. ಕರ್ನಾಟಕವನ್ನು ಕ್ರೀಡಾ ಕರ್ನಾಟಕವನ್ನಾಗಿ ಮಾಡುವ ಗುರಿ ಸರಕಾರಕ್ಕಿದೆ. ಕ್ರೀಡೆಯ ತರಬೇತುದಾರರಿಗೆ ಎಲ್ಲ ಸಹಕಾರವನ್ನು ನೀಡಲಾಗುವುದು' ಎಂದು ಅವರು ಘೋಷಿಸಿದರು.
ದೇಶದ ಭವಿಷ್ಯ ಯುವಜನತೆಯ ಮೇಲಿದೆ: ಧ್ಯಾನ್ಚಂದ್ ಅವರು ಒಲಿಂಪಿಕ್ಸ್ನಲ್ಲಿ ಮೂರು ಬಾರಿ ಚಿನ್ನದ ಪದಕ ಗೆದ್ದು, ಭಾರತಕ್ಕೆ ಕೀರ್ತಿ ತಂದವರು. ಹಾಕಿಯ ಜಾದೂಗಾರರಾಗಿದ್ದ ಅವರು ಹಾಕಿಯನ್ನು ಅಗ್ರಮಾನ್ಯ ಸ್ಥಾನಕ್ಕೆ ತಂದವರು. ಧ್ಯಾನ್ಚಂದ್ ಅವರ ಹೆಸರಿನಲ್ಲಿ ‘ಖೇಲ್ ರತ್ನ' ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕರ್ನಾಟಕದಲ್ಲಿ ನೀಡಲಾಗುವ ಏಕಲವ್ಯ ಪ್ರಶಸ್ತಿ, ಕ್ರೀಡಾರತ್ನ ಪ್ರಶಸ್ತಿ, ನಗದು ಪ್ರಶಸ್ತಿ ನೀಡಲಾಗುತ್ತಿದೆ. ಕ್ರೀಡಾಕ್ಷೇತ್ರದಲ್ಲಿನ ತಮ್ಮ ಶ್ರಮ, ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರ ನಿಮ್ಮ ಬೆನ್ನುತಟ್ಟಿ ಪ್ರೋತ್ಸಾಹಿಸುವ ಕೆಲಸವನ್ನು ಮಾಡುತ್ತಿದೆ. ಭಾರತದಲ್ಲಿ ಶೇ.46ರಷ್ಟು ಜನಸಂಖ್ಯೆ ಯುವಜನರಿದ್ದಾರೆ. ಮುಂದಿನ 25 ವರ್ಷಗಳು ಭಾರತದ ಭವಿಷ್ಯ ಈ ಯುವಜನತೆಯ ಮೇಲಿದೆ ಎಂದು ತಿಳಿಸಿದರು.
ಸಾಧಿಸಲು ಧೃಡ ನಿಶ್ಚಯಬೇಕು:‘ಯುವಕರಲ್ಲಿ ಶಿಸ್ತು, ವ್ಯಕ್ತಿತ್ವದಿಂದ ಯಶಸ್ಸು ಬರುತ್ತದೆ. ಕಠಿಣ ಪರಿಶ್ರಮಗಳಿಂದ ಹೆಚ್ಚಿನ ಗುರಿಗಳನ್ನು ಸಾಧಿಸುತ್ತಿರಬೇಕು. ಗೆಲ್ಲಬೇಕೆಂದು ಆಡಬೇಕೇ ಹೊರತು ಸೋಲಬಾರದು ಎಂದು ಆಟವಾಡಬಾರದು. ಗೆಲ್ಲಬೇಕೆಂಬ ಹುರುಪಿನಿಂದ ಸಕಾರಾತ್ಮಕವಾಗಿ ಆಡಬೇಕು, ಆತ್ಮವಿಶ್ವಾಸದಿಂದ ನಿಮ್ಮ ಮೇಲೆ ನಂಬಿಕೆಯಿರಿಸಿ. ಯುವಕರು ಸಾಧನೆಗಳನ್ನು ಮಾಡಿದಾಗ ಹುರಿದುಂಬಿಸಿದರೆ, ಇನ್ನಷ್ಟು ಸಾಧನೆಗಳಿಗೆ ಪ್ರೋತ್ಸಾಹಿಸಿದಂತಾಗುತ್ತದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಕ್ರೀಡಾ ಸಚಿವ ನಾರಾಯಣಗೌಡ, ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದ ರಾಜು, ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆಯುಕ್ತ ಗೋಪಾಲಕೃಷ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.