-

ಮೋದಿ ಎಲ್ಲವನ್ನೂ ಮಾರಾಟ ಮಾಡುತ್ತಿದ್ದಾರೆಯೇ ಹೊರತು ಯಾವುದನ್ನೂ ಸ್ಥಾಪಿಸುತ್ತಿಲ್ಲ: ಎಂ.ಬಿ.ಪಾಟೀಲ್ ವಾಗ್ದಾಳಿ

-

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಎಂ.ಬಿ.ಪಾಟೀಲ್

ತುಮಕೂರು,ಸೆ.03: ಪ್ರಾಥಮಿಕ ಶಾಲೆಯಿಂದ ಐಐಟಿವರೆಗೆ ಸ್ಥಾಪನೆಯಾಗಿರುವುದು ಕಾಂಗ್ರೆಸ್ ಪಕ್ಷದಿಂದಲೇ ಹೊರತು ಬಿಜೆಪಿಯಿಂದಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಎಪ್ಪತ್ತು ವರ್ಷದಲ್ಲಿ ಏನು ಮಾಡಿದೆ ಎಂದು ಪ್ರಶ್ನಿಸುತ್ತಿದ್ದಾರೆ, ಕಾಂಗ್ರೆಸ್ ಮುಂದಾಲೋಚನೆಯಿಂದಲೇ ಹಸಿರು, ಬಿಳಿ ಮತ್ತು ಹಳದಿ ಕ್ರಾಂತಿಯಾಯಿತು, ನವರತ್ನಗಳ ಮೂಲಕ ಉದ್ಯಮ ಸ್ಥಾಪಿಸಿ ಉದ್ಯೋಗ ದೊರಕಿಸಿದೆ ಎಂದರು.

ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ರೈಲ್ವೆ, ಬಂದರು ಎಲ್ಲ ಮಾರಾಟ ಮಾಡುತ್ತಿದ್ದಾರೆಯೇ ಹೊರತು ಯಾವುದನ್ನು ಸ್ಥಾಪಿಸುತ್ತಿಲ್ಲ, ಸಮೃದ್ಧ ಭಾರತ ನಿರ್ಮಾಣಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆಯೇ ಹೆಚ್ಚು ಎನ್ನುವುದನ್ನು ಕಾರ್ಯಕರ್ತರು ಮನೆ ಮನೆಗೆ ತಲುಪಿಸಬೇಕು ಎಂದು ಕರೆ ನೀಡಿದರು.

ಅಧಿಕಾರಕ್ಕೆ ಬರುವ ಮುಂಚೆ ಮೋದಿ ಅವರು ನೀಡಿದ್ದ ಭರವಸೆ ಈಡೇರಿಸಿದ್ದಾರೆಯೇ? ಕಳೆದ ಎಂಟು ವರ್ಷದಲ್ಲಿ ಉದ್ಯೋಗ ಹೆಚ್ಚಳವಾಗುವ ಬದಲಿಗೆ ಉದ್ಯೋಗ ಕಳೆದುಕೊಳ್ಳುವಂತಾಗಿದೆ,ಅವೈಜ್ಞಾನಿಕ ತೀರ್ಮಾನಗಳಿಂದ ದೇಶವನ್ನು ಆರ್ಥಿಕ, ಸಾಮಾಜಿಕ ಸಂಕಷ್ಟಕ್ಕೆ ದೂಡಿದ್ದಾರೆ ಎಂದು ಆರೋಪಿಸಿದರು.

ರೈತರ ಆದಾಯ ದ್ವಿಗುಣವಾಗುವ ಬದಲಿಗೆ ಅವರ ಶೋಷಣೆ ಹೆಚ್ಚಳವಾಗಿದೆ, ವಿಮಾ ಕಂಪನಿಗಳಿಗೆ ಅನುಕೂಲವಾಗುವಂತ ನಿಯಮಗಳಿಂದಾಗಿ 26 ಸಾವಿರ ಕೋಟಿ ಲೂಟಿ ಮಾಡಲಾಗಿದೆ, ನಿರಂತರ ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸಿದ್ದಾರೆ, ದೇಶದಲ್ಲಿ ಜನರು ತೆರಿಗೆ ಹೊರೆಯಿಂದ ಬಳಲುತ್ತಿರುವುದು ಅಚ್ಚೇದಿನ್ ನ ಭಾಗವಾಗಿದೆ. ಬಡವರ ಅನ್ನ ಮೊಸರಿಗೂ ಟ್ಯಾಕ್ಸ್ , ಚಿತಾಗಾರಕ್ಕೂ ಜಿಎಸ್ಟಿ ಹಾಕುವ ಮೂಲಕ ದೇಶದ ಬಡವರು ಬದುಕಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುವ ಮೂಲಕ ದೇಶವನ್ನು ಹಾಳುಗೆಡವುತ್ತಿದೆ,ಬದುಕನ್ನು ಕಟ್ಟಬೇಕಾದ ಮೋದಿ ಅವರು ಕೋಮು ಭಾವನೆ ಕೆರಳಿ, ಧರ್ಮ ಧರ್ಮದ ನಡುವೆ ಅಂತರ ನಿರ್ಮಿಸಿದ್ದಾರೆ ಎಂದು ಹೇಳಿದರು.

ಸಿಲಿಕಾನ್ ವ್ಯಾಲಿ ಇವತ್ತು ಯುಪಿ ಮಾಡಲ್ ಎಂದು ಮುಖ್ಯಮಂತ್ರಿ ಹೇಳುತ್ತಿದ್ದಾರೆ, ಅಭಿವೃದ್ಧಿ ಪಟ್ಟಿಯಲ್ಲಿ ಕೆಳಗಿರುವ ಉತ್ತರ ಪ್ರದೇಶದ ಮಾದರಿ ರಾಜ್ಯಕ್ಕೆ ಅವಶ್ಯಕತೆ ಇದೆಯೇ, ಬೇರೆಯವರು ನಮ್ಮ ಮಾದರಿಯನ್ನು ಅನುಸರಿಸುತ್ತಾರೆ, ನಮಗೇಕೆ ಬೇರೆಯವರ ಮಾದರಿ ಎಂದು ಪ್ರಶ್ನಿಸಿದ ಅವರು,ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದ್ದೇವೆ, ಪ್ರಣಾಳಿಕೆಯಲ್ಲಿ ನೀಡಿದಂತಹ ಭರವಸೆಯನ್ನು ಈಡೇರಿಸಿದ್ದೇವೆ, ನಾಲೆ ಆಧುನೀಕರಣ 1000 ಕೋಟಿ, ಭದ್ರಾ ಮೇಲ್ದಂಡೆ ಯೋಜನೆ ಅನುದಾನ ನೀಡಿದ್ದೇವೆ, ಅಜ್ಜಂಪುರಕ್ಕೆ ಏತ ನೀರಾವರಿ ಯೋಜನೆಗೆ 850 ಕೋಟಿ ಅನುದಾನ ನೀಡಿ, ವಾಣಿ ವಿಲಾಸ ಸಾಗರಕ್ಕೆ ನೀರು ಹರಿಸುವ ಕೆಲಸ ಮಾಡಿದ್ದೇವೆ ಎಂದರು.

ಬಿಜೆಪಿ ಸರಕಾರದಲ್ಲಿ ಯಾವ ಮಂತ್ರಿ ಏನು ಮಾಡುತ್ತಿದ್ದಾರೆ ಎನ್ನುವುದು ಮುಖ್ಯಮಂತ್ರಿಗಳಿಗೆ ಗೊತ್ತಿಲ್ಲ,ಪಶ್ಚಿಮ ಬಂಗಾಳ, ದೆಹಲಿಯಲ್ಲಿ ದಾಳಿ ಮಾಡಿಸುವ ಬಿಜೆಪಿ ಸರಕಾರ ರಾಜ್ಯದಲ್ಲಿ ಏಕೆ ಸಿಬಿಐ, ಐಟಿ, ಇಡಿ ದಾಳಿ ನಡೆಯುತ್ತಿಲ್ಲ, ಇವೆಲ್ಲವನ್ನು ವಿರೋಧ ಪಕ್ಷಗಳನ್ನು ದಮನ ಮಾಡಲು ಬಳಸುತ್ತಿದ್ದಾರೆ.ಕಾನೂನು ಮತ್ತು ಸಂಸದೀಯ ಸಚಿವರ ಮಾಧುಸ್ವಾಮಿ ಅವರೇ ಹೇಳಿರುವಂತೆ ರಾಜ್ಯದಲ್ಲಿ ಸರಕಾರ ಇಲ್ಲ,ಮ್ಯಾನೇಜ್ ಮಾಡುತ್ತಿದ್ದೇವೆ ಎನ್ನುತ್ತಾರೆ, ಪಠ್ಯ ಪರಿಷ್ಕರಣೆ ಹೆಸರಿನಲ್ಲಿ ಭಾವನೆ ಕೆರಳಿಸುವ ಪ್ರಯತ್ನ ಮಾಡುತ್ತಿದೆ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ಕಾಂಗ್ರೆಸ್ ಪಕ್ಷವನ್ನು ಹಿಂದೆಯೂ ದೊಡ್ಡ ಮುಖಂಡರೇ ಹೋದಾಗ ಏನು ಆಗಲಿಲ್ಲ, ಜಾತಿಧರ್ಮ ಬಿಟ್ಟು ಕೆಟ್ಟ ಸರಕಾರ ತೆಗೆಯಲು ತೀರ್ಮಾನಿಸಿದ್ದಾರೆ,ಮುದ್ದಹನುಮೇಗೌಡ ಅವರನ್ನು ಮನವೊಲಿಸುವ ಪ್ರಯತ್ನ ಮಾಡುತ್ತೇವೆ, ಯಾರೇ ಪಕ್ಷ ಬಿಟ್ಟು ಹೋದರೂ ಪಕ್ಷಕ್ಕೆ ಹಾನಿಯಾಗುವುದಿಲ್ಲ. ಮುಂಬರುವ ಲೋಕಸಭೆ ಚುನಾವಣೆ ವೇಳೆಗೆ ದೇಶದಲ್ಲಿ ಏನು ಬೇಕಾದರೂ ಆಗಬಹುದು,ದೇಶದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ, ರಾಜ್ಯದಲ್ಲಿ ಅತಿವೃಷ್ಠಿಯಾಗಿ ಜನರು ಸಂಕಷ್ಟದಲ್ಲಿ ಆದರೆ ಸಚಿವರ ಲೂಟಿಯಲ್ಲಿ ತಲ್ಲೀನರಾಗಿದ್ದಾರೆ, ಈ ಹಿಂದೆ ಆದಂತಹ ಪ್ರವಾಹದಲ್ಲಿ ನಷ್ಟ ಅನುಭವಿಸಿದವರಿಗೆ ಪರಿಹಾರ ನೀಡಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ,ಎಂಎಲ್‍ಸಿ ರಾಜೇಂದ್ರ,ಮಾಜಿ ಶಾಸಕರಾದ ಷಡಕ್ಷರಿ, ಆರ್.ನಾರಾಯಣ್, ರಫೀಕ್ ಅಹಮದ್,ಶಫೀ ಅಹ್ಮದ್,ಬೆಮಲ್ ಕಾಂತರಾಜು,ಬಿ.ಲಕ್ಕಪ್ಪ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್,ರಾಯಸಂದ್ರ ರವಿಕುಮಾರ್, ಶಶಿ ಹುಲಿಕುಂಟೆ ಸೇರಿದಂತೆ ಇತರರಿದ್ದರು. 

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top