ಸಿದ್ದಿಕ್ ಕಪ್ಪನ್ ಬಂಧನ ಪತ್ರಿಕಾ ರಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ತಂದ ಪ್ರಕರಣ: ದಿನೇಶ್ ಗುಂಡೂರಾವ್
ಬೆಂಗಳೂರು, ಸೆ. 9: ‘ಯುಎಪಿಎ ಕಾಯ್ದೆಯಡಿ ಉತ್ತರ ಪ್ರದೇಶ ಸರಕಾರದಿಂದ ಅಕ್ರಮವಾಗಿ ಬಂಧನವಾಗಿದ್ದ ಪತ್ರಕರ್ತ ಸಿದ್ದಿಕ್ ಕಪ್ಪನ್ಗೆ ಸುಪ್ರೀಂ ಜಾಮೀನು ನೀಡಿರುವುದು ಸ್ವಾಗತಾರ್ಹ' ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಗೂ ಗಾಂಧಿನಗರ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಶುಕ್ರವಾರ ಟ್ವೀಟ್ ಮಾಡಿರುವ ಅವರು, ‘ಕಪ್ಪನ್ ಹತ್ರಾಸ್ ಅತ್ಯಾಚಾರ ಘಟನೆಯ ವರದಿಗೆ ತೆರಳಿದ್ದಾಗ ಉತ್ತರ ಪ್ರದೇಶ ಪೊಲೀಸರಿಂದ ಅಕ್ರಮವಾಗಿ ಬಂಧನಕ್ಕೊಳಗಾಗಿದ್ದರು. ಕಪ್ಪನ್ ಬಂಧನ ಪತ್ರಿಕಾ ರಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ತಂದ ಪ್ರಕರಣ' ಎಂದು ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಪತ್ರಕರ್ತ ಸಿದ್ದಿಕ್ ಕಪ್ಪನ್ ಗೆ ಸುಪ್ರೀಂಕೋರ್ಟ್ ಜಾಮೀನು
UAPA ಕಾಯ್ಧೆಯಡಿ ಉ.ಪ್ರದೇಶ ಸರ್ಕಾರದಿಂದ ಅಕ್ರಮವಾಗಿ ಬಂಧನವಾಗಿದ್ದ ಪತ್ರಕರ್ತ ಸಿದ್ದಿಕ್ ಕಪ್ಪನ್ಗೆ ಸುಪ್ರೀಂ ಜಾಮೀನು ನೀಡಿರುವುದು ಸ್ವಾಗತಾರ್ಹ.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) September 9, 2022
ಕಪ್ಪನ್ ಹತ್ರಾಸ್ ಅತ್ಯಾಚಾರ ಘಟನೆಯ ವರದಿಗೆ ತೆರಳಿದ್ದಾಗ ಉ.ಪ್ರದೇಶ ಪೊಲೀಸರಿಂದ ಅಕ್ರಮವಾಗಿ ಬಂಧನಕ್ಕೊಳಗಾಗಿದ್ದರು.
ಕಪ್ಪನ್ ಬಂಧನ ಪತ್ರಿಕಾ ರಂಗದ ಸ್ವಾತಂತ್ರ್ಯಕ್ಕೆ ಧಕ್ಕೆ ತಂದ ಪ್ರಕರಣ pic.twitter.com/QQZmFFJq1w