ರಾಯಚೂರು: ಸಮವಸ್ತ್ರದಲ್ಲಿ ಮಲ ವಿಸರ್ಜನೆ ಮಾಡಿದ್ದಾನೆಂದು ಬಾಲಕನ ಮೇಲೆ ಬಿಸಿನೀರು ಸುರಿದ ಶಿಕ್ಷಕ
ಎಫ್ ಐಆರ್ ದಾಖಲು
ಆರೋಪಿ ಶಿಕ್ಷಕ
ರಾಯಚೂರು: ಶಾಲೆಯಲ್ಲಿ ಸಮವಸ್ತ್ರದಲ್ಲಿ ಮಲ ವಿಸರ್ಜನೆ ಮಾಡಿದ್ದಾನೆ ಎಂದು ಶಿಕ್ಷಕನೋರ್ವ 8 ವರ್ಷದ ಬಾಲಕನ ಮೇಲೆ ಬಿಸಿನೀರು ಸುರಿದ ಘಟನೆ ರಾಯಚೂರಿನ ಮಸ್ಕಿ ತಾಲೂಕಿನಲ್ಲಿ ವರದಿಯಾಗಿದೆ.
ಮಸ್ಕಿಯ ಸಂತೆಕೆಲ್ಲೂರು ಗ್ರಾಮದಲ್ಲಿರುವ ಶಾಲೆಯ 2ನೇ ತರಗತಿಯ ವಿದ್ಯಾರ್ಥಿ ಅಖಿತ್ (8) ದೇಹದ ಶೇ.40ರಷ್ಟು ಭಾಗ ಬೆಂದು ಗಂಭೀರ ಗಾಯಗಳಾಗಿದ್ದು, ಮಗುವನ್ನು ಲಿಂಗಸುಗೂರು ತಾಲೂಕು ಅಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕಳೆದ ಸೆಪ್ಟಂಬರ್ 2ರಂದು ಘಟನೆ ನಡೆದಿದ್ದು, ನಿನ್ನೆ (ಗುರುವಾರ) ಪ್ರಕರಣ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಈ ಸಂಬಂಧ ಇಂದು (ಶುಕ್ರವಾರ) ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದರು.
Next Story