Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ...

ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಶಾಸಕ ಸಾ.ರಾ. ಮಹೇಶ್

ವಾರ್ತಾಭಾರತಿವಾರ್ತಾಭಾರತಿ11 Sept 2022 9:16 PM IST
share
ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಶಾಸಕ ಸಾ.ರಾ. ಮಹೇಶ್

ಮೈಸೂರು: ಜಿಲ್ಲಾಧಿಕಾರಿಯಾಗಿದ್ದ ವೇಳೆ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ಹೇಳಿಕೆ ನೀಡಿದ್ದಾರೆಂದು ಶಾಸಕ ಸಾ.ರಾ. ಮಹೇಶ್ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ ವಿರುದ್ಧ 1 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಹೇಳಿದರು.

ನಗರದ ತಮ್ಮ ಕಚೇರಿಯಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ವಕೀಲ ಎಸ್.ಅರುಣ್‍ಕುಮಾರ್ ಮೂಲಕ ನಗರದ ಜಿಲ್ಲಾ ಸೆಷೆನ್ಸ್ ನ್ಯಾಯಾಲಯದಲ್ಲಿ ರೋಹಿಣಿ ಸಿಂಧೂರಿ ವಿರುದ್ಧ ದಾವೆ ಹೂಡಿರುವುದಾಗಿ ತಿಳಿಸಿದರು.

ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಐಶಾರಾಮಿ ಜೀವನ ನಡೆಸಲು ಜಿಲ್ಲಾಧಿಕಾರಿ ನಿವಾಸದಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿ ಸರ್ಕಾರದ ಹಣ ದುರುಪಯೋಗ ಮಾಡಿಕೊಂಡಿದ್ದರು. ಕೋವಿಡ್ ಸಂದರ್ಭದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಿಲ್ಲ. ಬೇಜವಾಬ್ದಾರಿ ತೋರಿದ ಕಾರಣ ಸಾವಿರಾರು ಜನರು ತಮ್ಮ ಕುಟುಂಬವನ್ನು ಕಳೆದುಕೊಂಡರು. ಇದನ್ನು ಮುಚ್ಚಿಡಲು ಕೋವಿಡ್ ಟೆಸ್ಟಿಂಗ್ ಕಡಿಮೆ ಮಾಡಿದರಲ್ಲದೇ ಸಾವಿನ ಸಂಖ್ಯೆಯನ್ನು ಮುಚ್ಚಿಟ್ಟರು. ಸರ್ಕಾರದ ಮುಖ್ಯಕಾರ್ಯದರ್ಶಿಗಳು ಮೈಸೂರಿಗೆ ಭೇಟಿ ನೀಡಿ ಪರಿಶೀಲಿಸದ ಬಳಿಕ ಅವರ ವರ್ಗಾವಣೆಯಾಯಿತು. ನಾವು ಅಮಾನತ್ತಿಗೆ ಒತ್ತಾಯ ಮಾಡಿದ್ದೆವು ಎಂದರು.

ನಂತರ ಹಳೇ ದಿನಾಂಕಗಳಲ್ಲಿ ನನ್ನ ವಿರುದ್ಧ ಕೆಲವು ವ್ಯಕ್ತಿಗಳಿಂದ ಅರ್ಜಿ ಪಡೆದು, 'ಸಾರಾ ಮಹೇಶ್ ರಾಜಕಾಲುವೆ, ಗೋಮಾಳ ಒತ್ತುವರಿ ಮಾಡಿಕೊಂಡಿದ್ದಾರೆ. ಅವರು ಜೈಲಿಗೆ ಹೋಗುವುದು ಗ್ಯಾರಂಟಿ' ಎಂದು ಹೇಳಿಕೆ ನೀಡಿದ್ದರು. ಇದು ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗಿತ್ತು. ಇದು ನನ್ನ ರಾಜಕೀಯ ಜೀವನಕ್ಕೆ ಕುಂದುಂಟಾಗುವ ಹೇಳಿಕೆ ಆದ ಕಾರಣ ನಾನು ನನ್ನ ವಕೀಲರ ಮೂಲಕ ಅವರಿಗೆ ನೋಟೀಸ್ ನೀಡಿದ್ದೆ ಎಂದರು.

ವಕೀಲ ಅರುಣ್ ಕುಮಾರ್ ಮಾತನಾಡಿ, ಒಬ್ಬ ಐಎಎಸ್ ಅಧಿಕಾರಿ ತಮಗೆ ಬಂದ ದೂರಿನ ವಿಚಾರದ ಬಗ್ಗೆ ಗೌಪ್ಯತೆ ಕಾಪಾಡುವ ಬದಲು ಸಾರ್ವಜನಿಕವಾಗಿ ಮಾತನಾಡಿದ್ದು ಸಂವಿಧಾನ ಬಾಹಿರ. ಇದು ಶಾಸಕ ಸಾ.ರಾ.ಮಹೇಶ್ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನವಾಗಿದ್ದು, ಈ ಕಾರಣದಿಂದ ಅವರಿಗೆ ನೋಟೀಸ್ ನೀಡಲಾಗಿತ್ತು. ಸಾಮಾಜಿಕ ಜಾಲತಾಣದ ಧ್ವನಿ ತಮ್ಮದೇ ಎಂದು ಸಿಂಧೂರಿ ಒಪ್ಪಿಕೊಂಡಿದ್ದಾರೆ. ಹೀಗಾಗಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ಮಾಜಿ ಮಹಾಪೌರರಾದ ಲಿಂಗಪ್ಪ, ಸೋಮಣ್ಣ, ಮುಖಂಡರಾದ ಚಲುವೇಗೌಡ, ಶೈಲೇಂದ್ರ, ಕೃಷ್ಣಪ್ಪ, ರವಿಚಂದ್ರೇಗೌಡ, ಎಂ.ಪಿ.ಕುಮಾರ್, ಪ್ರಕಾಶ್ ಪ್ರಿಯದರ್ಶನ್ ಇನ್ನಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X