'ಕನ್ನಡ ರಾಜ್ಯೋತ್ಸವ ಪ್ರಶಸ್ತಿ' ಆಯ್ಕೆಗೆ ಸಲಹಾ ಸಮಿತಿ ರಚನೆ
ಬೆಂಗಳೂರು, ಸೆ. 15: ಪ್ರಸಕ್ತ ಸಾಲಿನ 'ಕನ್ನಡ ರಾಜ್ಯೋತ್ಸವ ಪ್ರಶಸ್ತಿ'ಗೆ ಅರ್ಹ ಸಾಧಕರನ್ನು ಆಯ್ಕೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಲಾಗಿದೆ.
ಸಮಿತಿಯಲ್ಲಿ ಖ್ಯಾತವೈದ್ಯೆ ಡಾ. ವಿಜಯಲಕ್ಷ್ಮೀ ಬಾಳೇಕುಂದ್ರಿ, ಚಿತ್ರ ನಿರ್ದೇಶಕ ಪಿ.ಶೇಷಾದ್ರಿ, ಬಾಬುರಾವ್ ಮುಡಬಿ, ಮೋಹನ್ ಆಳ್ವ ಸೇರಿದಂತೆ ವಿವಿಧ ಕ್ಷೇತ್ರಗಳ 30 ಕ್ಕೂ ಮಂದಿ ಸದಸ್ಯರನ್ನು ಆಯ್ಕೆ ಸಮಿತಿ ಗೆ ನೇಮಕ ಮಾಡಲಾಗಿದೆ.
ಸಾಹಿತ್ಯ ಅಕಾಡೆಮಿ, ನಾಟಕ ಅಕಾಡೆಮಿ ಸೇರಿದಂತೆ ವಿವಿಧ ಅಕಾಡೆಮಿಗಳ ಪದನಿಮಿತ್ತ ಸದಸ್ಯರು ಸಮಿತಿಯಲ್ಲಿದ್ದು, ಸಂಸ್ಕೃತಿ ಸಚಿವ ಇಲಾಖೆಯ ಕಾರ್ಯದರ್ಶಿ ಸದಸ್ಯರಾಗಿದ್ದಾರೆ ಎಂದು ತಿಳಿಸಲಾಗಿದೆ.
Next Story