ಖನಿಜ ಸಂಪತ್ತು ಪತ್ತೆಗೆ ವೈಮಾನಿಕ ಸಮೀಕ್ಷೆ: ಸಚಿವ ಆಚಾರ್ ಹಾಲಪ್ಪ
ಬೆಂಗಳೂರು, ಸೆ.20: ರಾಜ್ಯದಲ್ಲಿ ಖನಿಜ ಸಂಪತ್ತುಗಳ ಪತ್ತೆ ಹಚ್ಚುವಿಕೆಗೆ ಕೇಂದ್ರ ಸರಕಾರ ವೈಮಾನಿಕ ಸಮೀಕ್ಷೆ ಕೈಗೊಂಡಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಆಚಾರ್ ಹಾಲಪ್ಪ ತಿಳಿಸಿದ್ದಾರೆ.
ಮಂಗಳವಾರ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, 2017-18ನೆ ಸಾಲಿನಲ್ಲಿ ಕೋಲಾರ ಜಿಲ್ಲಾ ವ್ಯಾಪ್ತಿಯಲ್ಲಿ ಹಾಗೂ 2018 ರಿಂದ 21ರ ವರೆಗೆ ಶಿವಮೊಗ್ಗ ವ್ಯಾಪ್ತಿಯಲ್ಲಿ ಒಟ್ಟು 5 ಸಂಭವನೀಯ ಖನಿಜ ನಿಕ್ಷೇಪ ಪ್ರದೇಶಗಳನ್ನು ಗುರುತಿಸಿದೆ. ಹೆಚ್ಚಿನ ಖನಿಜಾನ್ವೇಷಣೆ ಕೈಗೊಳ್ಳಲು ಶಿಫಾರಸ್ಸು ಮಾಡಲಾಗಿದೆ ಎಂದು ಅವರು ಹೇಳಿದರು.
Next Story