ಎಸ್ಡಿಪಿಐ ಮುಸ್ಲಿಮರ ಪಕ್ಷವಲ್ಲ: ದೇವನೂರ ಪುಟ್ಟನಂಜಯ್ಯ
-

ಬೆಂಗಳೂರು, ಸೆ. 26: ಎಸ್ಡಿಪಿಐ ಮುಸ್ಲಿಮರ ಪಕ್ಷವಲ್ಲ. ಇಲ್ಲಿ ಹಿಂದೂಗಳು ಸೇರಿದಂತೆ ಎಲ್ಲ ವವರ್ಗದ ಜನರಿದ್ದಾರೆ. ಆದರೂ, ಉದ್ದೇಶ ಪೂರಕವಾಗಿ ಮುಸ್ಲಿಮರ ಪಕ್ಷವೆಂದು ಬಿಂಬಿಸಲಾಗುತ್ತಿದೆ ಎಂದು ಎಸ್ಡಿಪಿಐ ರಾಜ್ಯ ಉಪಾಧ್ಯಕ್ಷ ದೇವನೂರ ಪುಟ್ಟನಂಜಯ್ಯ ಬೇಸರ ವ್ಯಕ್ತಪಡಿಸಿದರು.
ಇತ್ತೀಚಿಗೆ ಪಿಎಫ್ಐ ಹಾಗೂ ಎಸ್ಡಿಪಿಐ ಕಚೇರಿ ಮತ್ತು ನಾಯಕರ ಮನೆ ಮೇಲೆ ನಡೆದ ಎನ್ಐಎ ದಾಳಿ ಖಂಡಿಸಿ ಸೋಮವಾರ ನಗರದ ಎಸ್ಡಿಪಿಐ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಸ್ಡಿಪಿಐ ಹುಟ್ಟುಹಾಕಿದ್ದು ಮುಸ್ಲಿಮರೇ ಇರಬಹುದು. ಆದರೆ, ಇಲ್ಲಿನ ಹಿಂದೂಗಳು ಸೇರಿದಂತೆ ಎಲ್ಲರಿಗೂ ಅವಕಾಶ ಇದೆ. ಪ್ರಜಾಪ್ರಭುತ್ವ ಮೇಲೆ ಅಪಾರ ನಂಬಿಕೆ ಇಡಲಾಗಿದೆ ಎಂದರು.
ನಾನು ನಿವೃತ್ತ ಡಿಡಿಪಿಐ, ಈ ಪಕ್ಷದೊಳಗೆ ಯಾರೂ ಬೇಕಾದರೆ ರಾಜ್ಯಾಧ್ಯಕ್ಷ ಆಗಬಹುದು. ದೇಶವನ್ನು ಭಯ ಮತ್ತು ಹಸಿವು ಮುಕ್ತ ಮಾಡುವುದೇ ನಮ್ಮ ಪಕ್ಷದ ಪ್ರಮುಖ ಗುರಿಯಾಗಿದೆ ಎಂದ ಅವರು, ಎಸ್ಡಿಪಿಐ ಮತ್ತು ಪಿಎಫ್ಐ ಎಂದೂ ಸಹ ಧರ್ಮಕ್ಕಾಗಿ ಹೋರಾಟ ಮಾಡಿಲ್ಲ.ಬದಲಾಗಿ, ರಾಷ್ಟ್ರ ಕಟ್ಟುವ, ಜೋಡಿಸುವ ಕಾಯಕದಲ್ಲಿ ತೊಡಗಿದ್ದಾರೆ ಎಂದು ಅವರು ಹೇಳಿದರು.
ಬಿಜೆಪಿಯವರು ಹಿಂದೂ ರಾಷ್ಟ್ರ ಮಾಡುತ್ತಿಲ್ಲ. ಬದಲಿಗೆ ಬ್ರಾಹ್ಮಣ್ಯ ರಾಷ್ಟ್ರ ಮಾಡುತ್ತಿದ್ದಾರೆ. ಹಿಂದೂ ಹೆಸರಿನಲ್ಲಿ ಯುವಕರನ್ನು ಎತ್ತುಕಟ್ಟುತ್ತಾರೆ. ಅಲ್ಲದೆ, ಸಂಘಪರಿವಾರ ಪ್ರಮುಖ ನಾಯಕರ ಮಕ್ಕಳು ಯಾರೋ ಸಹ ಇಂತಹ ಚಟುವಟಿಕೆಗಳಲ್ಲಿ ಇಲ್ಲ. ಬಡವರ ಮತ್ತು ಶೋಷಿತ ವರ್ಗದವರನ್ನು ಬಳಕೆ ಮಾಡಲಾಗುತ್ತಿದೆ ಎಂದು ಟೀಕಿಸಿದರು.
ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ಮಾತನಾಡಿ, ಆರೆಸ್ಸೆಸ್ ನಾಯಕರು ಹಲವಾರು ಆಯುಧ ಇಟ್ಟಿದ್ದು, ಬಡವರ ಮಕ್ಕಳ ಕೈಗೆ ಆಯುಧ ಕೊಟ್ಟಿದ್ದಾರೆ. ಎಸ್ಡಿಪಿಐ ಒಂದೇ ಒಂದು ದೇಶ ವಿರೋಧಿ ಕೆಲಸ ಮಾಡಿಲ್ಲ. ಆದರೂ ಎನ್ಐಎ ಅಧಿಕಾರಿಗಳು ಕಚೇರಿ ಬೀಗ ಒಡೆದು ದಾಳಿ ಮಾಡಿದ್ದಾರೆ ಎಂದು ಆರೋಪಿಸಿದರು.
ಎಸ್ಡಿಪಿಐ ಶೇ.98ರಷ್ಟು ಪ್ರಕರಣಗಳನ್ನು ಕೋರ್ಟ್ ಖುಲಾಸೆಗೊಳಿಸಿದೆ. ಆದರೆ, ಆರೆಸ್ಸೆಸ್ ಬಾಂಬ್ ಸ್ಫೋಟದ ಕೆಲಸ ಮಾಡಿದೆ. ಆರೆಸ್ಸೆಸ್ ಮಲೆಗಾಂವ್ ಸ್ಫೋಟ ಸೇರಿದಂತೆ ಹಲವು ಸ್ಫೋಟ ಮಾಡಿದೆ ಎಂದ ಅವರು, ಎಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಂಡು ವಿರೋಧಿಗಳನ್ನು ಹಣಿಯುತ್ತಿದೆ. ಬಿಜೆಪಿಗೆ ಕಾಂಗ್ರೆಸ್ ಕೂಡ ಸಹಾಯ ಮಾಡುತ್ತಿದೆ ಎಂದು ಅವರು ದೂರಿದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.