Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನಗೆ ಮಾನಸಿಕವಾಗಿ ಹಿಂಸೆ ಆಗುತ್ತಿದೆ:...

ನನಗೆ ಮಾನಸಿಕವಾಗಿ ಹಿಂಸೆ ಆಗುತ್ತಿದೆ: ಸಿಬಿಐ ದಾಳಿ ಬಗ್ಗೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ28 Sept 2022 11:09 PM IST
share
ನನಗೆ ಮಾನಸಿಕವಾಗಿ ಹಿಂಸೆ ಆಗುತ್ತಿದೆ: ಸಿಬಿಐ ದಾಳಿ ಬಗ್ಗೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

ಬೆಂಗಳೂರು: 'ಸಿಬಿಐ ಅಧಿಕಾರಿಗಳು ಕನಕಪುರದ ತಹಶೀಲ್ದಾರ್ ಅವರನ್ನು ಕರೆದುಕೊಂಡು ಹೋಗಿ ಊರಿನಲ್ಲಿರುವ ನನ್ನ ಆಸ್ತಿಗಳನ್ನು ಪರಿಶೀಲನೆ ಮಾಡಿದ್ದಾರೆ ಎಂದು ನನ್ನ ಸಿಬ್ಬಂದಿ ದೂರವಾಣಿ ಮೂಲಕ ತಿಳಿಸಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ' ನಾನು ಈಗಾಗಲೇ ಅವರು ಕೇಳಿದ ದಾಖಲೆಗಳನ್ನು ಕೊಟ್ಟಿದ್ದೆ. ಆದರೂ ಕನಕಪುರ, ದೊಡ್ಡಆಲಹಳ್ಳಿ, ಕೋಡಿಹಳ್ಳಿ ಮನೆ ಹಾಗೂ ಜಮೀನಿನ ಪರಿಶೀಲನೆ ಮಾಡಿದ್ದಾರೆ. ನಾನು ಕಾನೂನಿಗೆ ಗೌರವ ನೀಡುತ್ತೇನೆ. ಬೇರೆಯವರ ವಿರುದ್ಧ ಅಕ್ರಮ ಆಸ್ತಿ ಆರೋಪ ಇದ್ದರೂ ಕೇವಲ ನನ್ನ ಪ್ರಕರಣಕ್ಕೆ ಮಾತ್ರ ಸಿಬಿಐ ತನಿಖೆಗೆ ಅನುಮತಿ ನೀಡಿದ್ದಾರೆ.  ಅವರ ಪ್ರಕರಣದ ಬಗ್ಗೆ ಎಸಿಬಿ ತನಿಖೆ ಮಾಡಿದರೆ ನನಗೆ ಸಿಬಿಐ ತನಿಖೆ' ಎಂದು ಅಸಮಾಧಾನ ವ್ಯಕ್ತಪಡಿಸಿದರು.

'ನಾನು ನಿಮ್ಮ ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ, ಈಗ ಚುನಾವಣಾ ಸಮಯದಲ್ಲಿ ನಾನು ಸ್ವಲ್ಪ ಬ್ಯುಸಿ ಇದ್ದೇನೆ ಎಂದು ಬೆಂಗಳೂರು ಹಾಗೂ ದೆಹಲಿ ಕಚೇರಿಗೆ ಪತ್ರ ಬರೆದಿದ್ದೆ. ಆದರೆ ಅವರು ಬಹಳ ತರಾತುರಿಯಲ್ಲಿ ಇದ್ದಾರೆ. ನನಗೆ ಮಾನಸಿಕವಾಗಿ ಕಿರಿಕಿರಿ ಆಗುತ್ತಿದೆ. ನಾನು ದಿನ ಬೆಳಗಾಗುವುದರಲ್ಲಿ ಮ್ಯಾಜಿಕ್ ಮಾಡಲು ಆಗುವುದಿಲ್ಲ. ಮೊದಲಿನಿಂದಲೂ ನನ್ನ ಆಸ್ತಿ ಊರಿನಲ್ಲಿ ಇದೆ. ಚುನಾವಣಾ ಆಯೋಗ, ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಸೇರಿದಂತೆ ಎಲ್ಲ ಇಲಾಖೆಗಳಿಗೆ ಮಾಹಿತಿ ನೀಡಿದ್ದೇನೆ. ಆದರೂ ಈಗ ಈ ರೀತಿ ಪರಿಶೀಲನೆ ಯಾಕೆ ಎಂದು ಗೊತ್ತಿಲ್ಲ' ಎಂದು ತಿಳಿಸಿದರು. 

'ನಿಮ್ಮನ್ನು ಗುರಿ ಮಾಡಲಾಗುತ್ತಿದೆಯೇ ಎಂದು ಕೇಳಿದಾಗ, ' ಇದು ಹಣೆಬರಹ, ಏನು ಮಾಡಲು ಸಾಧ್ಯ. ಅವರು ಟಾರ್ಗೆಟ್ ಮಾಡುತ್ತಿದ್ದಾರೆ ಎಂಬುದಕ್ಕಿಂತ ಪ್ರೀತಿ ಮಾಡುತ್ತಿದ್ದಾರೆ ಎಂದರು. ನಿಮ್ಮ ಧೈರ್ಯ ಕೆಡಿಸುವ ಹುನ್ನಾರವೇ ಎಂದು ಕೇಳಿದಾಗ, 'ಕೇವಲ ನನ್ನ ವಿರುದ್ಧ ಮಾತ್ರ ಸಿಬಿಐ ತನಿಖೆ ಯಾಕೆ? ಲೋಕಾಯುಕ್ತ ಇಲಾಖೆ, ಚುನಾವಣಾ ಆಯೋಗ ನನ್ನ ಆಸ್ತಿ ಬಗ್ಗೆ ಪ್ರಶ್ನೆ ಮಾಡಿದ್ದರೆ ಬೇರೆ ವಿಚಾರ. ನನ್ನ ವಿಚಾರದಲ್ಲಿ ವಿಶೇಷವಾಗಿ ಸಿಬಿಐ ವಿಚಾರಣೆ ಯಾಕೆ?' ಎಂದು ಮರುಪ್ರಶ್ನೆ ಮಾಡಿದರು.

'ವಿಚಾರಣೆಗೆ ಕರೆದು ನೋಟಿಸ್ ನೀಡಿದ್ದಾರಾ ಎಂಬ ಪ್ರಶ್ನೆಗೆ, ' ಇಡಿ ಅಧಿಕಾರಿಗಳು ನನ್ನನ್ನು ವಿಚಾರಣೆಗೆ ಕರೆದಿದ್ದಾರೆ. ನನಗೆ ಬೇರೆಯದೇ ಮಾಹಿತಿ ಇದೆ. ಈ ಬಗ್ಗೆ ಆನಂತರ ಮಾತನಾಡುತ್ತೇನೆ ' ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X