ದೇಶದಲ್ಲಿ ಮೊದಲು ಕಾಂಗ್ರೆಸ್ ಪಕ್ಷವನ್ನು ನಿಷೇಧ ಮಾಡಬೇಕು: ನಳಿನ್ ಕುಮಾರ್ ಕಟೀಲ್
ಬೆಳಗಾವಿ: 'ದೇಶದಲ್ಲಿ ಮೊದಲು ಕಾಂಗ್ರೆಸ್ ಪಕ್ಷವನ್ನು ನಿಷೇಧ ಮಾಡಬೇಕು' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ದೇಶದಲ್ಲಿ ಪಿಎಫ್ ಐ, ಎಸ್ ಡಿಪಿಐ ಹಾಗೂ ಕೆಎಫ್ ಡಿ ಸಂಘಟನೆಗಳಿಗೆ ಕಾಂಗ್ರೆಸ್ ಬೆಂಬಲ ಹಾಗೂ ಶಕ್ತಿ ಕೊಟ್ಟಿದೆ' ಎಂದು ಆರೋಪಿಸಿದರು.
'ಕಾಂಗ್ರೆಸ್ ಸ್ವಾತಂತ್ರ್ಯಾನಂತರ ದೇಶದಲ್ಲಿ ಆಡಳಿತ ಮಾಡಿದರೆ ಈ ದೇಶ ಹಾಳು ಮಾಡುತ್ತದೆ ಎಂದು ಮಹಾತ್ಮ ಗಾಂಧಿಯವರಿಗೆ ಗೊತ್ತಿತ್ತು. ಆದ್ದರಿಂದಲೇ ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಲಿ ಎಂದು ಅವರು ಹೇಳಿದ್ದರು' ಎಂದು ವಾಗ್ದಾಳಿ ನಡೆಸಿದರು.
'ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಪ್ಪು ಮಾಡಿಲ್ಲ ಎಂದಾದರೆ ಸಿಬಿಐ ಅಧಿಕಾರಿಗಳಿಗೆ ಧೈರ್ಯದಿಂದ ಉತ್ತರ ಕೊಡಲಿ. ಅದು ಬಿಟ್ಟು ಭಯ ಪಡುವುದು ಯಾಕೆ? ' ಎಂದು ನಳಿನ್ ಕುಮಾರ್ ಕಟೀಲ್ ಪ್ರಶ್ನೆ ಮಾಡಿದರು.
ಇದನ್ನೂ ಓದಿ: ಗುಂಡ್ಲುಪೇಟೆ | ರಾಹುಲ್, ಸಿದ್ದರಾಮಯ್ಯ, ಡಿಕೆಶಿ, ಪುಟ್ಟರಂಗಶೆಟ್ಟಿ ಫ್ಲೆಕ್ಸ್ ಹರಿದ ಕಿಡಿಗೇಡಿಗಳು