Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಕೋಮುದ್ವೇಷಕ್ಕೆ ಬಲಿಯಾದ' ಎಂದು...

'ಕೋಮುದ್ವೇಷಕ್ಕೆ ಬಲಿಯಾದ' ಎಂದು ಸಂಘಪರಿವಾರ ಕಾರ್ಯಕರ್ತರಿಂದಲೇ ಹತ್ಯೆಗೀಡಾದ ಪ್ರವೀಣ್ ಪೂಜಾರಿ ಫೋಟೊ ಹಾಕಿದ ಬಿಜೆಪಿ

ಸಾಮಾಜಿಕ ಜಾಲತಾಣದಲ್ಲಿ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ29 Sept 2022 1:28 PM IST
share
ಕೋಮುದ್ವೇಷಕ್ಕೆ ಬಲಿಯಾದ ಎಂದು ಸಂಘಪರಿವಾರ ಕಾರ್ಯಕರ್ತರಿಂದಲೇ ಹತ್ಯೆಗೀಡಾದ ಪ್ರವೀಣ್ ಪೂಜಾರಿ ಫೋಟೊ ಹಾಕಿದ ಬಿಜೆಪಿ

ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸಿರುವ ವಿಚಾರಕ್ಕೆ ಸಂಬಂಧಿಸಿ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ, 'ಕೋಮುದ್ವೇಷಕ್ಕೆ ಬಲಿಯಾದ ನಮ್ಮ ಕಾರ್ಯಕರ್ತ' ಎಂದು ಸಂಘಪರಿವಾರದ ಕಾರ್ಯಕರ್ತರಿಂದಲೇ ಹತ್ಯೆಗೊಳಗಾದ ಉಡುಪಿಯ ಕೆಂಜೂರು ನಿವಾಸಿ ಪ್ರವೀಣ್‌ ಪೂಜಾರಿಯ ಫೋಟೊ ಪ್ರಕಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. 

ಜಾನುವಾರು ಸಾಗಾಟ ಮಾಡುತ್ತಿದ್ದಾರೆ ಎಂದು ಅರೋಪಿಸಿ ಆರೆಸ್ಸೆಸ್ ಕಾರ್ಯಕರ್ತ ಉಡುಪಿಯ ಕೆಂಜೂರು ನಿವಾಸಿ ಪ್ರವೀಣ್‌ ಪೂಜಾರಿಯನ್ನು 2016ರ ಆಗಸ್ಟ್ ತಿಂಗಳಲ್ಲಿ  ಉಡುಪಿಯ ಸಂತೆ ಕಟ್ಟೆ ಬಳಿ  ಗೋ ರಕ್ಷಣೆಯ ಹೆಸರಿನಲ್ಲಿ ಸಂಘಪರಿವಾರದ ಕಾರ್ಯಕರ್ತರು ಗುಂಪು ಹಲ್ಲೆ ನಡೆಸಿ,  ಅಮಾನುಷವಾಗಿ ಹತ್ಯಗೈದಿದ್ದರು. ಪ್ರಕರಣಕ್ಕೆ ಸಂಬಂಧಿಸಿ 18 ಮಂದಿ ಹಿಂಜಾವೇ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. 

ಬಿಜೆಪಿ ಟ್ವೀಟ್ ಮಾಡಿದ್ದೇನು? : 'ಕೋಮುದ್ವೇಷಕ್ಕೆ ಬಲಿಯಾದ ನಮ್ಮ ಕಾರ್ಯಕರ್ತರ ಆತ್ಮಕ್ಕೆ ಶಾಂತಿ ನೀಡುವುದು ಬಿಜೆಪಿಯ ಬದ್ಧತೆ. ಅವರ ಸಾವಿಗೆ ನ್ಯಾಯ ದೊರಕಿಸುವ ಹಾದಿಯಲ್ಲಿ #ಪಿಎಫ್‌ಐನಿಷೇಧ ಮಾಡಲಾಗಿದೆ' ಎಂದು ಕೊಲೆಗೋಡಾದ ಪ್ರವೀಣ್ ನೆಟ್ಟಾರು, ಬೆಂಗಳೂರಿನ ರುದ್ರೇಶ್, ಬಂಟ್ವಾಳದ ಶರತ್ ಮಡಿವಾಳ ಅವರ ಫೋಟೊ ಜೊತೆಗೆ ಸಂಘಪರಿವಾರದ ಕಾರ್ಯಕರ್ತರಿಂದ ಹತ್ಯೆಗೀಡಾದ ಪ್ರವೀಣ್ ಪೂಜಾರಿ ಅವರ ಫೋಟೊ ಕೂಡ ಪ್ರಕಟಿಸಿದೆ.

ಇನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿ ಕೇಂದ್ರ ಗೃಹ ಇಲಾಖೆ ಹೊರಡಿಸಿರುವ ನೋಟಿಫಿಕೇಶನ್ ನಲ್ಲಿ ಹತ್ಯೆಗೀಡಾದ ಸಂಘಪರಿವಾರ ಕಾರ್ಯಕರ್ತರ ಪಟ್ಟಿಯಲ್ಲಿ ಗೊಂದಲಗಳಿದೆ ಎಂಬ ಆರೋಪ ಕೇಳಿ ಬರುತ್ತಿದ್ದು, ಇದರ ಬೆನ್ನಲ್ಲೇ ಬಿಜೆಪಿ ಇಂದು (ಗುರುವಾರ) ಮಾಡಿರುವ ಟ್ವೀಟ್ ಚರ್ಚೆಗೆ ಕಾರಣವಾಗಿದೆ. 

ಬುಧವಾರ ಪತ್ರಕರ್ತ ನವೀನ್ ಸೂರಿಂಜೆ ಅವರು ಹಾಕಿದ್ದ ಫೇಸ್ ಬುಕ್  ಪೋಸ್ಟ್ ಹೀಗಿದೆ...

'ಕೇಂದ್ರ ಗೃಹ ಇಲಾಖೆ ಹೊರಡಿಸಿರುವ ನೋಟಿಫಿಕೇಶನ್ ನಲ್ಲಿ ಪಿಎಫ್ಐ ಮಾಡಿರುವ ಕೊಲೆಗಳ ಪಟ್ಟಿಯಲ್ಲಿ ಗೊಂದಲವಿದೆ. 2016 ರಲ್ಲಿ ಕರ್ನಾಟಕದಲ್ಲಿ ಪ್ರವೀಣ್ ಪೂಜಾರಿ ಕೊಲೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ' ಎಂದು ಹೇಳಿದ್ದಾರೆ.

2016 ರಲ್ಲಿ ಇಬ್ಬರು ಪ್ರವೀಣ್ ಪೂಜಾರಿಗಳ ಕೊಲೆ ನಡೆದಿದೆ. ಯಾವ ಪ್ರವೀಣ್ ಪೂಜಾರಿ ? ಉಡುಪಿ ಪ್ರವೀಣ್ ಪೂಜಾರಿಯೋ ? ಕುಶಾಲನಗರ ಪ್ರವೀಣ್ ಪೂಜಾರಿಯೋ ಎಂಬ ಸ್ಪಷ್ಟನೆ ಇರಬೇಕಿತ್ತು.

ಜಾನುವಾರು ಸಾಗಾಟ ಮಾಡುತ್ತಿದ್ದಾರೆ ಎಂದು ಆರೆಸ್ಸೆಸ್ ಕಾರ್ಯಕರ್ತ ಉಡುಪಿಯ ಕೆಂಜೂರು ಪ್ರವೀಣ್‌ ಪೂಜಾರಿಯನ್ನು ಹೊಡೆದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುತ್ವ ಸಂಘಟನೆಯ 18 ಮಂದಿಯನ್ನು ಬಂಧಿಸಲಾಗಿತ್ತು. ಕೊಲೆಯಾದ ದನದ ವ್ಯಾಪಾರಿ ಮತ್ತು ಕೊಲೆ ನಡೆಸಿದವರೆಲ್ಲರೂ ಹಿಂದುತ್ವ ಕಾರ್ಯಕರ್ತರಾಗಿದ್ದರು.

2016ರ ಆಗಸ್ಟ್ 14ರ ರಾತ್ರಿ ಅಖಂಡ ಭಾರತ ಸಂಕಲ್ಪ ಯಾತ್ರೆ ಮುಗಿಸಿ ಹಿಂತಿರುಗುವ ವೇಳೆ ಬಾಡಿಗೆಯ ನೆಪದಲ್ಲಿ ಆಟೋದಲ್ಲಿ ಕರೆದೊಯ್ದು ಗುಡ್ಡೆಹೊಸೂರು ಸಮೀಪ ಪ್ರವೀಣ್ ಪೂಜಾರಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಎಲ್ಲಾ ಆರೋಪಿಗಳು ಸೂಕ್ತ ಸಾಕ್ಷ್ಯಾಧಾರ ಇಲ್ಲದೇ ನ್ಯಾಯಾಲಯದಲ್ಲಿ ಆರೋಪ ಮುಕ್ತರಾಗಿದ್ದಾರೆ. ನ್ಯಾಯಾಲಯದ ತೀರ್ಪನ್ನು ನ್ಯಾಯಾಲಯದಲ್ಲೇ ಪ್ರಶ್ನಿಸಬೇಕು. ಅದನ್ನು ಬಿಟ್ಟು ನ್ಯಾಯಾಲಯದಲ್ಲಿ ಆರೋಪಮುಕ್ತವಾದರೂ ಅದನ್ನೇ ಮತ್ತೆ ಆರೋಪಿಸಿ ಕ್ರಮ ಕೈಗೊಳ್ಳಲು ಅವಕಾಶ ಇದ್ಯಾ ? ಹಾಗಾಗಿ ಯಾವ ಪ್ರವೀಣ್ ಪೂಜಾರಿ ಎಂಬುದನ್ನು ಕೇಂದ್ರ ಗೃಹ ಇಲಾಖೆ ಸ್ಪಷ್ಟವಾಗಿ ಹೇಳಬೇಕಿತ್ತು. ಎಂದು ಅವರು ಬರೆದುಕೊಂಡಿದ್ದಾರೆ. 

►update: ವಿವಾದದ ಬಳಿಕ ಬಿಜೆಪಿ ಮೇಲಿನ ಟ್ವೀಟ್ ಅನ್ನು ಅಳಿಸಿ ಹಾಕಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X