ಸಾಗರ | ಶಾರ್ಟ್ ಸರ್ಕ್ಯೂಟ್ ನಿಂದ ಕಿರಾಣಿ ಅಂಗಡಿಗೆ ಹಾನಿ
ಸಾಗರ, ಸೆ.30: ಇಲ್ಲಿನ ನೆಹರು ನಗರ ಆಂಜನೇಯ ಸ್ವಾಮಿ ದೇವಸ್ಥಾನದ ಸಮೀಪ ಕಿರಾಣಿ ಅಂಗಡಿಯೊಂದು ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡು ಹಾನಿಗೀಡಾದ ಘಟನೆ ಗುರುವಾರ ರಾತ್ರಿ ನಡೆದಿದೆ.
ರೇಣುಕಾ ಎಂಬುವವರಿಗೆ ಸೇರಿದ್ದ ಕಿರಾಣಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಅಂಗಡಿಯಲ್ಲಿದ್ದ ಫ್ರಿಡ್ಜ್ ಸೇರಿದಂತೆ ಸರಕು-ವಸ್ತುಗಳು ಸಂಪೂರ್ಣ ಸುಟ್ಟು ಹೋಗಿವೆ.
ಕಳೆದೊಂದು ವರ್ಷದಿಂದ ಬಾಡಿಗೆ ಕಟ್ಟಡದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದರು ಇವರು,ನಿನ್ನೆ ರಾತ್ರಿ ಕಿರಾಣಿ ಅಂಗಡಿ ವ್ಯಾಪಾರ ಕೈಗೊಂಡು ಬೀಗ ಹಾಕಿ ಮನೆಗೆ ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಿರಾಣಿ ಅಂಗಡಿಯಿಂದ ದಟ್ಟವಾದ ಹೊಗೆ ಮತ್ತು ಬೆಂಕಿ ನೋಡಿ ಸ್ಥಳೀಯರು ಬೆಂಕಿ ನಂದಿಸಿದ್ದಾರೆ.
ಅಂದಾಜು 4 ಲಕ್ಷ ರೂ.ಗಳಷ್ಟು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
Next Story