ಮೈಸೂರು-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ‘ಟಿಪ್ಪು ಎಕ್ಸ್ ಪ್ರೆಸ್’ ಹೆಸರು ಬದಲಿಸಿದ ರೈಲ್ವೆ ಇಲಾಖೆ
ಬೆಂಗಳೂರು, ಅ.7: ಮೈಸೂರು-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಟಿಪ್ಪು ಎಕ್ಸ್ ಪ್ರೆಸ್ (ರೈಲು ಗಾಡಿ ಸಂಖ್ಯೆ 12613/12614) ಅನ್ನು ‘ಒಡೆಯರ್ ಎಕ್ಸ್ ಪ್ರೆಸ್’ ಹಾಗೂ ತಾಳಗುಪ್ಪ-ಮೈಸೂರು ಎಕ್ಸ್ ಪ್ರೆಸ್(ರೈಲು ಗಾಡಿ ಸಂಖ್ಯೆ 16221/16222) ಅನ್ನು ‘ಕುವೆಂಪು ಎಕ್ಸ್ ಪ್ರೆಸ್ ಎಂದು ಮರು ನಾಮಕರಣಗೊಳಿಸಲಾಗಿದೆ.
ಈ ಕುರಿತು ಕೇಂದ್ರ ಸರಕಾರದ ರೈಲ್ವೆ ಬೋರ್ಡ್ನ ಉಪ ನಿರ್ದೇಶಕ ರಾಜೇಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಟಿಪ್ಪು ಎಕ್ಸ್ಪ್ರೆಸ್ ಬದಲಿಗೆ 'ಒಡೆಯರ್ ಎಕ್ಸ್ಪ್ರೆಸ್' ಎಂದು ಮರುನಾಮಕರಣ ಮಾಡಲು ಸಂಸದ ಪ್ರತಾಪ್ ಸಿಂಹ ಮನವಿ
"ಮೈಸೂರು-ಬೆಂಗಳೂರು ಎಕ್ಸಪ್ರೆಸ್ ಮತ್ತು ತಾಳಗುಪ್ಪ-ಮೈಸೂರು ಎಕ್ಸಪ್ರೆಸ್ ರೈಲುಗಳಿಗೆ ಕ್ರಮವಾಗಿ ಒಡೆಯರ್ ಎಕ್ಸಪ್ರೆಸ್ ಮತ್ತು ಕುವೆಂಪು ಎಕ್ಸಪ್ರೆಸ್ ಎಂದು ಮರುನಾಮಕರಣ ಮಾಡಿದ ಕ್ರಮವನ್ನು ನಾನು ಸ್ವಾಗತಿಸುತ್ತೇನೆ. pic.twitter.com/06T1Eccr7E
— CM of Karnataka (@CMofKarnataka) October 7, 2022
Next Story