ಹೊಸ ರೈಲಿಗೆ ಒಡೆಯರ್ ಹೆಸರು ಇಟ್ಟಿದ್ದರೆ ಚೆನ್ನಾಗಿರುತ್ತಿತ್ತು: ಸಿದ್ದರಾಮಯ್ಯ
'ಟಿಪ್ಪು ಎಕ್ಸ್ಪ್ರೆಸ್' ಗೆ ಮರುನಾಮಕರಣ ವಿಚಾರ
ಮಂಡ್ಯ: ಮೈಸೂರು-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಟಿಪ್ಪು ಎಕ್ಸ್ ಪ್ರೆಸ್ (ರೈಲು ಗಾಡಿ ಸಂಖ್ಯೆ 12613/12614) ಹೆಸರನ್ನು ‘ಒಡೆಯರ್ ಎಕ್ಸ್ ಪ್ರೆಸ್’ ಎಂದು ಬದಲಾಯಿಸಿ ಕೇಂದ್ರ ರೈಲ್ವೆ ಮಂಡಳಿ ಶುಕ್ರವಾರ ಆದೇಶ ಹೊರಡಿಸಿದ್ದು, ಈ ಕುರಿತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಬಿಜೆಪಿಯವರಿಗೆ ದ್ವೇಷ ಬಿತ್ತುವುದೇ ಕೆಲಸ. ಟಿಪ್ಪು ಎಕ್ಸ್ಪ್ರೆಸ್ ರೈಲಿನ ಹೆಸರು ಬದಲಾಯಿಸುವ ಅಗತ್ಯವಿರಲಿಲ್ಲ. ಇದರ ಬದಲಾಗಿ ಹೊಸ ರೈಲಿಗೆ ಒಡೆಯರ್ ಹೆಸರು ಇಟ್ಟಿದ್ದರೆ ಚೆನ್ನಾಗಿರುತ್ತಿತ್ತು'' ಎಂದು ಹೇಳಿದರು.
''ಒಡೆಯರ್ ಅವರಿಗೆ ಗೌರವ ಕೊಡಬೇಕೆಂದರೆ ಇನ್ನೊಂದು ಹೊಸ ರೈಲಿಗೆ ಹಸರಿಡಲಿ. ಇದು ದ್ವೇಷ ಬಿತ್ತುವ ಉದ್ದೇಶದಿಂದಲೇ ಬಿಜೆಪಿಯವರು ಈ ಥರ ಎಲ್ಲ ಮಾಡುತ್ತಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ>>> ಮೈಸೂರು-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ‘ಟಿಪ್ಪು ಎಕ್ಸ್ ಪ್ರೆಸ್’ ಹೆಸರು ಬದಲಿಸಿದ ರೈಲ್ವೆ ಇಲಾಖೆ
Next Story