Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತವನ್ನು ಹಿಡೆನ್ ಅಜೆಂಡಾ ಮೂಲಕ...

ಭಾರತವನ್ನು ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ: ಹೆಚ್ .ಡಿ. ಕುಮಾರಸ್ವಾಮಿ ಕಿಡಿ

''ಭಾರತವನ್ನು ‘ಹಿಂದಿಸ್ತಾನ್' ಮಾಡುವ ಹುನ್ನಾರ'' ► ''ಆರ್ಯ ಸಂಸ್ಕೃತಿಯ ತುಷ್ಟೀಕರಣವನ್ನು ಸಹಿಸುವ ಪ್ರಶ್ನೆಯೇ ಇಲ್ಲ''

ವಾರ್ತಾಭಾರತಿವಾರ್ತಾಭಾರತಿ10 Oct 2022 10:41 PM IST
share
ಭಾರತವನ್ನು ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ: ಹೆಚ್ .ಡಿ. ಕುಮಾರಸ್ವಾಮಿ ಕಿಡಿ

ಬೆಂಗಳೂರು: 'ಕೇಂದ್ರ Bharatiya Janata Party (BJP)  ಸರಕಾರ ತನ್ನ ಚಾಳಿ ಮುಂದುವರಿಸಿದೆ. ಇಡೀ ಭಾರತವನ್ನು ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ ಮಾಡುತ್ತಿದೆ. Amit Shah  ನೇತೃತ್ವದ ಸಮಿತಿ, ಹಿಂದಿ ಹೇರಿಕೆ ಬಗ್ಗೆ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿ ಆಘಾತಕಾರಿ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ವಿನಾಶಕ್ಕೆ ದಾರಿ'' ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, '' ವರದಿಯ ಶಿಫಾರಸುಗಳನ್ನು ಓದಿ ನನಗೆ ದೊಡ್ಡ ಆಘಾತವೇ ಆಯಿತು. ಸರ್ವಾಧಿಕಾರಿ ಮನಃಸ್ಥಿತಿಯಿಂದ ಕನ್ನಡವೂ ಸೇರಿ ಪ್ರಾದೇಶಿಕ ಭಾಷೆಗಳನ್ನು ಹೊಸಕಿ ಹಾಕಿ ಇಡೀ ದೇಶದ ಮೇಲೆ  ಹಿಂದಿ ಹೇರಿ ಬಹುತ್ವದ ಭಾರತವನ್ನು 'ಹಿಂದಿಸ್ತಾನ್ ' ಮಾಡುವ ಹುನ್ನಾರ ಇದರ ಹಿಂದಿದೆ'' ಎಂದು ಆರೋಪಿಸಿದ್ದಾರೆ.

''ವರದಿಯಲ್ಲಿರುವ ಅನೇಕ ಶಿಫಾರಸುಗಳು ಭಾರತೀಯ ಒಕ್ಕೂಟ ವ್ಯವಸ್ಥೆಯನ್ನು ಸೀಳಿ, ಛಿದ್ರ ಮಾಡುವಂತಿವೆ. ಒಂದು ದೇಶ, ಒಂದು ಧರ್ಮ, ಒಂದು ಭಾಷೆ ಎನ್ನುವ ವಿಚ್ಛಿದ್ರಕಾರಿ ನೀತಿಯ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ನಿರ್ನಾಮ ಮಾಡುವುದೇ ಅಮಿತಾ ಶಾ ಸಮಿತಿಯ ಅಮಿತೋದ್ದೇಶ'' ಎಂದು ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ಅವರ ಟ್ವೀಟ್ ಗಳು ಇಂತಿವೆ... 

''ಏಕಭಾಷೆಯ ಅಧಿಪತ್ಯವನ್ನು ಭಾರತ ಒಪ್ಪುವುದಿಲ್ಲ. ಬಹುತ್ವದಲ್ಲಿ ಏಕತೆಯ ಮೂಲಕ ಅಖಂಡವಾಗಿರುವ ಭಾರತವನ್ನು ಒಡೆದು ಆಳುವ ನೀತಿ ರಾಷ್ಟ್ರದ ಒಡಕಿಗೆ ಕಾರಣವೂ ಆಗಬಹುದು. ಕೇಂದ್ರ ಸರಕಾರ ಕೂಡಲೇ ಈ ವರದಿಯನ್ನು ಹಿಂಪಡೆದು, ಎಲ್ಲ ಭಾಷೆಗಳನ್ನೂ ಸಮಾನವಾಗಿ ನೋಡುವ ಸಂವಿಧಾನದ ಆಶಯವನ್ನು ಎತ್ತಿ ಹಿಡಿಯಬೇಕು''.

''ಹಿಂದಿ ಪ್ರದೇಶಗಳಲ್ಲಿಯೂ ಹಿಂದಿ ಮಾತನಾಡುವವರ ಸಂಖ್ಯೆ ಕಡಿಮೆ ಇದೆ. ಹಿಂದಿಗಿಂತ ಇತರೆ ಭಾಷೆಗಳನ್ನು ಮಾತನಾಡುವ ಜನರೇ ದೇಶದಲ್ಲಿ ಹೆಚ್ಚಿದ್ದಾರೆ. ಸತ್ಯಸ್ಥಿತಿ ಹೀಗಿದ್ದರೂ ಬಿಜೆಪಿ ಹಿಂದಿ ಹೇರಿಕೆ ಮಾಡುತ್ತಿದೆ. ತ್ರಿಭಾಷಾ ಸೂತ್ರಕ್ಕೆ ತಿಲಾಂಜಲಿ ನೀಡುವ ಹುನ್ನಾರ ಇದು. ಆರ್ಯ ಸಂಸ್ಕೃತಿಯ ತುಷ್ಟೀಕರಣವನ್ನು ಸಹಿಸುವ ಪ್ರಶ್ನೆ ಇಲ್ಲ''.

''ದಕ್ಷಿಣ ಭಾರತದಲ್ಲಿ ಆಟ ನಡೆಯುವುದಿಲ್ಲ ಎನ್ನುವ ಕಾರಣಕ್ಕೇ ಬಿಜೆಪಿ ಅಡ್ಡದಾರಿಯಲ್ಲಿ ಕರ್ನಾಟಕದಲ್ಲಿ ಅಧಿಕಾರ ಹಿಡಿಯಿತು. ಅದರ ಪರಿಣಾಮ ಹೆಜ್ಜೆಹೆಜ್ಜೆಗೂ ಕನ್ನಡಕ್ಕೆ ಕಂಟಕ ಎದುರಾಯಿತು. ಈಗ ಕನ್ನಡ ಸೇರಿ ತೆಲುಗು, ತಮಿಳು, ಮಲೆಯಾಳಂ, ಮರಾಠಿ, ಒರಿಯಾ ಸೇರಿ ಎಲ್ಲ ಅನ್ಯಭಾಷೆಗಳ ಅವಸಾನಕ್ಕೆ ಕೇಂದ್ರ ಸರಕಾರ ಮಹೂರ್ತ ಇಟ್ಟಿದೆ''.

''ಯಾವುದೇ ಕಾರಣಕ್ಕೂ ಈ ವರದಿಯ ಶಿಫಾರಸುಗಳ ಜಾರಿಗೆ ಅವಕಾಶ ನೀಡಬಾರದು. ಎಲ್ಲ ರಾಜ್ಯಗಳೂ, ಅದರಲ್ಲೂ ದಕ್ಷಿಣದ ರಾಜ್ಯಗಳು ಒಗ್ಗಟ್ಟಾಗಿ ವಿರೋಧಿಸಬೇಕು. ಎಲ್ಲ ಭಾಷೆಗಳಲ್ಲಿ ಒಂದಷ್ಟೇ ಆಗಿರುವ ಹಿಂದಿ ಭಾಷೆಯ ಹೇರಿಕೆ ಎಂದರೆ, ಒಕ್ಕೂಟ ವ್ಯವಸ್ಥೆಗೆ ಹೆಡೆಮುರಿ ಕಟ್ಟುವ ದುಸ್ಸಾಹಸ ಎಂದೇ ಭಾವಿಸಬೇಕಾಗುತ್ತದೆ''.

''ಬಾಯಿಮಾತಿನಲ್ಲಿ ಸ್ಥಳೀಯ ಭಾಷೆಯ ಜಪ ಮಾಡುವ ಬಿಜೆಪಿ, ಆಂತರ್ಯದಲ್ಲಿ ಹಿಂದಿಯನ್ನೇ ಹೇರುತ್ತಿದೆ, ಇದು ಸತ್ಯ. ಕೂಡಲೇ ಕೇಂದ್ರದ  @BJP4India ಸರಕಾರವು ಈ ವರದಿಯನ್ನು ವಾಪಸ್ ಪಡೆಯಬೇಕು. ಸರ್ವ ಭಾಷೆಗಳೂ ಸಮಾನ ಎನ್ನುವ ನೀತಿಗೆ ಬದ್ಧವಾಗಿರಬೇಕು''.

''ಐಐಐಟಿ, ಐಐಎಂ, ಏಮ್ಸ್, ಕೇಂದ್ರೀಯ - ನವೋದಯ ವಿದ್ಯಾಲಯಗಳಲ್ಲಿ ಹಿಂದಿ ಅಥವಾ ಸ್ಥಳೀಯ ಭಾಷೆಯಲ್ಲಿ ಬೋಧನೆ ಮಾಡಿ ಎನ್ನುವ ವರದಿ, ಅದೇ ಸ್ಥಳೀಯ ಭಾಷೆಗಳ ಸಂಹಾರಕ್ಕೆ ಅನೇಕ ಆಯುಧಗಳನ್ನು ಒಳಗೊಳಗೇ  ಸನ್ನದ್ಧಗೊಳಿಸಿದೆ. ಹೀಗಾಗಿ ಪ್ರಾದೇಶಿಕ ಭಾಷೆಗಳ ಬಗ್ಗೆ ಬಿಜೆಪಿ ಎಷ್ಟೇ ಬೊಬ್ಬೆ ಹಾಕಿದರೂ ನಂಬುವ ಸ್ಥಿತಿ ಇಲ್ಲ''.

''ಸ್ಥಳೀಯ ಭಾಷೆಗಳ ಉದ್ಧಾರದ ನೆಪ ಹೇಳುತ್ತಾ ವಾಮಮಾರ್ಗದಲ್ಲಿ ಇಡೀ ದೇಶದ ಮೇಲೆ ಹಿಂದಿ ಹೇರಿಕೆ ಮಾಡುವುದೇ ಕೇಂದ್ರದ ದುರುದ್ದೇಶ ಎನ್ನುವುದು ಸ್ಪಷ್ಟ''.

''ಕನ್ನಡದ ಮೇಲೆ ಈವರೆಗೂ ಕೇಂದ್ರ ಸರಕಾರ ನಡೆಸಿರುವ ದಬ್ಬಾಳಿಕೆಯೇ ಇದಕ್ಕೆ ಸಾಕ್ಷಿ. ಬಹುಮತ ಇದೆ ಎನ್ನವ ಕಾರಣಕ್ಕೆ ಹಿಂದಿ ಹೇರಿಕೆ ರಾಜಕೀಯ ಮಾಡಿದರೆ ಭಾರತವು ಭಾಷಾ ದಳ್ಳುರಿಯಲ್ಲಿ ಬೇಯುವುದು ಖಚಿತ. ಬಾರತ ಎಂದರೆ ಹಿಂದು, ಹಿಂದಿ ಅಷ್ಟೇ ಅಲ್ಲ. ಭಾರತ ನಮ್ಮೆಲ್ಲರದು'' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ @BJP4India ಸರಕಾರ ತನ್ನ ಚಾಳಿ ಮುಂದುವರಿಸಿದೆ. ಇಡೀ ಭಾರತವನ್ನು ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ ಮಾಡುತ್ತಿದೆ. @AmitShah ನೇತೃತ್ವದ ಸಮಿತಿ, ಹಿಂದಿ ಹೇರಿಕೆ ಬಗ್ಗೆ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿ ಆಘಾತಕಾರಿ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ವಿನಾಶಕ್ಕೆ ದಾರಿ.1/11#ಹಿಂದಿ_ಹೇರಿಕೆ_ನಿಲ್ಲಲಿ pic.twitter.com/qoqIstIb74

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 10, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X