ಬಳ್ಳಾರಿ ನಗರ ಪ್ರವೇಶಿಸಿದ ಭಾರತ್ ಜೋಡೊ ಯಾತ್ರೆ: ರಾಹುಲ್ ಗಾಂಧಿಗೆ ಸಚಿವ ಶ್ರೀರಾಮುಲು ಸ್ವಾಗತ ಕೋರಿದ್ದು ಹೀಗೆ...
-

ಬೆಂಗಳೂರು, ಅ.15: ಬಳ್ಳಾರಿಯಲ್ಲಿ ನಡೆಸುತ್ತಿರುವ 'ಭಾರತ್ ಜೋಡೊ ಯಾತ್ರೆ'ಯ ಬದಲಿಗೆ, ಪ್ರಾಯಶ್ಚಿತ ಯಾತ್ರೆ ನಡೆಸಬೇಕಿತ್ತು ಎಂದು ಸಾರಿಗೆ ಸಚಿವ ಶ್ರೀರಾಮುಲು, ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ನಾವು ನಡೆಸುತ್ತಿರುವುದು ಭಾರತ್ ಜೋಡೊ ಯಾತ್ರೆಯಲ್ಲ, ಬದಲಿಗೆ ನಮ್ಮ ತಾಯಿಯನ್ನು ಗೆಲ್ಲಿಸಿದ್ದಕ್ಕೆ ಜನಾದೇಶವನ್ನು ಧಿಕ್ಕರಿಸಿ ರಾಜೀನಾಮೆ ನೀಡಿದ್ದಕ್ಕೆ, ಅಧಿಕಾರದಲ್ಲಿ ಇದ್ದಾಗ ಏನು ಮಾಡದೆ ಮತದಾರರ ಕ್ಷಮೆ ಕೇಳುವ ಪ್ರಾಯಶ್ಚಿತ ಯಾತ್ರೆ ಮಾಡುತ್ತಿದ್ದೇವೆ ಎಂದು ಹೇಳಲು ಸಂಕೋಚ ಏಕೆ.? ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ.
1999ರ ಲೋಕಸಭಾ ಚುನಾವಣೆ ವೇಳೆ ಅಮೇಥಿಯಲ್ಲಿ ಸೋಲಬಹುದು ಎಂಬ ಭೀತಿಯಿಂದ ಬಳ್ಳಾರಿಗೆ ಓಡೋಡಿ ಬಂದು ರಾಜಕೀಯ ಪುರ್ನಜನ್ಮ ಪಡೆದಿದ್ದಕ್ಕೆ ಪ್ರತಿಯಾಗಿ, ಜಿಲ್ಲೆಯ ಜನತೆಗೆ ಚೂರಿ ಹಾಕಿ ಹೋಗಿದ್ದ ಶ್ರೀಮತಿ ಸೋನಿಯಾ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ಭಾರತ್ ತೋಡೋ ಯಾತ್ರೆಗೆ ಹಾರ್ದಿಕ ಸುಸ್ವಾಗತ! ಎಂದು ಲೇವಡಿ ಮಾಡಿದ್ದಾರೆ.
'''ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಗೆದ್ದು, ಸೌಜನ್ಯಕ್ಕಾದರೂ ಜನತೆಗೆ ಧನ್ಯವಾದಗಳನ್ನು ತಿಳಿಸದೇ, ದೆಹಲಿಯಿಂದಲೇ ರಾಜೀನಾಮೆ ಪತ್ರ ಬಿಸಾಕಿದ ಖಾಯಂ AICC ಅಧ್ಯಕ್ಷರ ಮುದ್ದಿನ ಪುತ್ರ ,ಪಾದಯಾತ್ರೆಯ ಮೂಲಕ ಬಳ್ಳಾರಿಗೆ ಆಗಮಿಸುತ್ತಿರುವುದಕ್ಕೆ ನಿಮಗಿದೋ ಭವ್ಯ ಸ್ವಾಗತ'' ಎಂದು ಕುಹಕವಾಡಿದ್ದಾರೆ.
''ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಏದುಸಿರು ಬಿಡುತ್ತಾ ಕೈಲಾಗದಿದ್ದರೂ ಎದ್ದೋ ಬಿದ್ದನಂತೆ ಓಡುತ್ತಾ, ರಸ್ತೆಯಲ್ಲಿ ಬಸ್ಕಿ ಹೊಡೆಯುತ್ತಾ, ಹಾವು- ಮುಂಗುಸಿಯಂತೆ ಇದ್ದರೂ ,ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕ್ಯಾಮರಾ ಮುಂದೆ ಪೋಜು ನೀಡುವ ಕೆಪಿಸಿಸಿ ಮಹಾನ್ ನಾಯಕರೆಲ್ಲರಿಗೂ ಸುಸ್ವಾಗತ'' ಎಂದು ಕಾಂಗ್ರೆಸ್ ನಾಯಕರ ಕಾಲೆಳೆದಿದ್ದಾರೆ.
''ಬಳ್ಳಾರಿಜಿಲ್ಲೆಗೆ 3300 ಕೋಟಿ ರೂ.ಗಳ ಸುಳ್ಳು ಪ್ಯಾಕೇಜ್ ಅನ್ನು ನಿಮ್ಮ ಮಾತೃಶ್ರೀಯವರಾದ ಶ್ರೀಮತಿ ಸೋನಿಯಾ ಗಾಂಧಿಯವರು ಘೋಷಣೆ ಮಾಡಿದ್ದರು ಎಂಬುದನ್ನು ಮಾನ್ಯ @RahulGandhi ಅವರಿಗೆ ನೆನಪಿಲು ಇಚ್ಛೇಸುತ್ತೇನೆ.ಏಕೆಂದರೆ, ನಿಮಗೆ ಮರೆವು ಜಾಸ್ತಿ.!''
''ಬಳ್ಳಾರಿ ಜನತೆ ಸೋನಿಯಾಗಾಂದಿ ಅವರು ಘೋಷಿಸಿದ ಪ್ಯಾಕೇಜ್ ಬಂದೇ ಬರುತ್ತದೆ ಎಂದು ಜನ ಕಣ್ ಕಣ್ ಬಿಟ್ಟಿದ್ದೇ ಆಯಿತು, ಆದರೆ ಅದು ಎಲ್ಲಿಗೆ ಬಂತು? ಯಾವಾಗ ಬಂತು? ಯಾರಿಗೆ ಹೋಯಿತು? ಯಾರ ಜೇಬಿಗೆ ಸೇರಿತು? ಕಾಂಗ್ರೆಸ್ ನಾಯಕರ ಬಳಿ ಉತ್ತರ ಇದೆಯೇ?'' ಎಂದು ಪ್ರಶ್ನೆ ಮಾಡಿದ್ದಾರೆ.
''ಸೋನಿಯಾಗಾಂಧಿ ಅವರು ಸ್ಪರ್ಧೆ ಮಾಡಿದಾಗ ಅವರ ಮೇಲಿನ ಪ್ರೀತಿ, ಅಭಿಮಾನದಿಂದ ಆಶೀರ್ವಾದ ಮಾಡಿದರು. ಗೆದ್ದ ಮೇಲೆ ಇಲ್ಲಿಗೆ ಎಷ್ಟು ಸಲ ಬಂದರು? ಕನಿಷ್ಟ ಪಕ್ಷ ಗೆಲ್ಲಿಸಿದ್ದಕ್ಕೆ ಮತದಾರರಿಗೆ ಸೌಜನ್ಯಕ್ಕಾದರೂ ಕೃತಜ್ಞತೆ ಹೇಳಿದ್ದಾರಾ?ಇದನ್ನು ಜನತೆಯ ಮುಂದೆ ಹೇಳಲು ಸಿದ್ದರಿದ್ದೀರಾ?'' ಎಂದು ಸವಾಲು ಹಾಕಿದ್ದಾರೆ.
''ಬಳ್ಳಾರಿ ಜಿಲ್ಲೆಗೆ ಸೋನಿಯಾಗಾಂಧಿ ಆಗಲಿ ಅಥವಾ ಕಾಂಗ್ರೆಸ್ನ ಕೊಡುಗೆ ಏನು ಎಂಬುದನ್ನು ಅವರ ಪುತ್ರ ಶ್ರೀ ರಾಹುಲ್ಗಾಂದಿ ಅವರೇ ತಮ್ಮ ಭಾಷಣದಲ್ಲಿಹೇಳಬೇಕು.ದೇಶ ಬೆಸೆಯುತ್ತೇನೆ ಎಂದು ಹೊರಟಿರುವ ಅವರಿಗೆ ಜಿಲ್ಲೆಯ ಜನ ಪಾಠ ಕಲಿಸಲಿದ್ದಾರೆ ಎಂಬುದನ್ನು ಮರೆಯಬಾರದು'' ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
''ಕಡೆ ಪಕ್ಷ ಐದು ವರ್ಷಗಳ ಕಾಲ ಅಧಿಕಾರದಲ್ಲಿ ನಿಮ್ಮ ಕಾಂಗ್ರೆಸ್ ಪಕ್ಷ ಬಳ್ಳಾರಿಗೆ ಜಿಲ್ಲೆಗೆ ಕೊಟ್ಟ ಕೊಡುಗೆ ಏನು ?.ರಾಹುಲ್ ಗಾಂಧಿ ಅವರೇ.? ನಿಮ್ಮಬೆಸುಗೆಯ ಯಾತ್ರೆಗೆ ಜನ ಬಗ್ಗೋದಿಲ್ಲ. ಅವರನ್ನು TAKEN FOR GRANTED ಮಾಡಿಕೊಂಡಿದ್ದೀರಾ? ಎಂದು ಆಕ್ರೋಶ ಹೊರಹಾಕಿದ್ದಾರೆ.
''ಬಳ್ಳಾರಿ ಜಿಲ್ಲೆಗೆ ಸೋನಿಯಾ ಗಾಂಧಿ ಅವರು ಕೊಟ್ಟ ಕೊಡುಗೆ ಶೂನ್ಯ.ಅದನ್ನು ರಾಹುಲ್ ಗಾಂಧಿ ಮರೆತರೂ, ಜನ ಮರೆತಿಲ್ಲ. ಯಾತ್ರೆಯ ಮೂಲಕ ಮರೆ ಮಾಚಲು ಸಾಧ್ಯವಿಲ್ಲ. ಬಳ್ಳಾರಿ ಜಿಲ್ಲೆ ಅಭಿವೃದ್ದಿಯಲ್ಲಿ ಬಿಜೆಪಿ ಸರ್ಕಾರದ ಕೊಡುಗೆಯೇ ದೊಡ್ಡದು'' ಎಂದು ಹೇಳಿದ್ದಾರೆ.
''ಅದು ಜಿಲ್ಲೆಯ ಜನರಿಗೂ ಗೊತ್ತಿದೆ. ಹಾಗಾಗಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮೂಲಕ ಬಂದು ಏನೇ ಮಾಡಿದರೂ ನಂಬುವುದಿಲ್ಲ.ಅವರಿಗೆ ವಾಸ್ತವದ ಮೇಲೆ ನಂಬಿಕೆಯೇ ಹೊರತು, ಬರೀ ನಾಟಕ ಮಾಡುವವರ ಮೇಲಲ್ಲ'' ಎಂದು ರಾಮುಲು ಅವರು ವಾಗ್ದಾಳಿ ನಡೆಸಿದ್ದಾರೆ.
''ಬಳ್ಳಾರಿ ಪಾದಯಾತ್ರೆ ನಡೆಸಿ ಮುಖ್ಯಮಂತ್ರಿ ಆದವರೂ ಕೂಡ ಜಿಲ್ಲೆಯ ಅಭಿವೃದ್ಧಿಗೆ ನಯಾಪೈಸೆ ಹಣ ಕೊಡದೆ, ಈಗ ಯಾವ ಮುಖ ಇಟ್ಟುಕೊಂಡು ಜನರ ಮುಂದೆ ಭಾಷಣ ಮಾಡುತ್ತಾರಾ.? ನಮ್ಮ ಜನ ಸ್ವಾಭಿಮಾನಿಗಳು.ಎಲ್ಲದಕ್ಕೂ ಹೌದು ಹುಲಿಯಾ ,ಎನ್ನುವವರಲ್ಲ.ಅಥವಾ ಟಗರು ಟಗರು ಎಂದು ಜೈಕಾರ ಹಾಕುವವರೂ ಅಲ್ಲ'' ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಅವರ ವಿರುದ್ದವೂ ಗುಡುಗಿದ್ದಾರೆ.
''ಕಾಂಗ್ರೆಸ್ ಎಂದರೆ ಸುಳ್ಳು ಭರವಸೆ ನೀಡುವ ರಾಜಕೀಯ ಪಕ್ಷ ಎಂಬುದು ಇತಿಹಾಸದಿಂದಲೇ ಋಜುವಾತಾಗಿದೆ. ಲೋಕಸಭಾ ಉಪ ಚುನಾವಣೆಯಲ್ಲಿ ಗೆದ್ದಾಗಲೂ ಎಂದಿನಂತೆ ಮತ್ತೆ ಮತದಾರರಿಗೆ ಅದೇ ಮೋಸ, ವಂಚನೆ ಜನತೆಯ ಮೂಗಿಗೆ ತುಪ್ಪ ಸವರಿದ್ದು.ಈಗ ಭಾರತ್ ತೋಡೋ ನಾಟಕ'' ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
''ಕಾಲ ಬದಲಾಗಿದೆ. ಸುಳ್ಳಿನ ಮೇಲೆ ರಾಜಕೀಯ ಮಾಡುವುದು, ಸಂತೆ ಭಾಷಣ ಮಾಡುವುದರಿಂದ ಮೋಡಿ ಮಾಡಲು ಸಾಧ್ಯವಿಲ್ಲ . ಬರಲಿರುವ ದಿನಗಳಲ್ಲಿ ಜಿಲ್ಲೆಯಿಂದ ಕಾಂಗ್ರೆಸ್ ಪಕ್ಷದ ಬೇರುಗಳನ್ನು ಬುಡ ಸಮೇತ ಕಿತ್ತು ಹಾಕಲಿದ್ದಾರೆ ಎಂಬ ಸತ್ಯವನ್ನು ಕಾಂಗ್ರೆಸ್ ನಾಯಕರು ಮರೆಯಬಾರದು.! '' ಎಂದು ರಾಮುಲು ಎಚ್ಚರಿಕೆ ನೀಡಿದ್ದಾರೆ.
1999 ರ ಲೋಕಸಭಾ ಚುನಾವಣೆ ವೇಳೆ ಅಮೇಥಿಯಲ್ಲಿ ಸೋಲಬಹುದು ಎಂಬ ಭೀತಿಯಿಂದ ಬಳ್ಳಾರಿಗೆ ಓಡೋಡಿ ಬಂದು ರಾಜಕೀಯ ಪುನರ್ ಜನ್ಮ ಪಡೆದಿದ್ದಕ್ಕೆ ಪ್ರತಿಯಾಗಿ, ಜಿಲ್ಲೆಯ ಜನತೆಗೆ ಚೂರಿ ಹಾಕಿ ಹೋಗಿದ್ದ ಕಾಂಗ್ರೆಸ್ ಪಕ್ಷದ ಭಾರತ್ ತೋಡೋ ಯಾತ್ರೆಗೆ ಹಾರ್ದಿಕ ಸುಸ್ವಾಗತ! 1/14
— B Sriramulu (@sriramulubjp) October 15, 2022
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.