'ಭಾರತ್ ಜೋಡೊ' ಯಾತ್ರೆ ಬಳಿಕ 'ಬಸ್ ಯಾತ್ರೆ'ಗೆ ನಿರ್ಧಾರ: ಡಿ.ಕೆ.ಶಿವಕುಮಾರ್
-

ಬಳ್ಳಾರಿ, ಅ. 16: ‘ರಾಜ್ಯದ ಎಲ್ಲ 224 ಕ್ಷೇತ್ರಗಳನ್ನೂ ಮುಟ್ಟಬೇಕೆಂಬ ಕಾರಣಕ್ಕೆ ನಾನು, ಸಿದ್ದರಾಮಯ್ಯ ಹಾಗೂ ಎಐಸಿಸಿ ನಾಯಕರು ಕೂತು ಚರ್ಚಿಸಿ ರಾಜ್ಯದಲ್ಲಿ ಬಸ್ ಯಾತ್ರೆ ನಡೆಸುವ ಸಂಬಂಧ ತೀರ್ಮಾನ ಮಾಡಿದ್ದೇವೆ. ಮುಂದೆ ಈ ಬಗ್ಗೆ ಮಾಹಿತಿ ನೀಡುತ್ತೇವೆ. ಜನರನ್ನು ಮರೆತು ಮಲಗಿರುವ ಸರಕಾರವನ್ನು ನಾವು ಬಡಿದೆಬ್ಬಿಸುವ ಕೆಲಸ ಮಾಡುತ್ತಿದ್ದೇವೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ರವಿವಾರ ಜಿಲ್ಲೆಯ ಮೋಕಾದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಮುಂಬರಲಿರುವ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ್ದು, ಯಾರ ಶಕ್ತಿ ಏನು, ಜನರ ಬಳಿ ಕೆಲಸ ಮಾಡಿರುವವರು, ಜನತೆಯ ವಿಶ್ವಾಸ ಉಳಿಸಿಕೊಂಡಿರುವವರನ್ನು ಗಮನದಲ್ಲಿ ಇಟ್ಟುಕೊಂಡಿದ್ದೇವೆ. ಭಾರತ ಐಕ್ಯತಾ ಯಾತ್ರೆ ಮುಗಿದ ನಂತರ ಮಾತನಾಡುತ್ತೇನೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.
‘ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆಗೆ ಜನರಿಂದ ಉತ್ತಮ ಪ್ರೋತ್ಸಾಹ, ಸಹಕಾರ ಸಿಕ್ಕಿದೆ. ಚುನಾವಣೆ ಎದುರಾಗುತ್ತಿದ್ದು, ಕಾಂಗ್ರೆಸ್ 150 ಸ್ಥಾನ ಗೆಲ್ಲುವುದಾಗಿ ಹೇಳಿದ್ದೇನೆ. ನಾವು ಬೇರೆಡೆಯಿಂದ ಜನ ಕರೆದುಕೊಂಡು ಬಂದಿದ್ದೇವೆಂದು ಬಿಜೆಪಿಯವರು ಹೇಳುತ್ತಿದ್ದಾರೆ. ಆದರೆ, ಯಾತ್ರೆಯಲ್ಲಿ ಪಕ್ಷಬೇಧ ಮರೆತು ಸಹಸ್ರಾರು ಜನ ಭಾಗವಹಿಸಿದ್ದಾರೆ. ಅವರ ಪ್ರೀತಿ, ವಿಶ್ವಾಸ ಅಪಾರ. ಶ್ರಮ ಇದ್ದಲಿ ಫಲ ಎಂಬುದರಲ್ಲಿ ನಮಗೆ ನಂಬಿಕೆ ಇದೆ' ಎಂದು ನುಡಿದರು.
‘ರಾಜಕಾರಣದಲ್ಲಿರುವಾಗ ದೇಶದಲ್ಲಿ ಬದಲಾವಣೆ ತಂದು ಸಾಧನೆ ಮಾಡಬೇಕು. ದೇಶ ಒಡೆಯಲಾಗುತ್ತಿದ್ದು, ದ್ವೇಷ, ಆರ್ಥಿಕ ಸಂಕಷ್ಟ, ನಿರುದ್ಯೋಗ, ದುರಾಡಳಿತ ಹೆಚ್ಚಾಗಿದೆ. ಇದರಿಂದ ಬೇಸತ್ತು ಜನ ಹೆಚ್ಚು ಸಂಖ್ಯೆಯಲ್ಲಿ ಈ ಯಾತ್ರೆಯಲ್ಲಿ ಬರುತ್ತಿದ್ದಾರೆ. ನಾವು ಮಕ್ಕಳನ್ನು ಕರೆತಂದಿಲ್ಲ. ಅವರೇ ಓಡೋಡಿ ಬಂದು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಅವರ ಭಾವನೆಯನ್ನು ನಾವು ತಡೆಯಲು ಸಾಧ್ಯವೇ? ಮಕ್ಕಳು, ರೈತರು, ಮಹಿಳೆಯರು, ಕಾರ್ಮಿಕರು ಸೇರಿ ಎಲ್ಲ ವರ್ಗದ ಜನರ ಜತೆಗಿನ ರಾಹುಲ್ ಗಾಂಧಿ ಮಾತುಕತೆ ನಡೆಸಿದ್ದಾರೆ ಎಂದು ನುಡಿದರು.
‘ರಾಹುಲ್ ಕೇವಲ ಒಂದು ಮಗು, ಒಬ್ಬ ಯುವಕ, ಒಬ್ಬ ರೈತ, ಕಾರ್ಮಿಕ, ಮಹಿಳೆ ಜತೆ ಮಾತನಾಡಿದ್ದಲ್ಲ. ಎಲ್ಲ ವರ್ಗದ ಜನ ಸಮೂಹದ ಜತೆ ಮಾತುಕತೆ ನಡೆಸಿದ್ದಾರೆ. ಅವರ ನೋವು, ಕಷ್ಟ, ಭಾವನೆ ಅರಿತು, ಮುಂದೆ ಜನ ಆಶೀರ್ವಾದ ಮಾಡಿದಾಗ ಅವರಿಗೆ ಸರಿಯಾದ ರೀತಿಯಲ್ಲಿ ಪರಿಹಾರ ನೀಡುವ ಚಿಂತನೆ ಅವರದಾಗಿದೆ. ಬಳ್ಳಾರಿಯಲ್ಲಿ ಯಾತ್ರೆ ಮುಕ್ತಾಯವಾಗಿದ್ದು, ನಾಳೆ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಇದೆ. ಸಂಸದ ಡಿ ಕೆ ಸುರೇಶ್, ಉಗ್ರಪ್ಪ, ಶಾಸಕ ನಾಗೇಂದ್ರ ಸೇರಿದಂತೆ ಕೆಲವು ನಾಯಕರನ್ನು ಯಾತ್ರಿಗಳೆಂದು ಪರಿಗಣಿಸಿ, ಅವರಿಗೆ ಇಲ್ಲೆ ಮತ ಚಲಾಯಿಸುವ ಅವಕಾಶ ನೀಡಬೇಕೆಂದು ಮನವಿ ಮಾಡಲಾಗಿದೆ. ಉಳಿದವರು ಬೆಂಗಳೂರಿನಲ್ಲಿ ಮತ ಚಲಾಯಿಸಲಿದ್ದಾರೆ' ಎಂದು ಸ್ಪಷ್ಟಪಡಿಸಿದರು.
‘ನನ್ನ ಮತ್ತು ಸಿದ್ದರಾಮಯ್ಯನವರನ್ನು ನೆನಪಿಸಿಕೊಳ್ಳದಿದ್ದರೆ ಅವರಿಗೆ ಸಮಾಧಾನ ಆಗುವುದಿಲ್ಲ. ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಅವರು ನಮ್ಮನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಬಹಳ ಸಂತೋಷ. ಯಡಿಯೂರಪ್ಪ, ಯತ್ನಾಳ್, ಶ್ರೀರಾಮುಲು ಸೇರಿದಂತೆ ಯಾರು ಬೇಕಾದರೂ ರಾಹುಲ್ ಗಾಂಧಿ ಅವರ ಬಗ್ಗೆ ಮಾತನಾಡಲಿ. ಆದರೆ ಚಡ್ಡಿ ಹಾಕಿರುವ ಬಚ್ಚಾ ಮುಂದೆ ಪ್ಯಾಂಟು ಧರಿಸಿ, ಪಂಚೆ ಕಚ್ಚೆ ಕಟ್ಟಿ, ಕೆಲಸ ಮಾಡುತ್ತಿರುವವರನ್ನು ಜನ ಗಮನಿಸುತ್ತಿದ್ದಾರೆ. ಅವರ ವಯಸ್ಸಿನ ಮುಂದೆ, ಅವರ ಹಿರಿತನದ ಮುಂದೆ ನಾವು ಬಚ್ಚಾಗಳೇ. ಯಡಿಯೂರಪ್ಪ ಅವರನ್ನು ಏಕೆ ಅಧಿಕಾರದಿಂದ ತೆಗೆದಿರಿ ಎಂದು ರಾಹುಲ್ ಗಾಂಧಿ ಗೌರವಯುತವಾಗಿ ಕೇಳಿದ್ದಾರೆ. ಬಿಎಸ್ವೈಅದನ್ನು ಅರಿಯಬೇಕು' ಎಂದು ತಿರುಗೇಟು ನೀಡಿದರು.
‘ಯಾತ್ರೆ ಜನರ ಕಷ್ಟಕ್ಕೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಎಲ್ಲರೂ ಅಭಿಪ್ರಾಯಪಟ್ಟಿದ್ದಾರೆ. ಈ ಯಾತ್ರೆ ಯಶಸ್ಸಿನ ಶ್ರೇಯ ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರಿಗೆ ಸಲ್ಲಬೇಕು' ಎಂದ ಅವರು, ಪ್ರಿಯಾಂಕ್ ಗಾಂಧಿ ಅವರು ಸಿಮ್ಲಾ ಚುನಾವಣಾ ಪ್ರಚಾರದಲ್ಲಿದ್ದಾರೆ. ಇಂದು ದಿಲ್ಲಿಗೆ ಹೋಗಿದ್ದು, ರಾಜ್ಯದಲ್ಲಿ ಇನ್ನೂ ಎರಡು ದಿನ ಯಾತ್ರೆ ಬಾಕಿ ಇದೆ. ಅವರ ಭಾಗವಹಿಸುವಿಕೆ ಬಗ್ಗೆ ಶೀಘ್ರದಲ್ಲಿ ತಿಳಿಸುತ್ತೇನೆ' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಯಾತ್ರೆಯಿಂದ ಪಕ್ಷಕ್ಕೆ ಶಕ್ತಿ ಬಂದಿದ್ದು, ನನ್ನ ಆರೋಗ್ಯ ಗಟ್ಟಿಯಾಗಿದೆ. ನನ್ನ ಅನುಭವ ಹೆಚ್ಚಾಯ್ತು. ನಾನು ರಾಜ್ಯ ಹಾಗೂ ಬೇರೆ ರಾಜ್ಯಗಳಲ್ಲೂ ಇಂತಹ ಹಲವು ಸಂಘಟನೆ ಮಾಡಿದ್ದೇನೆ. ನಮ್ಮ ರಾಜ್ಯದಲ್ಲಿ ಯಾತ್ರೆ ಮಾಡಿದ್ದೇನೆ. ಮೇಕೆದಾಟು ಯಾತ್ರೆ, ಸ್ವಾತಂತ್ರ್ಯ ನಡಿಗೆ ನೋಡಿದ್ದೀರಿ. ಜತೆಗೂಡುವುದು ಆರಂಭ, ಜತೆಗೂಡಿ ಯೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂಬಂತೆ ಎಲ್ಲ ಕಾರ್ಯಕರ್ತರ, ನಾಯಕರನ್ನು ಸೇರಿಸಿ ಈ ಕಾರ್ಯಕ್ರಮ ಮಾಡಲಾಗಿದೆ' ಎಂದು ಅವರು ಹೇಳಿದರು.
‘ನಮ್ಮ ರಾಜ್ಯದವರೇ ಎಐಸಿಸಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದು, ಎಲ್ಲರೂ ಚುನಾವಣೆಯಲ್ಲಿ ಉತ್ಸುಕರಾಗಿ ಭಾಗವಹಿಸಲಿದ್ದಾರೆ. ಗಾಂಧಿ ಕುಟುಂಬ ಈ ಚುನಾವಣೆಯಲ್ಲಿ ಯಾವುದೇಹಸ್ತಕ್ಷೇಪ ಮಾಡದೆ ಪಕ್ಷದವರಿಗೆ ಸಂಪೂರ್ಣ ಜವಾಬ್ದಾರಿ ನೀಡಿದ್ದು, ಈ ಚುನಾವಣೆ ಪಾರದರ್ಶಕವಾಗಿ ನಡೆಯುತ್ತಿದೆ'
-ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.