ಮಂಡ್ಯ: ಕೆರೆಗೆ ಬಿದ್ದು ವಿದ್ಯಾರ್ಥಿ ಮೃತ್ಯು
ಕೆ.ಎಂ.ಹರ್ಷ - ಮೃತ ವಿದ್ಯಾರ್ಥಿ
ಮಂಡ್ಯ, ಅ.24: ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಕೆರೆಯಲ್ಲಿ ಕೈಕಾಲು ತೊಳೆಯುತ್ತಿದ್ದಾಗ ಅಯತಪ್ಪಿ ಬಿದ್ದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.
ಮಂಡ್ಯ ತಾಲೂಕು ಕಾರಸವಾಡಿ ಗ್ರಾಮದ ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತ ಕಾರಸವಾಡಿ ಮಹದೇವು ಅವರ ಪುತ್ರ ಕೆ.ಎಂ.ಹರ್ಷ(19) ಮೃತ ಪಟ್ಟಿರುವ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಮಂಡ್ಯದ ಬಿಜಿಎಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ತರಗತಿಯಲ್ಲಿ ಕಲಿಯುತ್ತಿದ್ದ ಹರ್ಷ, ಕಾರಸವಾಡಿಯಿಂದ ಕೊಪ್ಪ ಗ್ರಾಮದ ತನ್ನ ಸಂಬಂಧಿಕತೆ ಮನೆಗೆ ಹೋಗಿದ್ದ ವೇಳೆ ಈ ದರುಂತ ಸಂಭವಿಸಿದೆ ಎನ್ನಲಾಗಿದೆ.
ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಶವಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಯಿತು. ನಾಳೆ(ಮಂಗಳವಾರ) ಬೆಳಗ್ಗೆ ಕಾರಸವಾಡಿಯಲ್ಲಿ ಶವಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
Next Story