-

2022ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

-

ಬೆಂಗಳೂರು: ಇಸ್ರೋ ಮಾಜಿ ನಿರ್ದೇಶಕ ಕೆ.ಶಿವನ್, ಹಿರಿಯ ಸಾಹಿತಿ ಅ.ರಾ. ಮಿತ್ರ, ವಿಕಲಚೇತನ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್, ಸೋಲಿಗ ಸಮುದಾಯದ ಮಾದಮ್ಮ, ಪೌರಸೇನಾನಿ ಮಲ್ಲಮ್ಮ ಸೇರಿದಂತೆ ಅರವತ್ತೇಳನೆ ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ 67 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇದೇ ವೇಳೆ 75ನೆ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳಿಗೆ ‘ಅಮೃತ ಮಹೋತ್ಸವ ರಾಜ್ಯೋತ್ಸವ ಪ್ರಶಸ್ತಿ’ಯನ್ನು ರಾಜ್ಯ ಸರಕಾರ ರವಿವಾರ ಪ್ರಕಟಿಸಿದೆ.

ಸಾಹಿತಿ ಪ್ರೊ.ಕೃಷ್ಣೇಗೌಡ, ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್, ವನ ಸಂರಕ್ಷಣೆಗಾಗಿ ಜೀವನವನ್ನೆ ಮುಡುಪಾಗಿಟ್ಟ ರಾಮನಗರದ ಸಾಲುಮರದ ನಿಂಗಣ್ಣ, ಹಿರಿಯ ನಟರಾದ ದತ್ತಣ್ಣ, ಅವಿನಾಶ್, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ ಕಲಾವಿದರಾದ ಡಾ.ಎಂ.ಪ್ರಭಾಕರ ಜೋಷಿ, ಸುಬ್ರಹ್ಮಣ್ಯ ಧಾರೇಶ್ವರ, ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್.ಶ್ರೀಶಾ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ. ನಾಗರಾಜ್ ಸೇರಿದಂತೆ 67 ಮಂದಿ ಗಣ್ಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹತ್ತು ಸೇವಾ ಸಂಘಟನೆಗಳನ್ನು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಮೈಸೂರಿನ ರಾಮಕೃಷ್ಣ ಆಶ್ರಮ, ಬೆಂಗಳೂರಿನ ಅಮೃತ ಶಿಶು ನಿವಾಸ, ಸುಮನಾ ಪೌಂಡೇಶನ್, ಹಾವೇರಿಯ ಅಗಡಿ ಫಾಮ್ರ್ಸ್, ಗದಗ ಜಿಲ್ಲೆಯ ಲಿಂಗಾಯತ ಪ್ರಗತಿಶೀಲ ಸಂಸ್ಥೆ ಸೇರಿ ಹತ್ತು ಸಂಘಟನೆಗಳನ್ನು ಆಯ್ಕೆ ಮಾಡಲಾಗಿದೆ.

ನ.1ಕ್ಕೆ ಪ್ರಶಸ್ತಿ ಪ್ರದಾನ: ‘ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಇದೇ ಮೊದಲ ಬಾರಿಗೆ 5ಲಕ್ಷ ರೂ.ನಗದು, 25 ಗ್ರಾಂ ಚಿನ್ನ, ಪ್ರಶಸ್ತಿ ಫಲಕವನ್ನು ನೀಡಲಾಗುತ್ತಿದೆ. ನ.1ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಹಿಂದೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ 1ಲಕ್ಷ ರೂ.ನಗದು ಹಾಗೂ 20ಗ್ರಾಂ ಚಿನ್ನವನ್ನು ನೀಡಲಾಗುತ್ತಿದ್ದು, ಆ ಮೊತ್ತವನ್ನು 5ಲಕ್ಷ ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ. ಅದೇ ರೀತಿಯಲ್ಲಿ 10 ಸಂಸ್ಥೆಗಳಿಗೂ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಿಳಿಸಿದೆ.

‘ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಸಮತೋಲಿತವಾಗಿದ್ದು, ಎಲೆಮರೆಯ ಸಾಧಕರನ್ನು ಗುರುತಿಸಲಾಗಿದೆ. ಎಲ್ಲ ಆಯಾಮಗಳಲ್ಲೂ ಅಳೆದು-ತೂಗಿ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ. ಅಸಾಮಾನ್ಯ ಸಾಧನೆ ಮಾಡಿದ ಶ್ರೀಸಾಮಾನ್ಯರು, ಅರ್ಹ ಸಾಧಕರನ್ನು ಗುರುತಿಸಿದ್ದೇವೆ. ಒಂದರ್ಥದಲ್ಲಿ ಕೇಂದ್ರ ಸರಕಾರದ ಪದ್ಮ ಪ್ರಶಸ್ತಿ ಮಾದರಿಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ. ನಾವು ಆಯ್ಕೆ ಮಾಡಿದ ವ್ಯಕ್ತಿಗಳಲ್ಲಿ ಕೆಲವು ಸಾಧಕರು ಎಷ್ಟು ಮುಗ್ಧರಾಗಿದ್ದರೆಂದರೆ ನಿಮ್ಮ ಫೋಟೊ ಕೊಡಿ ಎಂದಾಗ, ಇಲ್ಲ ಎಂದು ಹೇಳಿದ್ದರು. ಅಷ್ಟರ ಮಟ್ಟಿಗೆ ಅವರು ತಮ್ಮ ತಮ್ಮ ಕ್ಷೇತ್ರದಲ್ಲಿ ಪ್ರಚಾರ ಬಯಸದೇ ಕಾರ್ಯ ಸಾಧಕರಾಗಿದ್ದರು. ಇಂಥವರನ್ನು ಆಯ್ಕೆ ಮಾಡಿದ್ದೇವೆ ಎಂದು ಹೇಳುವುದಕ್ಕೆ ಅಭಿಮಾನವಾಗುತ್ತದೆ. ದೈವ ನರ್ತಕರು ಹಾಗೂ ವೀರಗಾಸೆ ಕಲಾವಿದರು, ಪೌರ ಸೇನಾನಿಗಳನ್ನು ಗೌರವಿಸಿದ್ದೇವೆ. ಈ ಆಯ್ಕೆಯಿಂದ ಪ್ರಶಸ್ತಿಯ ಮೌಲ್ಯ ನಿಜಕ್ಕೂ ಹೆಚ್ಚಿದೆ’
-ವಿ.ಸುನಿಲ್ ಕುಮಾರ್ ಕನ್ನಡ-ಸಂಸ್ಕೃತಿ ಸಚಿವ

ಅಮೃತ ಮಹೋತ್ಸವ ರಾಜ್ಯೋತ್ಸವ ಪ್ರಶಸ್ತಿ: ರಾಮಕೃಷ್ಣ ಆಶ್ರಮ- ಮೈಸೂರು, ತಲಸೆಮಿಯಾ ಮತ್ತು ಹೀಮೋಫೀಲಿಯ-ಬಾಗಲಕೋಟೆ, ಲಿಂಗಾಯುತ ಪ್ರಗತಿಶೀಲ ಸಂಸ್ಥೆ-ಗದಗ, ಅಗಡಿ ತೋಟ-ಹಾವೇರಿ, ಅಮೃತ ಶಿಶು ನಿವಾಸ-ಬೆಂಗಳೂರು, ಸುಮನಾ ಫೌಂಡೇಷನ್-ಬೆಂಗಳೂರು, ಯುವ ವಾಹಿನಿ ಸಂಸ್ಥೆ-ದಕ್ಷಿಣ ಕನ್ನಡ, ನಲೆ ಫೌಂಡೇಶನ್-ಅನಾಥ ಮಕ್ಕಳ ಪುನರ್ವಸತಿ ಕೇಂದ್ರ-ಬೆಂಗಳೂರು, ನಮ್ಮನೆ ಸುಮ್ಮನೆ-ನಿರಾಶ್ರಿತ ಅಕ್ರಮ (ಮಂಗಳಮುಖಿ ಸಂಸ್ಥೆ)-ಬೆಂಗಳೂರು ಹಾಗೂ ಶ್ರೀ ಉಮಾಮಹೇಶ್ವರಿ ಹಿಂದುಳಿದ ವರ್ಗ ಅಭಿವೃದ್ಧಿ ಟ್ರಸ್ಟ್-ಮಂಡ್ಯ. 

ಪ್ರಶಸ್ತಿಗೆ ಆಯ್ಕೆಗೊಂಡವರ ಪಟ್ಟಿ ಇಲ್ಲಿದೆ.

ಸಂಕೀರ್ಣ ಕ್ಷೇತ್ರ: ಸುಬ್ಬರಾಮ ಶೆಟ್ಟಿ / ಆರ್‌ವಿ ಸಂಸ್ಥೆಗಳು, ವಿದ್ವಾನ್‌ ಗೋಪಾಲಕೃಷ್ಣ ಶರ್ಮ, ಸೋಲಿಗರ ಮಾದಮ್ಮ

ಸೈನಿಕ ಕ್ಷೇತ್ರ: ಸುಬೇದಾರ್‌ ಬಿ.ಕೆ.ಕುಮಾರಸ್ವಾಮಿ

ಪತ್ರಿಕೋದ್ಯಮ ಕ್ಷೇತ್ರ: ಹೆಚ್‌.ಆರ್‌.ಶ್ರೀಶಾ,  ಜಿ.ಎಂ. ಶಿರಹಟ್ಟಿ 

ವಿಜ್ಞಾನ - ತಂತ್ರಜ್ಞಾನ ಕ್ಷೇತ್ರ: ಕೆ. ಶಿವನ್‌, ಡಿ.ಆರ್‌. ಬಳೂರಗಿ

ಕೃಷಿ ಕ್ಷೇತ್ರ: ಗಣೇಶ್ ತಿಮ್ಮಯ್ಯ, ಚಂದ್ರಶೇಖರ್ ನಾರಾಯಣಪುರ

ಪರಿಸರ ಕ್ಷೇತ್ರ: ಸಾಲುಮರದ ನಿಂಗಣ್ಣ

ಪೌರಕಾರ್ಮಿಕ ಕ್ಷೇತ್ರ: ಮಲ್ಲಮ್ಮ ಹೂವಿನಹಡಗಲಿ

ಆಡಳಿತ ಕ್ಷೇತ್ರ: ಎಲ್‌.ಹೆಚ್‌.ಮಂಜುನಾಥ್‌, ಮದನ್ ಗೋಪಾಲ್‌

ಹೊರನಾಡು ಕ್ಷೇತ್ರ: ದೇವಿದಾಸ ಶೆಟ್ಟಿ, ಅರವಿಂದ್ ಪಾಟೀಲ್‌, ಕೃಷ್ಣಮೂರ್ತಿ ಮಾಂಜಾ

ಹೊರದೇಶ ಕ್ಷೇತ್ರ: ರಾಜ್‌ಕುಮಾರ್‌

ವೈದ್ಯಕೀಯ ಕ್ಷೇತ್ರ: ಡಾ.ಹೆಚ್‌.ಎಸ್‌.ಮೋಹನ್‌, ಡಾ.ಬಸವಂತಪ್ಪ

ಯಕ್ಷಗಾನ: ಎಂ.ಎ.ನಾಯಕ್(ಉಡುಪಿ), ಸುಬ್ರಹ್ಮಣ್ಯ ಧಾರೇಶ್ವರ(ಉತ್ತರ ಕನ್ನಡ), ಸರಪಾಡಿ ಅಶೋಕ್ ಶೆಟ್ಟಿ(ದಕ್ಷಿಣ ಕನ್ನಡ).

ಬಯಲಾಟ: ಅಡವಯ್ಯ ಚ ಹಿರೇಮಠ್(ದೊಡ್ಡಾಟ)-ಧಾರವಾಡ, ಶಂಕರಪ್ಪ ಮಲ್ಲಪ್ಪ ಹೊರಪೇಟೆ (ಕೊಪ್ಪಳ), ಎಚ್.ಪಾಂಡುರಂಗಪ್ಪ(ಬಳ್ಳಾರಿ).

ಸಾಹಿತ್ಯ: ಶಂಕರ ಚಚಡಿ(ಬೆಳಗಾವಿ), ಪ್ರೊ.ಕೃಷ್ಣೇಗೌಡ(ಮೈಸೂರು), ಅಶೋಕ್ ಬಾಬು ನೀಲಗಾರ್(ಬೆಳಗಾವಿ), ಪ್ರೊ.ಅ.ರಾ.ಮಿತ್ರ(ಹಾಸನ), ರಾಮಕೃಷ್ಣ ಮರಾಠೆ(ಕಲಬುರಗಿ).

ರಂಗಭೂಮಿ ಕ್ಷೇತ್ರ: ತಿಪ್ಪಣ್ಣ ಹೆಳವರ್‌, ಲಲಿತಾಬಾಯಿ ಚನ್ನದಾಸರ್‌, ಗುರುನಾಥ್ ಹೂಗಾರ್‌, ಪ್ರಭಾಕರ್ ಜೋಶಿ, ಶ್ರೀಶೈಲ ಹುದ್ದಾರ್‌

ಸಂಗೀತ ಕ್ಷೇತ್ರ: ನಾರಾಯಣ.ಎಂ, ಅನಂತಚಾರ್ಯ ಬಾಳಾಚಾರ್ಯ, ಅಂಜಿನಪ್ಪ ಸತ್ಪಾಡಿ, ಅನಂತ ಕುಲಕರ್ಣಿ

ಜಾನಪದ ಕ್ಷೇತ್ರ: ಸಹಮದೇವಪ್ಪ ಈರಪ್ಪ ನಡಿಗೇರ್‌, ಗುಡ್ಡ ಪಾಣಾರ, ಕಮಲಮ್ಮ ಸೂಲಗಿತ್ತಿ, ಸಾವಿತ್ರಿ ಪೂಜಾರ್‌, ರಾಚಯ್ಯ ಸಾಲಿಮಠ, ಮಹೇಶ್ವರ್ ಗೌಡ

ಚಲನಚಿತ್ರ ಕ್ಷೇತ್ರ: ದತ್ತಣ್ಣ, ಅವಿನಾಶ್‌

ಕಿರುತೆರೆ ಕ್ಷೇತ್ರ: ಸಿಹಿಕಹಿ ಚಂದ್ರು

ಶಿಕ್ಷಣ ಕ್ಷೇತ್ರ: ಕೋಟಿ ರಂಗಪ್ಪ, ಡಾ.ಎಂ.ಜಿ.ನಾಗರಾಜ್

ಕ್ರೀಡೆ ಕ್ಷೇತ್ರ: ದತ್ತಾತ್ರೇಯ ಗೋವಿಂದ ಕುಲಕರ್ಣಿ, ರಾಘವೇಂದ್ರ ಅಣ್ಣೇಕರ್

ನೃತ್ಯ ಕ್ಷೇತ್ರ: ಕಮಲಾಕ್ಷಾಚಾರ್ಯ

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top