ಮೈಸೂರು | ಕೆ.ಆರ್. ನಗರದ ಪಟ್ಟಣದಲ್ಲಿ ಜನರ ಮೇಲೆ ಎರಗಿದ ಚಿರತೆ: ವೀಡಿಯೊ ವೈರಲ್
ಮೈಸೂರು, ನ.4: ಹಾಡುಹಗಲೇ ಮೈಸೂರು ಜಿಲ್ಲೆ ಕೆ.ಆರ್. ನಗರದ ಪಟ್ಟಣದಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡು ಜನರ ಮೇಲೆ ಎರಗಿರುವ ವೀಡಿಯೋ ವೈರಲ್ ಆಗಿದೆ.
ಕೆ.ಆರ್.ನಗರ ಪಟ್ಟಣದ ಹೊರವಲಯದಲ್ಲಿರುವ ಕನಕ ನಗರದಲ್ಲಿ ಶುಕ್ರವಾರ ಬೆಳಗ್ಗೆ ಚಿರತೆ ಕಾಣಿಸಿಕೊಂಡಿದ್ದು, ಕೆಲವರ ಮೇಲೆ ದಾಳಿ ನಡೆಸಿದೆ. ಮುಳ್ಳೂರು ರಸ್ತೆ ಬಳಿಯ ರಾಜ ಪ್ರಕಾಶ್ ಶಾಲೆಯ ಹತ್ತಿರ ಬೀದಿನಾಯಿಯನ್ನು ಬೆನ್ನಟ್ಟಿಕೊಂಡು ಹೋದ ಚಿರತೆ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸವಾರನ ಮೇಲೆ ಎರಗಿದೆ. ಆನಂತರ ಮತ್ತಿಬ್ಬರ ಮೇಲೂ ದಾಳಿ ನಡೆಸಿದೆ.
ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಅರವಳಿಕೆ ಮದ್ದು ನೀಡಿ ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾದರು.
Next Story