150 ಕೋಟಿಯ ಆಪರೇಷನ್ ಕಮಲ; BL ಸಂತೋಷ್ ಎಂಬ ವ್ಯಕ್ತಿಯ ಐನಾತಿ ಕೆಲಸ ಈಗ ಹೊರಬರುತ್ತಿದೆ: ಕಾಂಗ್ರೆಸ್ ಆರೋಪ
''ಕರ್ನಾಟಕದ ಆಪರೇಷನ್ ಕಮಲದ ರಹಸ್ಯವೂ ಬಯಲು''
ಬೆಂಗಳೂರು: ''ತೆಲಂಗಾಣದಲ್ಲಿ 150 ಕೋಟಿಯ ಆಪರೇಷನ್ ಕಮಲದ ಡೀಲ್ನಲ್ಲಿ ಸಿಕ್ಕಿಬಿದ್ದವರು ಕರ್ನಾಟಕದ ಕುದುರೆ ವ್ಯಾಪಾರದಲ್ಲೂ ಪಾತ್ರ ವಹಿಸಿದ್ದರು ಎಂಬುದು ಬಯಲಾಗಿದೆ. ಬಿ ಎಲ್ ಸಂತೋಷ್ ಎಂಬ ವ್ಯಕ್ತಿಯ ಐನಾತಿ ಕೆಲಸ ಈಗ ಹೊರಬರುತ್ತಿದೆ'' ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ' ಕುದುರೆವ್ಯಾಪಾರದಲ್ಲಿ ಸಂತೋಷ ಕೂಟದ ನೇತೃತ್ವ ಇದ್ದಿದ್ದಕ್ಕೆ ಬಿ.ಎಸ್ ಯಡಿಯೂರಪ್ಪ ಅವರನ್ನು ಪದಚ್ಯುತಿಗೊಳಿಸಿದ್ದೇ?' ಎಂದು ಪ್ರಶ್ನೆ ಮಾಡಿದೆ.
'ಅಮಿತ್ ಶಾ ಗೃಹ ಸಚಿವರೋ ಅಥವಾ ಪ್ರಜಾಪ್ರಭುತ್ವವನ್ನು ಕೊಲ್ಲುತ್ತಿರುವ ಕುದುರೆ ವ್ಯಾಪಾರದ ದಲ್ಲಾಳಿಯೋ? ಆಪರೇಷನ್ ಕಮಲ ಎಂಬ ದಗಾಕೊರ ಕೆಲಸದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ, ಗೃಹಸಚಿವ ಅಮಿತ್ ಷಾ, ಬಿ.ಎಲ್ ಸಂತೋಷ್ ಅವರುಗಳ ಹೆಸರುಗಳು ಬಹಿರಂಗವಾಗಿದೆ, ಈ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಬೇಕು' ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಇತ್ತೀಚೆಗೆ ತೆಲಂಗಾಣದಲ್ಲಿ ಟಿಆರ್ಎಸ್ ಪಕ್ಷದ ಶಾಸಕರನ್ನು ಖರೀದಿಸಿ, ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಅಲ್ಲಿನ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ವಿಡಿಯೊ ಒಂದನ್ನು ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋದಲ್ಲಿ ಶಾಸಕರಿಗೆ ಆಮಿಷವೊಡ್ಡುವ ಮಧ್ಯವರ್ತಿಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ಹೆಸರುಗಳನ್ನು ಹೇಳಿರುವುದು ವಿಡಿಯೊದಲ್ಲಿದೆ.
ತೆಲಂಗಾಣದಲ್ಲಿ 150 ಕೋಟಿಯ ಆಪರೇಷನ್ ಕಮಲದ ಡೀಲ್ನಲ್ಲಿ ಸಿಕ್ಕಿಬಿದ್ದವರು ಕರ್ನಾಟಕದ ಕುದುರೆ ವ್ಯಾಪಾರದಲ್ಲೂ ಪಾತ್ರ ವಹಿಸಿದ್ದರು ಎಂಬುದನ್ನು ಬಾಯ್ಬಿಟ್ಟಿದ್ದಾರೆ.
— Karnataka Congress (@INCKarnataka) November 4, 2022
ಬಿ ಎಲ್ ಸಂತೋಷ್ ಎಂಬ ವ್ಯಕ್ತಿಯ ಐನಾತಿ ಕೆಲಸ ಈಗ ಹೊರಬರುತ್ತಿದೆ,
ಕುದುರೆವ್ಯಾಪಾರದಲ್ಲಿ ಸಂತೋಷ ಕೂಟದ ನೇತೃತ್ವ ಇದ್ದಿದ್ದಕ್ಕೆ @BSYBJP ಅವರನ್ನು ಪದಚ್ಯುತಿಗೊಳಿಸಿದ್ದೇ? pic.twitter.com/hA9xlHBmnR