Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಕನ್ನಡತಿ ಮೇಘನ್‌ ಶ್ರೀನಿವಾಸ್‌ ಜಯಭೇರಿ

ಕೆ.ಆರ್. ಶ್ರೀನಾಥ್ ಅಟ್ಲಾಂಟಕೆ.ಆರ್. ಶ್ರೀನಾಥ್ ಅಟ್ಲಾಂಟ11 Nov 2022 8:51 PM IST
share
ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಕನ್ನಡತಿ ಮೇಘನ್‌ ಶ್ರೀನಿವಾಸ್‌ ಜಯಭೇರಿ

ಬೆಂಗಳೂರು: ನವೆಂಬರ್ 8ರಂದು ಅಮೆರಿಕಾದಲ್ಲಿ ನಡೆದ ಚುನಾವಣೆಯಲ್ಲಿ, ಐಯೋವ ರಾಜ್ಯದ ಅಸೆಂಬ್ಲಿಗೆ (Iowa State House) ಶಾಸಕಿಯಾಗಿ ಯುವ ಕನ್ನಡತಿ ಡಾ. ಮೇಘನ್‌ ಲಕ್ಷ್ಮಿ ಶ್ರೀನಿವಾಸ್‌ ಆಯ್ಕೆಯಾಗಿದ್ದಾರೆ. ಅವರು ಈ ಸ್ಥಾನಕ್ಕೆ ಆಯ್ಕೆಯಾದ ಪ್ರಪ್ರಥಮ ದಕ್ಷಿಣ ಏಷ್ಯಾ ಮೂಲದವರು.

ಡೆಮೊಕ್ರಟಿಕ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ಮೇಘನ್,‌ ರಿಪಬ್ಲಿಕನ್‌ ಪಕ್ಷದ ಎದುರಾಳಿಯನ್ನು ದೊಡ್ಡ ಅಂತರದಲ್ಲಿ ಸೋಲಿಸಿದ್ದಾರೆ. ಐಯೋವಾ ವಿಧಾನಸಭೆಗೆ ಶಾಸಕಿಯಾಗಿ ಆಯ್ಕೆಯಾದ ಅತಿ ಚಿಕ್ಕ ವಯಸ್ಸಿನ ಬಿಳಿಯ ವರ್ಣದವರಲ್ಲದ ವ್ಯಕ್ತಿ ಎಂದು ಅಲ್ಲಿನ ಪತ್ರಿಕೆಗಳು ವರದಿ ಮಾಡಿವೆ. ಅವರು ಪ್ರತಿನಿಧಿಸುವ ಕ್ಷೇತ್ರದಲ್ಲಿ ಏಷ್ಯನ್‌ ಮೂಲದ ಜನಸಂಖ್ಯೆ ಕೇವಲ 2-3% . ಹಾಗಾಗಿ ಅಲ್ಲಿ, ಯುವ ಕನ್ನಡತಿಯ ಗೆಲುವು ವಿಶೇಷವಾಗಿದೆ. ಲೋವಾ ಹೌಸ್ ಡಿಸ್ಟ್ರಿಕ್ 30ರಿಂದ ಸ್ಪರ್ಧಿಸಿದ ಮೇಘನ್ ಶೇ 63ರಷ್ಟು ಮತ ಪಡೆಯುವ ಮೂಲಕ ಗೆಲುವು ಸಾಧಿಸಿದ್ದಾರೆ.

ವೃತ್ತಿಯಲ್ಲಿ ವೈದ್ಯೆಯಾಗಿರುವ ಮೇಘನ್‌, ತಮ್ಮ ವೈದ್ಯಕೀಯ ಶಿಕ್ಷಣವನ್ನು ಪ್ರತಿಶ್ಟಿತ ಹಾವರ್ಡ್ ವಿವಿ ಮತ್ತು ಜಾನ್‌ ಹಾಪ್‌ಕಿ‌ನ್ಸ್‌ ಮೆಡಿಕಲ್‌ ಸ್ಕೂಲ್‌ನಿಂದ ಪಡೆದಿದ್ದಾರೆ. ತಮ್ಮ ಪೋಷಕರು ನೆಲೆಸಿರುವ ‌ಐಯೋವಾ ರಾಜ್ಯದ ಡಿ ಮೋಯಿನ್ಸ್ ನಗರದಲ್ಲಿ ‌ ಸಾಮಾಜಿಕ ಆರೋಗ್ಯ ಮತ್ತು ಸಾಂಕ್ರಾಮಿಕ ರೋಗ ಚಿಕಿತ್ಸೆ ತಜ್ಞ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಪ್ರದೇಶದ ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆ, ಮಹಿಳೆಯರ ಆರೋಗ್ಯ ಮತ್ತು ಸಬಲೀಕರಣ ಮತ್ತು ಕುಟುಂಬ ಯೋಜನೆಗೆ ಸಂಬಂಧಿಸಿದ ವಿಷಯಗಳಲ್ಲಿ ಅತೀವ ಆಸಕ್ತಿ ಹೊಂದಿರುವ ಮೇಘನ್, ಆ ನಿಟ್ಟಿನಲ್ಲಿ ಕೆಲಸ ಮಾಡುವ ಹುರುಪಿನಲ್ಲಿದ್ದಾರೆ. ಈ ವಿಷಯಗಳಿಗೆ ಹೆಚ್ಚಿನ ಒತ್ತುಕೊಟ್ಟು ಪ್ರಚಾರವನ್ನೂ ಮಾಡಿದ್ದರು.

ಮೇಘನ್‌ ರವರ ತಂದೆ ಡಾ. ಜವರಯ್ಯ ಶ್ರೀನಿವಾಸಪ್ಪ ಮತ್ತು ತಾಯಿ ಡಾ.ಗೀತಾ ಅವರು ಕುಣಿಗಲ್ ತಾಲ್ಲೂಕಿನ ಕೊಡಗೀಹಳ್ಳಿಯ ರೈತ ಕುಟುಂಬದವರು. ಇಬ್ಬರೂ ಬೆಂಗಳೂರಿನ ಕೃಷಿ ವಿವಿ ಯಲ್ಲಿ ಓದಿದ ಪಶುವೈದ್ಯಕೀಯ ವಿಜ್ಞಾನಿಗಳಾಗಿದ್ದಾರೆ. ಕಳೆದ 40 ವರ್ಷಗಳಿಂದ ಅಮೆರಿಕಾದಲ್ಲಿ ನೆಲೆಸಿದ್ದಾರೆ. ಮಗಳ ಸಾಧನೆಗೆ ಇಬ್ಬರೂ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ಮಧ್ಯಂತರ ಚುನಾವಣೆಯಲ್ಲಿ ಮತದಾರರಿಗೆ ಬೆಲೆ ಏರಿಕೆ, ಹಣದುಬ್ಬರ, ಅಕ್ರಮ ವಲಸಿಗರು, ಅಪರಾಧಗಳ ಹೆಚ್ಚಳ ಮುಂತಾದವುಗಳು ಪ್ರಮುಖ ವಿಷಯವಾಗಿದ್ದವು. 

ಈ ಬಾರಿ ಅಮೆರಿಕದ ಸಂಸತ್ ಗೆ ಆಡಳಿತರೂಢ ಡೆಮಾಕ್ರಟಿಕ್‌ ಪಕ್ಷದಿಂದ ದಾಖಲೆ ಸಂಖ್ಯೆಯ ಐವರು ಭಾರತೀಯ ಮೂಲದ ಸಂಸದರೂ ಆಯ್ಕೆಯಾಗಿದ್ದಾರೆ. 

share
ಕೆ.ಆರ್. ಶ್ರೀನಾಥ್ ಅಟ್ಲಾಂಟ
ಕೆ.ಆರ್. ಶ್ರೀನಾಥ್ ಅಟ್ಲಾಂಟ
Next Story
X