ಪ್ರಿಯಾಂಕ್ ಖರ್ಗೆಗೆ ಶೂಟ್ ಮಾಡುವ ಬೆದರಿಕೆ ಹಾಕಿದ BJP ಮುಖಂಡ: ಕಾಂಗ್ರೆಸ್ ಕಿಡಿ
ಬೆಂಗಳೂರು: ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡಲು ನಾವು ಸಿದ್ಧರಿದ್ದೇವೆ' ಎಂದು ಕಲಬುರಗಿ ಜಿಲ್ಲೆಯ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಈ ಬಗ್ಗೆ ಕಾಂಗ್ರೆಸ್ ಕಿಡಿಕಾರಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, '' ಭಯೋತ್ಪಾದಕ ಗೋಡ್ಸೆ ಸಂತತಿಯವರಾದ ಬಿಜೆಪಿಯ ತಾಲಿಬಾನ್ ಮನಸ್ಥಿತಿ, ಸಂಸ್ಕೃತಿ ಹೊರಬಂದಿದೆ. ಹಿಂದೆ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದ ಬಿಜೆಪಿ ಇಂದು ಪ್ರಿಯಾಂಕ್ ಖರ್ಗೆ ಅವರಿಗೆ ಶೂಟ್ ಮಾಡುವ ಬೆದರಿಕೆ ಹಾಕುತ್ತಿದೆ. ಬ್ರಿಟಿಷರ ಗುಂಡುಗಳಿಗೇ ಹೆದರದ ಕಾಂಗ್ರೆಸ್ ಐಸಿಸ್ ಉಗ್ರರಂತಿರುವ ಬಿಜೆಪಿ ಹೇಡಿಗಳಿಗೆ ಹೆದರುವುದೇ'' ಎಂದು ಕಿಡಿಕಾರಿದೆ.
ಇತ್ತೀಚೆಗೆ 'ಪ್ರಿಯಾಂಕ್ ಖರ್ಗೆ ನಾಪತ್ತೆ' ಎಂಬ ಪೋಸ್ಟರ್ ಅಳವಡಿಸಿದ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ, ' ನಾವು ಮತ್ತು ನಮ್ಮ ಕಾರ್ಯಕರ್ತರು ಮನಸ್ಸು ಮಾಡಿದರೆ ಬಿಜೆಪಿ ಲೀಡರ್ಗಳು ತಿರುಗಾಡಲು ಬಿಡುವುದಿಲ್ಲ. ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದವರು ಸತ್ತೋಗಿಲ್ಲ' ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮಣಿಕಂಠ ರಾಠೋಡ್ 'ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡಲು ನಾವು ಸಿದ್ಧರಿದ್ದೇವೆ' ಎಂದು ಹೇಳಿಕೆ ನೀಡಿದ್ದರು.
ಭಯೋತ್ಪಾದಕ ಗೋಡ್ಸೆ ಸಂತತಿಯವರಾದ ಬಿಜೆಪಿಯ ತಾಲಿಬಾನ್ ಮನಸ್ಥಿತಿ, ಸಂಸ್ಕೃತಿ ಹೊರಬಂದಿದೆ.
— Karnataka Congress (@INCKarnataka) November 12, 2022
ಹಿಂದೆ @siddaramaiah ಅವರ ಮೇಲೆ ಮೊಟ್ಟೆ ಎಸೆದ ಬಿಜೆಪಿ ಇಂದು @PriyankKharge ಅವರಿಗೆ ಶೂಟ್ ಮಾಡುವ ಬೆದರಿಕೆ ಹಾಕುತ್ತಿದೆ.
ಬ್ರಿಟಿಷರ ಗುಂಡುಗಳಿಗೇ ಹೆದರದ ಕಾಂಗ್ರೆಸ್ ಐಸಿಸ್ ಉಗ್ರರಂತಿರುವ@BJP4Karnataka ಹೇಡಿಗಳಿಗೆ ಹೆದರುವುದೇ. pic.twitter.com/dEhNBQSXom