ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ಸರಕಾರ ರದ್ದುಗೊಳಿಸಿದೆ: ನಳಿನ್ ಕುಮಾರ್ ಕಟೀಲ್
ಬೆಂಗಳೂರು, ನ.14: 'ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರವನ್ನು ಕೇಂದ್ರ ಸರಕಾರ ರದ್ದು ಮಾಡಿದೆ' ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, ''ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು'' ಎಂದು ತಿಳಿಸಿದ್ದಾರೆ.
''ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ'' ಎಂದು ಟ್ವೀಟ್ ಮಾಡಿದ್ದಾರೆ.
ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ಶ್ರೀ @nitin_gadkari ಹಾಗೂ ಪ್ರಧಾನಿ ಶ್ರೀ @narendramodi ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.
— Nalinkumar Kateel (@nalinkateel) November 14, 2022
ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ.