Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ...

ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣದ ಗುರಿ: ಮುಖ್ಯಮಂತ್ರಿ ಬೊಮ್ಮಾಯಿ

14 Nov 2022 7:06 PM IST
share
ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿ ನಿರ್ಮಾಣದ ಗುರಿ: ಮುಖ್ಯಮಂತ್ರಿ ಬೊಮ್ಮಾಯಿ

ಕಲಬುರಗಿ, ನ. 14: ರಾಜ್ಯದಲ್ಲಿ ಒಂದೇ ವರ್ಷದಲ್ಲಿ 8ಸಾವಿರ ಶಾಲಾ ಕೊಠಡಿಗಳು ಹಾಗೂ 4 ಸಾವಿರ ಹೊಸ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸೋಮವಾರ ಜಿಲ್ಲೆಯ ಮಡಿಹಾಳ ತಾಂಡಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ‘ವಿವೇಕ’ ಶಾಲಾ ಕೊಠಡಿಗಳ ಯೋಜನೆಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕದ ಪ್ರತಿ ಕ್ಷೇತ್ರದಲ್ಲಿ 50 ಕೊಠಡಿಗಳಂತೆ ಒಟ್ಟು 2ಸಾವಿರ ಶಾಲಾ ಕೊಠಡಿಗಳನ್ನು ಇದೇ ವರ್ಷದಲ್ಲಿ ನಿರ್ಮಿಸಲಾಗುವುದು. ಕಲ್ಯಾಣ ಕರ್ನಾಟಕಕ್ಕೆ 1060 ಕೊಠಡಿಗಳು ಮಂಜೂರಾಗಿದ್ದು, 900 ಕೊಠಡಿಗಳ ನಿರ್ಮಾಣಕ್ಕೆ ತಕ್ಷಣ ಮಂಜೂರಾತಿ ನೀಡಲಾಗುವುದು’ ಎಂದರು.

‘ಒಂದೇ ವರ್ಷದಲ್ಲಿ 7,600 ಶಾಲಾ ಕೊಠಡಿಗಳ ನಿರ್ಮಾಣ ಯೋಜನೆ ಯಾವುದೇ ಸರಕಾರದ ಅವಧಿಯಲ್ಲಿ ಆಗಿರಲಿಲ್ಲ. ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಈ ಯೋಜನೆಯನ್ನು ಸರಕಾರ ಪ್ರಾರಂಭಿಸಿದೆ. 8ಸಾವಿರ ಶಾಲಾ ಕೊಠಡಿಗಳ ನಿರ್ಮಾಣದ ಗುರಿಯಿದ್ದು,  ಮುಂದಿನ ಎರಡು-ಮೂರು ವರ್ಷಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವ ಮೂಲಕ ಶಾಲಾ ಕೊಠಡಿಗಳ ಕೊರತೆಯನ್ನು ನೀಗಿಸಿದಂತಾಗುತ್ತದೆ. ಈ ದೂರದೃಷ್ಟಿಯ ಯೋಜನೆ ಯಾವುದೇ ಸರಕಾರ ಬಂದರೂ ನಿಲ್ಲಿಸಲು ಸಾಧ್ಯವಿಲ್ಲ. ಮುಂದಿನ ಅವಧಿಯಲ್ಲಿಯೂ ಬಿಜೆಪಿ ಸರಕಾರವೇ ಬರುವ ವಿಶ್ವಾಸವಿದೆ ಎಂದರು.

ಈ ವರ್ಷ 4 ಸಾವಿರ ಹೊಸ ಅಂಗನವಾಡಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ. ತಲಾ 15ಲಕ್ಷ ರೂ.ನಂತೆ ಅನುದಾನವನ್ನು ನೀಡಲಾಗಿದ್ದು, ಈ ಯೋಜನೆಯಡಿ 1500 ಅಂಗನವಾಡಿಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ. ಇದು ಸರಕಾರದ ಸಾಧನೆಗಿಂತ, ರಾಜ್ಯದ ಮಕ್ಕಳ ಭವಿಷ್ಯ ಅಡಗಿದೆ. ಮಕ್ಕಳ ಪ್ರತಿಭೆಯಿಂದ ನಾಡನ್ನು ಕಟ್ಟಬಹುದಾಗಿದ್ದು, ಒಂದು ನಾಡು ಸಮೃದ್ಧಿಯಾಗಬೇಕಾದರೆ ಶಿಕ್ಷಣ ಬಹಳ ಮುಖ್ಯ. ಹೆಣ್ಣು ಮಕ್ಕಳಿಗೆ ಪ್ರಾಥಮಿಕ ಶಾಲೆಯ ನಂತರ ಶಿಕ್ಷಣಕ್ಕೆ ಅವಕಾಶ ನೀಡುವುದಿಲ್ಲ. ರೈತ ಮಕ್ಕಳಿಗೆ, ಕೂಲಿಕಾರರ, ಮೀನುಗಾರರ, ನೇಕಾರರ, ತಾಂಡಾಗಳ ಮಕ್ಕಳು ಆರ್ಥಿಕ ಸಂಕಷ್ಟದಿಂದ ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಸರಕಾರ ಎಲ್ಲ ಯೋಜನೆಗಳಲ್ಲಿ ಹೆಣ್ಣುಮಕ್ಕಳಿಗೆ ಪ್ರಾಶಸ್ತ್ಯ ನೀಡಿದೆ. 30ಸಾವಿರ ಕೋಟಿ ರೂ.ಗೂ ಹೆಚ್ಚಿನ ಮೊತ್ತವನ್ನು ಹೆಣ್ಣುಮಕ್ಕಳಿಗೆ ಮೀಸಲಿರಿಸಲಾಗಿದೆ ಎಂದರು.

ಕಟ್ಟಡದ ದುರಸ್ತಿಗೆ 200 ಕೋಟಿ ರೂ.: ‘ವಾಜಪೇಯಿ ಅವಧಿಯಲ್ಲಿ ಸರ್ವಶಿಕ್ಷಣ ಅಭಿಯಾನವನ್ನು ಮಾಡಲಾಯಿತು. 10 ವರ್ಷದ ಕಾರ್ಯಕ್ರಮವನ್ನು 2012ರ ವರೆಗೂ ಈ ಯೋಜನೆಯನ್ನು ವಿಸ್ತರಿಸಲಾಯಿತು. 2019ರ ವರೆಗೂ ರಾಜ್ಯದಲ್ಲಿ ಶಾಲಾ ಕೊಠಡಿಗಳ ನಿರ್ಮಾಣವಾಗಲಿಲ್ಲ.  ಸುವ್ಯವಸ್ಥಿತ ಶಾಲಾಕೊಠಡಿಗಳ ನಿರ್ಮಾಣದ ಮಹತ್ವವನ್ನು ಮನಗಂಡ ನಮ್ಮ ಸರಕಾರ ಇದಕ್ಕೆ ಪ್ರತ್ಯೇಕ ಅನುದಾನವನ್ನು ಮೀಸಲಿರಿಸಿತು. ಶಾಲಾ ಕಟ್ಟಡದ ದುರಸ್ತಿಗೂ 200ಕೋಟಿ ರೂ. ನೀಡಲಾಗಿದೆ ಎಂದರು.

ಆಗಸ್ಟ್ 15 ರೊಳಗೆ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ: ಹೆಣ್ಣುಮಕ್ಕಳಿಗೆ ಶಾಲೆಗಳಲ್ಲಿ ಶೌಚಾಲಯ ಇಲ್ಲದೆ ಆಗುತ್ತಿರುವ ಸಮಸ್ಯೆಯನ್ನು ಪರಿಗಣಿಸಿ, ಮುಂದಿನ ಆಗಸ್ಟ್ 15ರೊಳಗೆ ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವ ಯೋಜನೆಯನ್ನು ಸಧ್ಯದಲ್ಲಿಯೇ ಪ್ರಾರಂಭಿಸಲಾಗುವುದು. ಮಕ್ಕಳ ಶಿಕ್ಷಣದಲ್ಲಿ ಅಂಗನವಾಡಿಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂದು ಹೇಳಿದರು.
ಇತಿಹಾಸದಲ್ಲಿ ದಾಖಲೆ: ‘ಮಾತಿನಲ್ಲಿ ಶಿಕ್ಷಣ, ಉದ್ಯೋಗ, ಸ್ವಾವಲಂಬನೆಯ ಬದುಕು ಸಾಧ್ಯವಾಗುವುದಿಲ್ಲ. ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು. ಗುರಿ ಇರಬೇಕು, ಕಾಲ ನಿಗದಿ ಮಾಡಿ ಅನುದಾನ ಬಿಡುಗಡೆ ಮಾಡಿ ಅಧಿಕಾರಿಗಳಿಗೆ ಕೆಲಸಕ್ಕೆ ಹಚ್ಚಬೇಕು. ಈ ವರ್ಷದ ಬಜೆಟ್ಟಿನ ಎಲ್ಲ ಘೋಷಣೆಗಳ ಅನುಷ್ಠಾನ ಪ್ರಾರಂಭವಾಗಿದೆ. ಇತಿಹಾಸದಲ್ಲಿ ಇದು ಒಂದು ದಾಖಲೆ. ಎಲ್ಲರಿಗೂ ಸ್ಪಂದಿಸುವ ಕೆಲಸವಾಗುತ್ತಿದೆ. 32 ಸಾವಿರ ಅತಿಥಿ ಪ್ರಾಧ್ಯಾಪಕರನ್ನು ವರ್ಷದ ಪ್ರಾರಂಭದಲ್ಲಿಯೇ ನೇಮಿಸಲು ಅನುಮತಿ ನೀಡಲಾಯಿತು. ಅವರ ಗೌರವಧನ ಹೆಚ್ಚಿಸಲಾಯಿತು. 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದರು.  

ಶಿಕ್ಷಣಕ್ಕೆ ಹೆಚ್ಚಿನ ಮಹತ್ವ: ‘ಮುಂದಿನ ಶೈಕ್ಷಣಿಕ ವರ್ಷಕ್ಕೆ ಅಗತ್ಯವಿರುವ ಶಿಕ್ಷಕರ ಸಂಖ್ಯೆಯನ್ನು ನೀಡಿದರೆ, ಮುಂದಿನ ಬಜೆಟ್‍ನಲ್ಲಿ ಅನುಮತಿ ನೀಡಲಾಗುವುದು ಶಿಕ್ಷಣ ಸಚಿವರಿಗೆ ತಿಳಿಸಿದ್ದೇನೆ. ಶಿಕ್ಷಣಕ್ಕೆ ಮಹತ್ವವನ್ನು ಸರಕಾರ ನೀಡಿದೆ. ಬರುವ ವರ್ಷದಲ್ಲಿ ಯೋಗವನ್ನು ಶಾಲೆಗಳಲ್ಲಿ ಪ್ರಾರಂಭಿಸಲಾಗುವುದು. 100 ಹೊಸ ಪ್ರೌಢಶಾಲೆ ಹಾಗೂ 100 ಹೊಸ  ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಮಂಜೂರಾತಿ ನೀಡಲಾಗಿದೆ. ಕಲ್ಯಾಣ ಕರ್ನಾಟಕ ನಿಜವಾಗಲೂ ಕಲ್ಯಾಣದ ನಾಡಾಗಬೇಕು ಎಂದು ಆಶಿಸಿದರು.

ಎಲ್ಲ ಮಕ್ಕಳೂ ನನ್ನ ಮಕ್ಕಳು: ಕರ್ನಾಟಕದ ಎಲ್ಲ ಮಕ್ಕಳೂ ನನ್ನ ಮಕ್ಕಳು ಎಂದು ವಿದೇಶಿಯರೊಬ್ಬರಿಗೆ ಉತ್ತರಿಸಿದ್ದರು. ಹೀಗಾಗಿ ಮುಂದಿಟ್ಟ ಹೆಜ್ಜೆಯನ್ನು ಎಂದೂ ಹಿಂದಿಡಬೇಡಿ. ಸೋಲಬಾರದೆಂದು ಆಡವಾಡುವುದು ಹಾಗೂ ಗೆಲ್ಲಬೇಕು ಎಂದು ಆಟವಾಡಬೇಕು. ಜೀವನದಲ್ಲಿ ಗೆಲ್ಲಬೇಕೆಂದು ಆಟವಾಡಬೇಕು. ನಿಮ್ಮ ಸಣ್ಣ ವಯಸ್ಸಿನಲ್ಲಿಯೂ ದೊಡ್ಡ ಕನಸನ್ನು ಕಾಣಬೇಕು ಎಂದರು.

ಕಲ್ಪನೆಗಳಿಗೆ ರೆಕ್ಕೆ ಕೊಡಿ. ಕನಸು ನನಸು ಮಾಡಿಕೊಳ್ಳಲು ಪ್ರಯತ್ನಿಸಿ. ಎಲ್ಲವನ್ನೂ ಪ್ರಶ್ನಿಸುವ ತಾರ್ಕಿಕ ಮನೋಭಾವ, ಚಿಂತನೆ ಅಗತ್ಯ. ನೈತಿಕ ಬಲದಿಂದ ಮಕ್ಕಳಿಗೆ ಕಲಿಸಬೇಕು. ಪ್ರಗತಿಯ ಮೆಟ್ಟಿಲಲ್ಲಿ ಮಕ್ಕಳು ಎತ್ತರಕ್ಕೆ ಏರಬೇಕು. ಕನ್ನಡದ ಮಕ್ಕಳು ಜಗತ್ತಿನಲ್ಲಿ ಕನ್ನಡದ ಬಾವುಟ ಹಾರಿಸಬೇಕು ಎಂದರು. ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ಸಂಸದ ಉಮೇಶ್ ಜಾಧವ್, ಪರಿಷತ್ ಸದಸ್ಯ ಶಶೀಲ್ ನಮೋಶಿ, ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಉಪಸ್ಥಿತರಿದ್ದರು.

share
Next Story
X