PSI ನೇಮಕಾತಿ ಹಗರಣ: ಅಮೃತ್ ಪೌಲ್ ಜಾಮೀನು ಅರ್ಜಿ ವಜಾ
ಬೆಂಗಳೂರು, ನ.23: ಪಿಎಸ್ಸೈ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್ಗೆ ಜಾಮೀನು ನೀಡಲು ನಗರದ 24ನೆ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ.
ಜಾಮೀನು ಕೋರಿ ಅಮೃತ್ ಪೌಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಜಾಮೀನು ನೀಡಲು ನಿರಾಕರಿಸಿ, ಅರ್ಜಿಯನ್ನು ವಜಾಗೊಳಿಸಿದೆ.
ಅರ್ಜಿದಾರರು ಎಸಗಿರುವ ಅಪರಾಧ ಕೃತ್ಯವು ಸಮಾಜದ ಮೇಲೆ ದುಷ್ಪರಿಣಾಮ ಬೀರಲಿದೆ. ಅಲ್ಲದೆ, ಪ್ರಕರಣದ ಅಕ್ರಮಗಳ ಕುರಿತು ಸಾಕ್ಷಿಗಳು ನೀಡಿರುವ ಹೇಳಿಕೆಯನ್ನು ಮುಖ್ಯ ವಿಚಾರಣೆಯಲ್ಲಿ ಪರೀಕ್ಷಿಸಬೇಕಿದೆ. ಅಮೃತ್ ಪೌಲ್ ರಾಜ್ಯದ ಹಿರಿಯ ಶ್ರೇಣಿ ಅಧಿಕಾರಿಯಾಗಿದ್ದು, ಜಾಮೀನು ಮೇಲೆ ಬಿಡುಗಡೆಯಾದರೆ ಪ್ರಾಸಿಕ್ಯೂಷನ್ ದಾಖಲೆಗಳು ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರವ ಸಾಧ್ಯತೆಯಿದೆ. ಹೀಗಾಗಿ, ಅವರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿತು.
Next Story