ಬಿಜೆಪಿ ಆಡಳಿತದಲ್ಲಿ ದಲಿತರು ಬೈಕನ್ನೂ ಓಡಿಸದಿರುವ ಸ್ಥಿತಿ ನಿರ್ಮಾಣ: ಕಾಂಗ್ರೆಸ್ ಕಿಡಿ
ಬೆಂಗಳೂರು, ಡಿ.2: 'ಬಿಜೆಪಿ ಆಡಳಿತದಲ್ಲಿ ದಲಿತರು ಬೈಕನ್ನೂ ಓಡಿಸದಿರುವ ಸ್ಥಿತಿ ನಿರ್ಮಾಣವಾಗಿರುವುದು ಆತಂಕಕಾರಿ' ಎಂದು ಕಾಂಗ್ರೆಸ್ (Karnataka Congress) ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದೆ.
ಬೈಕ್ ಹಿಂದಿಕ್ಕಿದಕ್ಕೆ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ದಲಿತ ಯುವಕನೋರ್ವನನ್ನು ಮರಕ್ಕೆ ಕಟ್ಟಿ ಥಳಿಸಿದ್ದರಿಂದ ಆತ ಅವಮಾನ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ (Karnataka Congress) ದಲಿತರ ಮೇಲಿನ ದೌರ್ಜನ್ಯದ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸದಿರುವುದು ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿಗೆ ಸಾಕ್ಷಿ. ಬಿಜೆಪಿಯ ಯಾವೊಬ್ಬ ನಾಯಕನೂ ದೌರ್ಜನ್ಯಗಳ ಬಗ್ಗೆ ತುಟಿ ಬಿಚ್ಚದಿರುವುದೇಕೆ?'' ಎಂದು ಪ್ರಶ್ನೆ ಮಾಡಿದೆ.
ಪ್ರಕರಣ ದಾಖಲು: ಬೇವಹಳ್ಳಿಯ ಉದಯ್ ಕಿರಣ್ ಆತ್ಮ ಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಈ ಸಂಬಂಧ ನಂಗಲಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ.
ಇದನ್ನೂ ಓದಿ: ಮುಳಬಾಗಿಲು | ಬೈಕ್ ಹಿಂದಿಕ್ಕಿದಕ್ಕೆ ಮರಕ್ಕೆ ಕಟ್ಟಿ ಹಲ್ಲೆ; ನೊಂದ ದಲಿತ ಯುವಕ ಆತ್ಮಹತ್ಯೆ: ಆರೋಪ
ಬಿಜೆಪಿ ಆಡಳಿತದಲ್ಲಿ ದಲಿತರು ಬೈಕನ್ನೂ ಓಡಿಸದಿರುವ ಸ್ಥಿತಿ ನಿರ್ಮಾಣವಾಗಿರುವುದು ಆತಂಕಕಾರಿ.
— Karnataka Congress (@INCKarnataka) December 2, 2022
ದಲಿತರ ಮೇಲಿನ ದೌರ್ಜನ್ಯದ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸದಿರುವುದು ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿಗೆ ಸಾಕ್ಷಿ.
ಬಿಜೆಪಿಯ ಯಾವೊಬ್ಬ ನಾಯಕನೂ ದೌರ್ಜನ್ಯಗಳ ಬಗ್ಗೆ ತುಟಿ ಬಿಚ್ಚದಿರುವುದೇಕೆ? pic.twitter.com/0rsDsWhDoc