ಮಧುಗಿರಿ ಬಾಲಕ ಮೃತಪಟ್ಟ ಪ್ರಕರಣ | ಕರ್ತವ್ಯ ಲೋಪ ಎಸಗಿರುವ ಆ್ಯಂಬುಲೆನ್ಸ್ ಚಾಲಕನ ವಜಾ; ಸಚಿವ ಡಾ.ಸುಧಾಕರ್
-

ಬೆಂಗಳೂರು, ಡಿ.3: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಶುಕ್ರವಾರ ಐದು ವರ್ಷದ ಬಾಲಕ ನೀರಿನ ಸಂಪ್ ನಲ್ಲಿ ಬಿದ್ದು ಆಕಸ್ಮಿಕವಾಗಿ ಸಾವನ್ನಪ್ಪಿರುವ ಘಟನೆ ನನ್ನ ಮನಸ್ಸಿಗೆ ತೀವ್ರ ಘಾಸಿ ಉಂಟುಮಾಡಿದ್ದು, ಕರ್ತವ್ಯ ಲೋಪ ಎಸಗಿರುವ ಆ್ಯಂಬುಲೆನ್ಸ್ ಚಾಲಕನನ್ನು ಕೂಡಲೇ ಕೆಲಸದಿಂದ ವಜಾ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಶುಕ್ರವಾರ ಆಕಸ್ಮಿಕವಾಗಿ ನೀರಿನ ಸಂಪ್ಗ ಬಿದ್ದು ಅಸ್ವಸ್ಥಗೊಂಡಿದ್ದ ಬಾಲಕನನ್ನು ಕೂಡಲೇ ಪೋಷಕರು ಕೊಡಿಗೇನಹಳ್ಳಿ ಗ್ರಾಮ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆನ್ನಲಾಗಿದ್ದು, ಆದರೆ, ಆಸ್ಪತ್ರೆಯಲ್ಲಿ ವೈದ್ಯರಿರಲಿಲ್ಲ ಎಂದು ಆರೋಪಿಸಲಾಗಿದೆ. ಹೀಗಾಗಿ ಬೇರೆ ಆಸ್ಪತ್ರೆಗ ಹೋಗಲು ಆ್ಯಂಬುಲೆನ್ಸ್ ಇದ್ದರೂ ಚಾಲಕನಿರಲಿಲ್ಲ. ಇದರಿಂದ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ಮಗು ಮೃತಪಟ್ಟಿದೆ ಎಂದು ಮಗುವಿನ ಪೋಷಕರು ಆರೋಪ ಮಾಡಿದ್ದರು.
ಈ ಸಂಬಂಧ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿರುವ ಸಚಿವ ಡಾ.ಕೆ.ಸುಧಾಕರ್, ಶುಕ್ರವಾರ ಸಂಜೆ ಸುಮಾರು 4:15 ವೇಳೆಗೆ ಮಗು ನೀರಿಗೆ ಬಿದ್ದಿರುವುದನ್ನು ಗಮನಿಸಿದ ಹೆತ್ತವರು ಕಂದಮ್ಮನನ್ನು ಉಳಿಸಿಕೊಳ್ಳುವ ಆಸೆಯಿಂದ ಸುಮಾರು 5 ಗಂಟೆ ವೇಳೆಗೆ ಕೊಡಿಗೇನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ ಎಂದು ತಿಳಿದು ಬಂದಿದೆ.
ಆ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕ ಅಧಿಕಾರಿ ಹಾಗೂ ಹಾಗೂ ಡಿ ಗ್ರೂಪ್ ಸಿಬ್ಬಂದಿಯೊಬ್ಬರು ಲಭ್ಯರಿದ್ದು, ಅಲ್ಲಿನ ವೈದ್ಯರು 4:30ರವರೆಗೆ ಓಪಿಡಿ ಸಮಯ ಮುಗಿಸಿ ಮೈದನಹಳ್ಳಿ ಪ್ರದೇಶಕ್ಕೆ ಕ್ಷೇತ್ರ ಭೇಟಿಗೆ ತೆರಳಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದ ವೈದ್ಯರು ಆಸ್ಪತ್ರೆಗೆ ಬರುವ ಮುಂಚೆಯೇ ಮಗು ಮೃತಪಟ್ಟಿರುವುದಾಗಿ ದೃಢೀಕರಿಸಿದ್ದಾರೆ. ಕೊಡಿಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರವು 24/7 ಸೇವೆ ನೀಡುವ ಆಸ್ಪತ್ರೆಯಾಗಿರುವುದರಿಂದ ಇಬ್ಬರು ವೈದ್ಯರಿದ್ದು, ಪಾಳಿಯಂತೆ ಹೊಂದಾಣಿಕೆ ಮಾಡಿಕೊಂಡು ಯಾವುದೇ ಸಮಯದಲ್ಲಿ ಕನಿಷ್ಠ ಒಬ್ಬ ವೈದ್ಯರಾದರೂ ಕರ್ತವ್ಯದಲ್ಲಿ ಇರಬೇಕಾಗಿರುತ್ತದೆ. ಈ ಪ್ರಕರಣದ ಬಗ್ಗೆ ಇಲಾಖಾ ತನಿಖೆ ನಡೆಸಿ ಕರ್ತವ್ಯ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ವೈದ್ಯರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದರ ಜೊತೆಗೆ ಆ ಸಂದರ್ಭದಲ್ಲಿ ತಡಮಾಡಿ ಕರ್ತವ್ಯ ಲೋಪ ಎಸಗಿರುವ ಆ್ಯಂಬುಲೆನ್ಸ್ ಚಾಲಕನನ್ನು ಕೂಡಲೇ ಕೆಲಸದಿಂದ ವಜಾ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
'ಇದರೊಂದಿಗೆ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಹಾಜರಾತಿ ಮೇಲೆ ನಿಗಾ ಇಡಲು ಜಿಯೋ ಟ್ಯಾಗಿಂಗ್ ವ್ಯವಸ್ಥೆ ಜಾರಿ ಮಾಡಲಾಗುತ್ತಿದ್ದು ಈ ಕ್ರಮದಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊಣೆಗಾರಿಕೆ ಹಾಗೂ ಶಿಸ್ತು ಹೆಚ್ಚಲಿದೆ. ಕೊಡಿಗೇನಹಳ್ಳಿಯಲ್ಲಿ ನಡೆದ ದುರ್ಘಟನೆಯಲ್ಲಿ ತಮ್ಮ 5 ವರ್ಷದ ಕಂದಮ್ಮನನ್ನು ಕಳೆದುಕೊಂಡ ತಂದೆ-ತಾಯಂದಿರ ಆಕ್ರಂದನ ನನ್ನ ಮನಸ್ಸನ್ನು ಜರ್ಜರಿತಗೊಳಿಸಿದೆ. ಕ್ರೂರ ವಿಧಿಯಾಟ ಆ ಹೆತ್ತವರಿಗೆ ತಂದೊಡ್ಡಿರುವ ನೋವಿನಲ್ಲಿ ನಾನೂ ಭಾಗಿ' ಎಂದು ಹೇಳಿದ್ದಾರೆ.
ಈ ಪ್ರಕರಣದ ಬಗ್ಗೆ ಇಲಾಖಾ ತನಿಖೆ ನಡೆಸಿ ಕರ್ತವ್ಯ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ವೈದ್ಯರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು.
— Dr Sudhakar K (@mla_sudhakar) December 3, 2022
ಇದರ ಜೊತೆಗೆ ಆ ಸಂದರ್ಭದಲ್ಲಿ ತಡಮಾಡಿ ಕರ್ತವ್ಯ ಲೋಪ ಎಸಗಿರುವ ಅಂಬ್ಯುಲೆನ್ಸ್ ಚಾಲಕನನ್ನು ಕೂಡಲೇ ಕೆಲಸದಿಂದ ವಜಾ ಮಾಡಲಾಗಿದೆ.
6/8
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.