Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು | 18,533 ಮತದಾರರನ್ನು ಕೈ...

ತುಮಕೂರು | 18,533 ಮತದಾರರನ್ನು ಕೈ ಬಿಟ್ಟ ಆರೋಪ: ಕೇಂದ್ರ, ರಾಜ್ಯ ಚುನಾವಣಾ ಆಯೋಗಕ್ಕೆ ದೂರು

5 Dec 2022 9:57 AM IST
share
ತುಮಕೂರು | 18,533 ಮತದಾರರನ್ನು ಕೈ ಬಿಟ್ಟ ಆರೋಪ: ಕೇಂದ್ರ, ರಾಜ್ಯ ಚುನಾವಣಾ ಆಯೋಗಕ್ಕೆ ದೂರು

ತುಮಕೂರು, ಡಿ.5: ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 18,533 ಮತದಾರರನ್ನು ಮತಪಟ್ಟಿಯಿಂದ ಕೈ ಬಿಡಲಾಗಿದೆ. ಇನ್ನು ಕೈಬಿಟ್ಟ ಮತದಾರರಿಗೆ ಯಾವುದೇ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿರುವುದಾಗಿ ಸಮಾಜ ಸೇವಕ ಎಂ.ಬಿ.ಪಂಚಾಕ್ಷರಯ್ಯ ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, 2022ರ ಜನವರಿಯಲ್ಲಿ ಜಿಲ್ಲಾ ಚುನಾವಣಾ ಶಾಖೆ ಯಿಂದ ಕರಡು ಮತದಾರರ ಪಟ್ಟಿ ಪ್ರಕಟಿಸಿದ್ದು, ಕರಡು ಮತದಾರರ ಪಟ್ಟಿಯಲ್ಲಿ 18533 ಮತದಾರರನ್ನು ಮತ ಪಟ್ಟಿಯಿಂದ ಕೈ ಬಿಟ್ಟಿದ್ದು ಇದಕ್ಕೆ ಸಂಬಂಧಿಸಿದಂತೆ ಮತದಾರರಿಗೆ ಯಾವುದೇ ಮಾಹಿತಿ ನೀಡಿಲ್ಲ. 2018ರಲ್ಲಿ ಬೋಗಸ್ ಮತದಾರರ ಹೆಚ್ಚಾಗಿರುವುದನ್ನು ಪತ್ತೆ ಹಚ್ಚಿ ಜಿಲ್ಲಾಡಳಿತ ಮತ್ತು ಜಿಲ್ಲಾ ಚುನಾವಣಾ ಶಾಖೆ ಹಾಗು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ  ಹಿನ್ನೆಲೆಯಲ್ಲಿ ಬೃಹತ್ ಪ್ರಮಾಣದಲ್ಲಿ ಮತದಾರರನ್ನು ಕೈಬಿಟ್ಟಿದ್ದು ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೇನೆ ಎಂದರು.

ತುಮಕೂರು ನಗರದಲ್ಲಿ 2013 ರಿಂದ 2017ರ ವರೆಗೂ ಆರು ವರ್ಷದ ಅವಧಿಯಲ್ಲಿ 3,865ಕ್ಕೂ ಹೆಚ್ಚು ಪುನರಾವರ್ತಿತ ಮತದಾರರನ್ನು ಕೈಬಿಟ್ಟಿದ್ದು 2018 ರಿಂದ 2022ರ ವೇಳೆಗೆ 18 ಸಾವಿರದ 533 ಮತದಾರರನ್ನು ಕೈ ಬಿಟ್ಟಿದ್ದಾರೆ. 2023ರ ಜನವರಿ ವೇಳೆಗೆ 10 ರಿಂದ 15 ಸಾವಿರಕ್ಕೂ ಹೆಚ್ಚು ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಸಂಭವ ಇದೆ ಎಂದು ಆರೋಪಿಸಿದ್ದಾರೆ.

2017-18 ರಲ್ಲಿ ಸೊಗಡು ಶಿವಣ್ಣರವರ ನೇತೃತ್ವದಲ್ಲಿ ತಾವು ಹಾಗೂ ತಮ್ಮ ಸ್ನೇಹಿತರು, ಬೋಗಸ್ ಮತದಾರರ ವಿರುದ್ಧ ಹೋರಾಟ ಮಾಡಿದ್ದು ಅಂದು 3,600 ಹೆಚ್ಚು ಪುನರಾವರ್ತಿತ ಮತದಾರರು ಇದ್ದರು ಎಂದಿರುವ ಅವರು, 2018ರಿಂದ 2022 ಸಾಲಿನ ಅವಧಿಯಲ್ಲಿ ಸುಮಾರು 18,533 ಮತದಾರರು ಪುನರಾವರ್ತನೆ ಆಗಲು ಹೇಗೆ ಸಾಧ್ಯ. ಇದಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳು ಇದುವರೆಗೂ ಸ್ಪಷ್ಟನೆ ನೀಡಿಲ್ಲ. ಈಗಿನ ಕರಡು ಮತದಾರರ ಪಟ್ಟಿಯಲ್ಲಿ 2,40,918 ಮತದಾರರು ಇದ್ದಾರೆ ಎಂದು ಚುನಾವಣಾ ಶಾಖೆ ಪ್ರಕಟಿಸಿದ್ದು ಇನ್ನು ಮುಂಬರುವ 2023ರ ಜನವರಿ ವೇಳೆಗೆ ಮತ್ತೆ ಇದೇ ಪಟ್ಟಿ ಇರುತ್ತದೆ ಎಂದಿದ್ದಾರೆ.

ಈ ವಿಚಾರವಾಗಿ ಸಂಬಂಧಿಸಿದಂತೆ ಯಾವುದೇ ರಾಜಕೀು ಪಕ್ಷಗಳು ಗಮನ ಹರಿಸುತ್ತಿಲ್ಲ. ಈಗಿನ ಜನಸಂಖ್ಯೆಯ ಪ್ರಕಾರ ತುಮಕೂರು ನಗರದಲ್ಲಿ 3.5 ದಿಂದ 4 ಲಕ್ಷದ ವರೆಗೂ ಜನಸಂಖ್ಯೆ ಇದ್ದು ಇದಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ಪಕ್ಷಗಳು ಧ್ವನಿ ಎತ್ತಲು ಮುಂದಾಗುತ್ತಿಲ್ಲ.ಹಾಗಾಗಿ ಮುಂದಿನ ದಿನದಲ್ಲಿ ಮತ್ತಷ್ಟು ಬೃಹತ್ ಪ್ರಮಾಣದಲ್ಲಿ ಮತದಾರರ ಸಂಖ್ಯೆ ಕೈಬಿಡುವ ಸಾಧ್ಯತೆ ಇರುವುದರಿಂದ ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿರುವುದಾಗಿ ಪಂಚಾಕ್ಷರಯ್ಯ ತಿಳಿಸಿದ್ದಾರೆ.

2 011ರ ಜನಗಣತಿ ಪ್ರಕಾರ ತುಮಕೂರು ನಗರದಲ್ಲಿ 3,08,000 ಮತದಾರರಿದ್ದು ಅದೇ ಜನಗಣತಿಯ ಪ್ರಕಾರ 24,918 ಎಂದು ಕರಡು ಮತದಾರರ ಪಟ್ಟಿಯಲ್ಲಿ ತೋರಿಸಿದ್ದು, ಅದರಂತೆ ಶೇಕಡ 80ರಷ್ಟು ಇದೆ ಎಂದು ಹೇಳುತ್ತಿದ್ದು, 2023ರ ಕರುಡು ಪಟ್ಟಿಯನ್ನು ಸಹ ಇದೇ ಮತದಾರರ ಪ್ರಮಾಣ ಇರುತ್ತದೆ. ಈ ಮೂಲಕ ಅಧಿಕಾರಿಗಳು ಮತದಾರರ ಪಟ್ಟಿಯನ್ನು ಸಮತೋಲನ ಮಾಡಲು ಹೊರಟಿದ್ದಾರೆ ಎಂದು ಪಂಚಾಕ್ಷರಯ್ಯ ಆರೋಪಿಸಿದ್ದಾರೆ.

share
Next Story
X