Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುರುಘಾ ಶ್ರೀ ಪ್ರಕರಣ: ಸಂತ್ರಸ್ತ...

ಮುರುಘಾ ಶ್ರೀ ಪ್ರಕರಣ: ಸಂತ್ರಸ್ತ ವಿದ್ಯಾರ್ಥಿನಿಯರ ತಾಯಿಯಿಂದ ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ

5 Dec 2022 10:10 PM IST
share
ಮುರುಘಾ ಶ್ರೀ ಪ್ರಕರಣ: ಸಂತ್ರಸ್ತ ವಿದ್ಯಾರ್ಥಿನಿಯರ ತಾಯಿಯಿಂದ ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ

ಮೈಸೂರು,ಡಿ.5:  ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಬಾಲಕಿಯ ತಾಯಿಯು ದಯಾಮರಣ ನೀಡುವಂತೆ ಕೋರಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮೂರು ಪುಟಗಳ ಪತ್ರ ಬರೆದಿದ್ದಾರೆ.

ಪತ್ರದ ಸಾರಾಂಶ: ತಳಮಟ್ಟದ ಸಮುದಾಯಗಳ ಹಾಗೂ ಮಹಿಳಾ ಪ್ರತಿನಿಧಿಯಾಗಿ, ತಾವು ನಮ್ಮ ದೇಶದ ರಾಷ್ಟ್ರಪತಿಗಳಾಗಿರುವುದಕ್ಕೆ ನನ್ನಂತಹ ನೊಂದ ಅಸಂಖ್ಯಾತ ಮಹಿಳೆಯರ ಹಾಗೂ ಹೆಣ್ಣು ಮಕ್ಕಳ ಪರವಾಗಿ ಹೆಮ್ಮೆಯಿಂದ, ಗೌರವಯುತವಾಗಿ ಅಭಿನಂದಿಸುತ್ತೇನೆ. ನಮ್ಮಂತವರಿಗೆ ತಾಯಿಯ ಸ್ಥಾನದಲ್ಲಿರುವ ತಮಗೆ ನನಗಾಗಿರುವ ಅನ್ಯಾಯ ಹಾಗೂ ನೋವನ್ನು ಈ ಪತ್ರದ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಚಿಸುತ್ತೇನೆ.

ಪತಿಯ ದೌರ್ಜನ್ಯಕ್ಕೊಳಗಾಗಿ, ಕುಟುಂಬಕ್ಕೊಂದು ಗಂಡು ದಿಕ್ಕಿಲ್ಲದಂತಾಗಿ, ಆಸರೆ ಕಳೆದುಕೊಂಡು, ಮುಂದೆ ಜೀವನವಿಲ್ಲ ಎಂದು ತಿಳಿದು, ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದರೂ, ಸಾಯದೆ ಬದುಕುಳಿದು, ಯಾರದೋ ಸಲಹೆಯಂತೆ ಚಿತ್ರದುರ್ಗದ ಮುರುಘಾ ಮಠ ಸೇರಿ, ನರಕದ ಬಾಳು ಕಂಡವಳು ನಾನು. ನಾನು ಆ ಮಠದಲ್ಲಿ ಇರುವಾಗಲೇ, ನನ್ನ ಕಣ್ಣ ಮುಂದೆಯೇ ಕರೆದುಕೊಂಡು ಹೋಗಿ ಸ್ವಾಮೀಜಿಯ ಕೋಣೆಗೆ ಬಿಟ್ಟು, ನನ್ನ ಅಮಾಯಕ ಕರುಳಕುಡಿಗಳು ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಪಟ್ಟು ಹೊರ ಬಂದಾಗಲೂ ಏನು ಮಾಡಲಾಗದ ಸ್ಥಿತಿಯಲ್ಲಿದ್ದವಳು ನಾನು. ಮಠದಿಂದ ಹೊರಗೆ ಬಿದ್ದ ಮೇಲೆ ನ್ಯಾಯ ಸಿಗಲಿ ಎಂಬ ಹಂಬಲದೊಡನೆ ಒಡನಾಡಿ ಸಂಸ್ಥೆಗೆ ಬಂದು ದೂರು ನೀಡಿರುವುದು ಕಾನೂನಿನ ಕಣ್ಣಿನಲ್ಲಿ ತಪ್ಪಾಗಿ ಕಾಣಿಸುತ್ತಿದೆ. ಸ್ವಾಮೀಜಿಯ ಮೇಲೆ ಕಾನೂನು ಕ್ರಮ ಕೈಗೊಂಡಾಗ, ಮಠದಿಂದ ಹೊರ ಬಿದ್ದ ಅದೆಷ್ಟೋ ಮಕ್ಕಳ ಪೈಕಿ ನನ್ನ ಇಬ್ಬರು ಮಕ್ಕಳು ಹಾಗೂ ನಾನು ಇದ್ದೆವು ಎಂದಿದ್ದಾರೆ.

ಮಠದಿಂದ ಹೊರದಬ್ಬಲ್ಪಟ್ಟು, ಅನ್ನ, ಆಹಾರ, ಆಸರೆ ಇಲ್ಲದಂತಾದಾಗ, ಸತ್ಯವನ್ನು ಹೇಳಲು, ಯಾರ ಸಹಾಯವನ್ನು ಪಡೆಯದೆ ಬರಬೇಕಿತ್ತು ಎಂದು ಅಧಿಕಾರಿಗಳು ಹಾಗೂ ಈ ಸಮಾಜ ಬಯಸುವುದು ಕ್ರೂರತನವಲ್ಲವೇ? ಇಂದು ನಾನು ನನ್ನ ಮಕ್ಕಳಿಗಾದ ಅನ್ಯಾಯದ ವಿರುದ್ಧ ದೂರು ನೀಡಿರುವುದು ಹಾಗೂ ನನಗೆ ಸತ್ಯ ಹೇಳಲು ಸಹಾಯ ಮಾಡಿರುವ ಕೆಲವು ಜನರ ಕರುಣೆ ಹಾಗೂ ಸಹಾನುಭೂತಿ ಶಿಕ್ಷೆಗೆ ಒಳಗಾಗುತ್ತಿದೆ. ತನ್ನ ಹಾಗೂ ತನ್ನ ಮಕ್ಕಳ ಶೀಲವನ್ನು ಅಡವಿಟ್ಟು ಸುಳ್ಳು ಹೇಳಿ ದಕ್ಕಿಸಿಕೊಳ್ಳುವುದು ಬಡ ತಾಯಿ ಒಬ್ಬಳಿಗೆ ಸಾಧ್ಯವೇ? ಇದು ಸತ್ಯಕ್ಕೆ ಮಾಡಿರುವ ಅವಮಾನ? ಎಂದು ಅಸಮಾಧಾನ ಹೊರಹಾಕಿದ್ದಾರೆ.

ಪ್ರಧಾನ ಮಂತ್ರಿಗಳ ಆಶಯದ ಘೋಷಣೆಯಾದ ಬೇಟಿ ಬಚಾವೋ, ಬೇಟಿ ಪಡಾವೋ,  ಇವರ ಕೈಯಲ್ಲಿ ನಗೆಪಾಟಲಾಗುತ್ತಿದೆ. ನನಗೂ ನನ್ನ ಮಕ್ಕಳಿಗೂ ನ್ಯಾಯ ನೀಡುವುದರ ಮೂಲಕ ಘನತೆಯ ಬಾಳನ್ನು ನಿರ್ಮಿಸಿ ಕೊಡಬೇಕಾಗಿ ಸೆರಗೊಡ್ಡಿ ಪ್ರಾರ್ಥಿಸುತ್ತೇನೆ. ಇಲ್ಲವಾದರೆ ಈ ನರಕದಿಂದ ಮುಕ್ತರಾಗಲು ದಯಾ ಮರಣವನ್ನಾದರೂ ದಯಪಡಿಸಬೇಕಾಗಿ ಕೇಳಿಕೊಳ್ಳುತ್ತೇನೆ? ಎಂದು ಪತ್ರದಲ್ಲಿ ವಿವರವಾಗಿ ನೋವು ತೋಡಿಕೊಂಡಿದ್ದಾರೆ.

'10 ಮಂದಿ ಪೊಲೀಸರು ನಮ್ಮ ಸಂಸ್ಥೆಗೆ ಏಕಾಏಕಿ ಪ್ರವೇಶಿಸಿದ್ದಾರೆ. ಸಂತ್ರಸ್ತೆ ತಾಯಿಯನ್ನು 21 ದಿನಗಳ ಕಾಲ ಪೊಲೀಸರು ತಮ್ಮ ವಶದಲ್ಲಿರಿಸಿಕೊಂಡಿದ್ದನ್ನು ಏನೆಂದು ಭಾವಿಸೋಣ. ಸಂತ್ರಸ್ತೆ ತಾಯಿಗೂ ಮನೆ ಇಲ್ಲದಂತೆ ಮಾಡಿದ್ದಾರೆ. ನೊಂದ ತಾಯಿ, ಪತ್ರ ಬರೆಯುವುದನ್ನು ಬಿಟ್ಟು ಏನು ಮಾಡಲು ಸಾಧ್ಯ?' ಎಂದು ಒಡನಾಡಿ ಸಂಸ್ಥೆಯ ನಿರ್ದೇಶಕ ಪರಶು ಪ್ರಶ್ನಿಸಿದ್ದಾರೆ.

share
Next Story
X