ಡಾ.ಸಿ.ಎನ್.ಮಂಜುನಾಥ ಸೇರಿ ಮೂವರಿಗೆ ಹಂಪಿ ಕನ್ನಡ ವಿವಿ ನಾಡೋಜ ಪದವಿ
ಡಿ. 8ರಂದು ವಿವಿಯ ಘಟಿಕೋತ್ಸವ
ಡಿ. 8ರಂದು ವಿವಿಯ ಘಟಿಕೋತ್ಸವ
ಹೊಸಪೇಟೆ: ಹಂಪಿ ಕನ್ನಡ ವಿವಿ ಪ್ರತಿ ವರ್ಷ ನೀಡುವ ನಾಡೋಜ ಗೌರವ ಪದವಿಗೆ ಈ ವರ್ಷ ಸಾಹಿತ್ಯ ಮತ್ತು ಸಾಮಾಜಿಕ ಸೇವಾ ಕ್ಷೇತ್ರದ ಕೃಷ್ಣಪ್ಪ, ಜಿ., ಎಸ್.ಷಡಕ್ಷರಿ ಮತ್ತು ಆರೋಗ್ಯ ಕ್ಷೇತ್ರದಿಂದ ಡಾ.ಸಿ.ಎನ್.ಮಂಜುನಾಥ ಅವರರನ್ನು ಆಯ್ಕೆ ಮಾಡಲಾಗಿದೆ.
ಡಿಸೆಂಬರ್ 8ರಂದು ನಡೆಯುವ ವಿವಿಯ 31ನೇ ನುಡಿಹಬ್ಬ- ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಈ ಪದವಿಗಳನ್ನು ಪ್ರದಾನ ಮಾಡಲಿದ್ದಾರೆ.
ಸಂಸ್ಕೃತ ವಿವಿಯ ವಿಶ್ರಾಂತ ಕುಲಪತಿ ಡಾ.ಮಲ್ಲೇಪುರಂ ಜಿ. ವೆಂಕಟೇಶ್ ಅವರು ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಅವರು ಪಿಎಚ್ ಡಿ ಮತ್ತು ಎಂ.ಫಿಲ್ ಪದವಿಗಳನ್ನು ನೀಡಲಿದ್ದಾರೆ.
"ರಾಜ್ಯದ ಹಂಪಿ ಕನ್ನಡ ವಿಶ್ವವಿದ್ಯಾಲಯ ನೀಡುವ ಪ್ರತಿಷ್ಠಿತ ನಾಡೋಜ ಗೌರವಕ್ಕೆ ಪಾತ್ರರಾಗಿರುವ ನಾಡಿನ ಹೆಮ್ಮೆಯ ಸಾಧಕರಾದ ಶ್ರೀ ಡಾ.ಸಿ. ಎನ್. ಮಂಜುನಾಥ್, ಶ್ರೀ ಜಿ.ಕೃಷ್ಣಪ್ಪ, ಶ್ರೀ ಎಸ್. ಷಡಕ್ಷರಿಯವರಿಗೆ ಹಾರ್ದಿಕ ಅಭಿನಂದನೆಗಳು" : ಮುಖ್ಯಮಂತ್ರಿ @BSBommai pic.twitter.com/1d0SaYx7Tb
— CM of Karnataka (@CMofKarnataka) December 6, 2022
Next Story